spot_img
spot_img

ಕಿತ್ತೂರು ಉತ್ಸವ : ಕಿತ್ತೂರಲ್ಲಿ ದೀಪಾವಳಿ ಸಂಭ್ರಮ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಕ್ಡೋಬರ್ 23 ರಿಂದ ಮೂರು ದಿನಗಳ ಕಾಲ ನಡೆಯಲಿದೆ.
ಉತ್ಸವ ನಿಮಿತ್ತ ಐತಿಹಾಸಿಕ ಕಿತ್ತೂರು ಪಟ್ಟಣ ಬಣ್ಣ ಬಣ್ಣದ ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿದೆ. ವರ್ಣರಂಜಿತ ದೀಪಗಳ ಬೆಳಕಿನಿಂದ ಕೋಟೆ ಸೌಂದರ್ಯ ಹೆಚ್ಚಾಗಿದೆ.
ಕಿತ್ತೂರು ಕೋಟೆ, ಪ್ರಾಚ್ಯವಸ್ತು ಸಂಗ್ರಹಾಲಯ, ದೇವಸ್ಥಾನಗಳು, ರಾಣಿ ಚನ್ನಮ್ಮಾಜಿ ವೃತ್ತ, ಗುರುವಾರ ಪೇಟೆ, ಅರಳಿಕಟ್ಟೆ ವೃತ್ತ, ಸೋಮವಾರ ಪೇಟೆ, ಚನ್ನಮ್ಮಾಜಿ ವೃತ್ತ, ಗೊಂಬಿ ಗುಡಿ, ಕೇಂದ್ರ ಬಸ್‌ ನಿಲ್ದಾಣ ಸೇರಿದಂತೆ ನಾನಾ ಪ್ರದೇಶಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ.
6000 ಬಲ್ಬ್, 3000 ಎಲ್‌ಇಡಿ ಥ್ರೀಡಿ ಡಿಸೈನ್‌ ಲೈಟಿಂಗ್‌, 6000 ಲೈಟಿನ ಸರಗಳನ್ನು ಅಳವಡಿಸಲಾಗಿದೆ.
ಚೆನ್ನಮ್ಮ ಇತಿಹಾಸ ಮತ್ತು ಯುದ್ಧದಲ್ಲಿ ಭಾಗವಹಿಸಿದ ಸನ್ನಿವೇಶಗಳು ಸಾರುವ ವರ್ಣರಂಜಿತ ಚಿತ್ರಗಳನ್ನು ರಾಷ್ಟ್ರೀಯ ಹೆದ್ದಾರಿ ಗೋಡೆಗಳ ಮೇಲೆ ಬಿಡಿಸಲಾಗಿದೆ.
ನಾನಾ ಘಟನೆಗಳ ವರ್ಣರಂಜಿತ ಚಿತ್ರಗಳನ್ನು ಕಲಾವಿದ ಸಂತೋಷ ತುಬಾಕಿ ತಂಡ ರಚಿಸಿದೆ. ಕಿತ್ತೂರು ಸಂಸ್ಥಾನದ ನಂದಿ ಧ್ವಜದ ಚಿತ್ರವೂ ಗಮನ ಸೆಳೆಯುತ್ತಿದೆ.
ಚ.ಕಿತ್ತೂರು ಉತ್ಸವ-2024 ಮತ್ತು 200ನೇ ವಿಜಯೋತ್ಸವ ನಿಮಿತ್ತ ಪಟ್ಟಣಕ್ಕೆ ಸೋಮವಾರ ಆಗಮಿಸಿದ ವೀರಜ್ಯೋತಿ ರಥಯಾತ್ರೆಗೆ ಸ್ವಾಗತ ಕೋರಲಾಯಿತು. ಇಲ್ಲಿಯ ಚನ್ನಮ್ಮಾಜಿ ಅಶ್ವಾರೂಢ ಮೂರ್ತಿ ಎದುರು ತಾಲೂಕಾಡಳಿತ ಮತ್ತು ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಸ್ವಾಗತಿಸಿದರು.
ಚ. ಕಿತ್ತೂರು ಉತ್ಸವ ಮತ್ತು ವಿಜಯೋತ್ಸವ ಅಂಗವಾಗಿ ಗ್ರಾಮಕ್ಕೆ ಆಗಮಿಸಿದ ವೀರಜ್ಯೋತಿ ರಥಯಾತ್ರೆಗೆ ಶಾಸಕ ಬಾಬಾಸಾಹೇಬ ಪಾಟೀಲ ಸ್ವಾಗತ ಕೋರಿದರು. ನಂತರ ಮಾತನಾಡಿ, ‘‘ಬ್ರಿಟಿಷರ ವಿರುದ್ಧ ನಡೆದ ಯುದ್ಧದಲ್ಲಿ ಚನ್ನಮ್ಮಾಜಿ ವಿಜಯೋತ್ಸವಕ್ಕೆ ಇದೀಗ 200 ವರ್ಷಗಳು ತುಂಬಿವೆ. ಇದರ ಸವಿನೆನಪಿಗಾಗಿ ಅದ್ಧೂರಿಯಾಗಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ. ನಮ್ಮ ನಾಡು ವೀರತ್ವದ ಗುಣ ಹೊಂದಿದೆ. ಇಲ್ಲಿಶರಣಾಗತಿ ಬೇಡಿ ಬಂದವರಿಗೆ ರಕ್ಷಣೆ ನೀಡಿದೆ. ದಂಡೆದ್ದು ಬಂದವರಿಗೆ ಸೋಲಿನ ರುಚಿ ತೋರಿಸಿ ಹಿಮ್ಮೆಟ್ಟಿಸಿದೆ’’, ಎಂದರು. ಮೆರವಣಿಗೆಯಲ್ಲಿ ಮಹಿಳೆಯರು ಡೊಳ್ಳು ಬಾರಿಸಿ ಚನ್ನಮ್ಮನ ಅಭಿಮಾನ ಮೆರೆದರು. ಪ್ರತಿಯೊಬ್ಬರೂ ತಲೆಗೆ ಹಳದಿ ಪೇಟ ಧರಿಸಿ ಮೆರವಣಿಗೆ ಅಂದ ಹೆಚ್ಚಿದರು. ವಿವಿಧ ವಾದ್ಯಗಳು ರಂಗು ತುಂಬಿದವು. ಬೈಲಹೊಂಗಲ ತಹಸೀಲ್ದಾರ ಹನುಮಂತ ಶಿರಹಟ್ಟಿ, ಬಸವರಾಜ ಹುಬ್ಬಳ್ಳಿ, ಬಸವರಾಜ ಕೆರಕನ್ನವರ, ನಾನಾಸಾಹೇಬ ಪಾಟೀಲ, ಕಾಶಿನಾಥ ಇನಾಮದಾರ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಮಹಾದೇವ ಕೋಟಗಿ, ಶಿವಾನಂದ ದಿವಾಣದ, ಶ್ರೀಕಾಂತ ಹಡಗಿನಹಾಳ, ಮಹಾದೇವ ಮಡಿವಾಳರ, ಸುಭಾಷ ರುಮೋಜಿ, ಶಿವಾಜಿ ಮುತ್ತಗಿ, ಪ್ರಹ್ಲಾದ ಘಂಟಿ, ಮಹಾಂತೇಶ ದಿವಾಣದ, ಬಸವರಾಜ ಪೂಜೇರಿ, ಬಸನಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...