spot_img
spot_img

KL RAHUL SACRIFICE:ಕನ್ನಡಿಗ ಕೆ.ಎಲ್.ರಾಹುಲ್ ತ್ಯಾಗಕ್ಕೆ ಫ್ಯಾನ್ಸ್ ಮೆಚ್ಚುಗೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

KL Rahul:

ಹೌದು, ಬಾಂಗ್ಲಾ ನೀಡಿದ್ದ 228 ರನ್​ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್​ ಶರ್ಮಾ (41), ವಿರಾಟ್​ ಕೊಹ್ಲಿ (22), ಶ್ರೇಯಸ್​ ಅಯ್ಯರ್​ (15), ಅಕ್ಷರ್​ ಪಟೇಲ್​ (8) ವಿಕೆಟ್​ ಬೀಳುತ್ತಿದ್ದಂತೆ ಒತ್ತಡ ಹೆಚ್ಚಾಗತೊಡಗಿತು. ಆದರೆ ಆರಂಭಿಕರಾಗಿ ಬ್ಯಾಟಿಂಗ್​ಗೆ ಬಂದಿದ್ದ ಶುಭಮನ್​ ಗಿಲ್​ (101*) ಮತ್ತು KL RAHUL (41*)​ ಸಮಯೋಚಿತ ಬ್ಯಾಟಿಂಗ್​ ಮಾಡಿ ತಂಡವನ್ನು ಗೆಲುವಿನ ದಡಕ್ಕೆ ಕೊಂಡೊಯ್ದರು.

ರಾಹುಲ್​ಗೆ ಅರ್ಧಶತಕ ಮಾಡಿಕೊಳ್ಳುವ ಅವಕಾಶವಿದ್ದರೂ ಶುಭಮನ್​ ಗಿಲ್​ ಶತಕಕ್ಕಾಗಿ ತ್ಯಾಗ ಮಾಡಿದರು.ಚಾಂಪಿಯನ್ಸ್​ ಟ್ರೋಫಿ ಭಾಗವಾಗಿ ಬುಧವಾರ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿರುವುದು ಗೊತ್ತೇ ಇದೆ. ಆದರೆ ಈ ಪಂದ್ಯದಲ್ಲಿ KL RAHUL​ ಮಾಡಿರುವ ತ್ಯಾಗಕ್ಕೆ ಅಭಿಮಾನಿಗಳು ಶಹಬ್ಬಾಸ್ ಹೇಳಿದ್ದಾರೆ.ಗಿಲ್ 88ರನ್​ ಗಳಿಸಿದ್ದಾಗ KL RAHUL​ 33 ರನ್​ ಸಿಡಿಸಿದ್ದರು. ಈ ವೇಳೆ ತಂಡದ ಗೆಲುವಿಗೆ 19 ರನ್​ ಬೇಕಿದ್ದವು. ಆದರೆ ರಾಹುಲ್​ ತಮ್ಮ ಬ್ಯಾಟಿಂಗ್​ ವೇಗ ಕಡಿಮೆ ಮಾಡಿಕೊಂಡರು. ಗಿಲ್​ ಬ್ಯಾಟಿಂಗ್​ ವೇಗ ಹೆಚ್ಚಿಸಿಕೊಂಡು ಶತಕ ಬಾರಿಸಿದರು. ಇದರ ಬೆನ್ನಲ್ಲೇ ರಾಹುಲ್​ ಕುರಿತು ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Hardik Troll:ಎರಡು ವರ್ಷಗಳ ಹಿಂದೆ, 2023ರಲ್ಲಿ ಆಗಸ್ಟ್​ ತಿಂಗಳಿನಲ್ಲಿ ವೆಸ್ಟ್ ಇಂಡೀಸ್ ಮತ್ತು ಭಾರತ ನಡುವೆ ಟಿ20 ಪಂದ್ಯ ನಡೆದಿತ್ತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 159 ರನ್ ಗಳಿಸಿತ್ತು. ಬಳಿಕ ಈ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಕೇವಲ 17.5 ಓವರ್‌ಗಳಲ್ಲಿ ಗುರಿ ತಲುಪಿ ಗೆಲುವು ಸಾಧಿಸಿತ್ತು.

ನಿನ್ನೆಯ ಪಂದ್ಯದಲ್ಲಿ ರಾಹುಲ್​ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಇದ್ದಿದ್ದರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ. ಈ ಪಂದ್ಯದಲ್ಲಿ ರಾಹುಲ್​ ಔಟಾಗಿ ಹಾರ್ದಿಕ್ ಬ್ಯಾಟಿಂಗ್ ಮಾಡಲು ಬಂದಿದ್ದರೆ ಗಿಲ್​ಗೆ ಶತಕ ಮಾಡಲು ಬಿಡುತ್ತಿರಲಿಲ್ಲ ಎಂದು ಕಾಲೆಳೆದಿದ್ದಾರೆ.

ಹೀಗೆ ಫ್ಯಾನ್ಸ್​ ಟ್ರೋಲ್​ ಮಾಡುತ್ತಿರುವುದರ ಹಿಂದೆ ಕಾರಣವೂ ಇದೆ.ಪಂದ್ಯದಲ್ಲಿ ತಿಲಕ್ ವರ್ಮಾ (49*) ಮತ್ತು ಹಾರ್ದಿಕ್ ಪಾಂಡ್ಯ (20*) ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. ಆದರೆ ತಿಲಕ್ ವರ್ಮಾ ಅರ್ಧಶತಕ ಪೂರ್ಣಗೊಳಿಸಲು ಒಂದು ರನ್​ ಬೇಕಿತ್ತು. ಗೆಲುವಿಗೆ 2.1 ಓವರ್​ನಲ್ಲಿ 2 ರನ್​ ಬೇಕಿತ್ತು. ಈ ವೇಳೆ ಪಾಂಡ್ಯ ಸಿಕ್ಸರ್​ ಸಿಡಿಸಿ ಪಂದ್ಯ ಮುಗಿಸಿದ್ದರು. ತಿಲಕ್ ವರ್ಮಾ ಅರ್ಧಶತಕದ ಹೊಸ್ತಿಲಲ್ಲಿರುವಾಗಲೇ ಹಾರ್ದಿಕ್ ಸಿಕ್ಸರ್ ಬಾರಿಸಿ ಪಂದ್ಯ ಮುಗಿಸಿದ್ದು ಸರಿಯಲ್ಲ ಎಂಬ ಟೀಕೆಗಳು ಕೇಳಿಬಂದಿದ್ದವು.

 

ಇದನ್ನು ಓದಿರಿ :Dragon X Review: Was Pradeep Ranganathan Able To Win Hearts With Coming-Of-Age Drama? Find Out

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...

GRAPE CULTIVATION IN UNIVERSITY:ತೋಟದಲ್ಲಿ ನಡೆದಾಡುತ್ತಾ 65 ಬಗೆ ಬಗೆಯ ಹಣ್ಣುಗಳ ರುಚಿ ಸವಿಯಿರಿ!

Hyderabad News: ಅವಳಿ ನಗರದ ಎಲ್ಲೆಡೆಯಿಂದ GRAPE ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೈದಾನದೆಲ್ಲಡೆ ಸುತ್ತಾಡಲು ಮತ್ತು ಹಣ್ಣಿನ ಸುವಾಸನೆ ಆನಂದಿಸಲು ಅವಕಾಶ ಕಲ್ಪಿಸಲಾಗಿದೆ. ದೇಶಾದ್ಯಂತ...

ED SLAPS PENALTY ON BBC WS INDIA:FDI ನಿಯಮ ಉಲ್ಲಂಘನೆ

New Delhi News: ಬ್ರಿಟಿಷ್ ಬ್ರಾಡ್‌ಕಾಸ್ಟರ್‌ನ ಮೂವರು ನಿರ್ದೇಶಕರಿಗೆ, ಜಾರಿ ನಿರ್ದೇಶನಾಲಯವು ತಲಾ 1.14 ಕೋಟಿ ರೂ.ಗಿಂತ ಹೆಚ್ಚು ದಂಡ ವಿಧಿಸಿದೆ. ವಿದೇಶಿ ವಿನಿಮಯ ನಿರ್ವಹಣಾ...