spot_img
spot_img

ಉಡುಪಿಯ ಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಉಡುಪಿ : ಕೃಷ್ಣಮಠದ ರಥಬೀದಿಯಲ್ಲಿ ಬುಧವಾರ ಸಂಜೆ ರಥೋತ್ಸವದ ಮೂಲಕ ಮಳೆಗಾಲದ ನಂತರದ ನಿತ್ಯೋತ್ಸವಗಳಿಗೆ ಚಾಲನೆ ನೀಡಲಾಯಿತು.

ನಾಲ್ಕು ದಿನಗಳ ಕಾಲ ಕೃಷ್ಣನಗರಿ ಬೆಳಕಿನಲ್ಲಿ ಜಗಮಗಿಸಲಿದೆ. ಈ ಹಿನ್ನೆಲೆ 4 ದಿನಗಳ ಕಾಲ ನಡೆಯುವ ಲಕ್ಷ ದೀಪೋತ್ಸವವೂ ಆರಂಭವಾಯಿತು.

ಮಧ್ಯಾಹ್ನ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ತಮ್ಮ ಶಿಷ್ಯರೊಂದಿಗೆ ಸಂಪ್ರದಾಯದಂತೆ ರಥಬೀದಿಯಲ್ಲಿ ಅಟ್ಟಳಿಗೆಯ ಮೇಲೆ ಹಣತೆಗಳನ್ನು ಇಟ್ಟು ಲಕ್ಷದೀಪೋತ್ಸವಕ್ಕೆ ಮುಹೂರ್ತ ನಡೆಸಿದರು.

ಉಡುಪಿಯ ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಉತ್ಥಾನ ದ್ವಾದಶಿಯ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ಕ್ಷೀರಾಬ್ಧಿಯನ್ನು ಮಾಡಿ, ಅರ್ಘ್ಯವನ್ನು ನೀಡಿದರು. ನಂತರ ಲಕ್ಷದೀಪೋತ್ಸವದ ಅಂಗವಾಗಿ ಮಧ್ವ ಸರೋವರದಲ್ಲಿ ಪಾರ್ಥ ಸಾರಥಿ ರಥದ ಮಾದರಿಯ ತೆಪ್ಪದಲ್ಲಿ ಆಕರ್ಷಕ ತೆಪ್ಪದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರನ್ನಿಟ್ಟು ತೆಪ್ಪೋತ್ಸವ ನೆರವೇರಿಸಲಾಯಿತು.

ತದನಂತರ ಅಲಂಕೃತ ರಥಗಳಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರು ಹಾಗೂ ಅನಂತೇಶ್ವರ, ಚಂದ್ರೇಶ್ವರ ದೇವರನ್ನಿಟ್ಟು ರಥಬೀದಿಯ ಸುತ್ತಲೂ ವೈವಿಧ್ಯಮಯ ಲಕ್ಷ ದೀಪಗಳ ನಡುವೆ, ನಾದಸ್ವರ, ಪಂಚ ವಾದ್ಯ, ಚಂಡೆ ವಾದ್ಯಗಳೊಂದಿಗೆ ಆಕರ್ಷಕ ಸುಡುಮದ್ದು ಪ್ರದರ್ಶನದೊಂದಿಗೆ ತುಳಸಿ ಸಂಕೀರ್ಥನೆಯೊಂದಿಗೆ ರಥೋತ್ಸವವು ಅತ್ಯಂತ ವೈಭವದಿಂದ ಜರುಗಿತು. ನಂತರ ಮಧ್ವ ಮಂಟಪದಲ್ಲಿ ತೊಟ್ಟಿಲು ಪೂಜೆಯು ನಡೆಯಿತು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...