spot_img
spot_img

ವೀರಭದ್ರೇಶ್ವರ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹಾವೇರಿ: ಕಾರ್ತಿಕ ಅಮಾವಾಸ್ಯೆಯ ಹಿನ್ನೆಲೆ ಕಾರಡಗಿಯ ಐತಿಹಾಸಿಕ ವೀರಭದ್ರೇಶ್ವರ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಲಕ್ಷ ದೀಪೋತ್ಸವ ಆಚರಿಸಲಾಯಿತು.

ಸವಣೂರು ತಾಲೂಕಿನ ಕಾರಡಗಿಯ ಐತಿಹಾಸಿಕ ವೀರಭದ್ರೇಶ್ವರ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಲಕ್ಷ ದೀಪೋತ್ಸವದ ಸಂಭ್ರಮ ಮನೆ ಮಾಡಿತ್ತು. ಕಾರ್ತಿಕ ಅಮಾವಾಸ್ಯೆಯ ಪ್ರಯುಕ್ತ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ದೇವಸ್ಥಾನದ ಆವರಣದಲ್ಲಿ ಲಕ್ಷಾಂತರ ದೀಪ ಹಚ್ಚಿ ಸಂಭ್ರಮಿಸಿದರು.

ಕಾರ್ತಿಕೋತ್ಸವ ಹಿನ್ನೆಲೆಯಲ್ಲಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲಿ ಭಕ್ತರು ದೀಪ ಹಚ್ಚಿ ಕಾರ್ತಿಕೋತ್ಸವದ ಸಂಭ್ರಮ ಆಚರಿಸಿದರು. ಕಳೆದ ಎರಡು ವರ್ಷಗಳಿಂದ ಕಾರಡಗಿಯಲ್ಲಿ ಲಕ್ಷ ದೀಪೋತ್ಸವ ಆಚರಿಸಲಾಗುತ್ತಿದೆ.

ಕಾರಡಗಿ ವೀರಭದ್ರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ಭಕ್ತರು ಉತ್ತಮವಾಗಿ ಸ್ಪಂದಿಸಿದ್ದು, ಲಕ್ಷ ದೀಪೋತ್ಸವ ಯಶಸ್ವಿಯಾಗಿ ನಡೆಯಿತು.

ಭಕ್ತರು ಮನೆಯಿಂದ ಎಣ್ಣಿ ಬತ್ತಿಗಳನ್ನು ತಂದು ದೇವಸ್ಥಾನದ ಆವರಣದಲ್ಲಿ ದೀಪಗಳನ್ನು ಹಚ್ಚಿದರು. ಕೆಲವರು ಪಣತಿಗಳನ್ನು ತಂದು ಅದರಲ್ಲಿ ದೀಪ ಹಚ್ಚಿ ಸಂಭ್ರಮಿಸಿದರು. ಲಕ್ಷ ದೀಪೋತ್ಸವದ ನಿಮಿತ್ತ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಅಲ್ಲದೇ ವಿಶೇಷ ಪೂಜೆ ಸಲ್ಲಿಸಲಾಯಿತು.

ದೀಪಗಳ ಬೆಳಕಿನಲ್ಲಿ ದೇವಸ್ಥಾನದ ಆವರಣ ಕಂಗೋಳಿಸುತ್ತಿತ್ತು. ದೇವಸ್ಥಾನಕ್ಕೆ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿತ್ತು.

ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಸರತಿಯಲ್ಲಿ ನಿಂತು ನೆಚ್ಚಿನ ದೈವ ಕಣ್ತುಂಬಿಕೊಂಡರು. ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ಲಕ್ಷ ದೀಪೋತ್ಸವ ಆಚರಿಸಲಾಗುತ್ತದೆ.

ಸಂಜೆ ಏಳು ಗಂಟೆಗೆ ಆಗಮಿಸಿ ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡೆ. ಕಾರಡಗಿ ವೀರಭದ್ರೇಶ್ವರ ರಾಜ್ಯ ಸೇರಿದಂತೆ ಅಕ್ಕಪಕ್ಜದ ರಾಜ್ಯದ ಭಕ್ತರನ್ನು ಹೊಂದಿದ್ದಾನೆ. ವೀರಭದ್ರೇಶ್ವರ ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾ ಬಂದಿದ್ದಾನೆ. ದೇವಸ್ಥಾನಕ್ಕೆ ಪ್ರತಿ ಅಮಾವ್ಯಾಸೆಯಂದು ಬರುತ್ತೇನೆ ಎಂದು ಭಕ್ತೆ ಮಲ್ಲಮ್ಮ ತಿಳಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...