spot_img
spot_img

ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ವಿಜಯಪುರ: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವ್ ಆಗಬೇಕು ಎಂದು ವಕ್ಫ ಬೋರ್ಡ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಬೋರ್ಡ್ ನಿಂದ ರೈತರು, ಮಠ ಮಾನ್ಯಗಳಿಗೆ ನ್ಯಾಯ ಸಿಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿ ಸೋಮವಾರ‌ (ನ.04) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರೋಧಿಸಿ ಇಂದು ಕಿಸಾನ್ ಸಂಘದ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟದಲ್ಲಿ ಭಾಗಿಯಾಗುವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಜಮೀರ್ ರಾಜ್ಯದ ಎಲ್ಲ ಭೂಮಿ ವಕ್ಫ್ ಅಡಿಯಲ್ಲಿ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು.
ವಕ್ಫ್ ಬೋರ್ಡ್ ಕಾಯ್ದೆ ಸಂವಿಧಾನ ವಿರೋಧಿಯಾಗಿದೆ. ಸಂವಿಧಾನ ಉಳಿಸಿ ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವ್ ಆಗಬೇಕು. ರಾಜ್ಯದಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಅದಾಲತ್ ಮಾಡುತ್ತಿದ್ದಾರೆ. ಯಾವ ಕಾನೂನು ಅಡಿ ವಕ್ಫ್ ಅದಾಲತ್ ಮಾಡುತ್ತಿದ್ದಾರೆ? ಲ್ಯಾಂಡ್‌ ಜಿಹಾದ್ ಗೆ ಜಮೀರ್ ಮುಂದಾಗಿದ್ದಾರೆ.
ಇದನ್ನು ಸಹಿಸಲ್ಲ. ನ್ಯಾಯ ಸಿಗುವವರಿಗೂ ನಮ್ಮ ಹೋರಾಟ ನಡೆಯಲಿದೆ. ರೈತರಿಗೆ ನೀಡಿದ್ದ ನೋಟಿಸ್ ರದ್ದು ಮಾಡಬೇಕು. ಪಹಣಿಯಲ್ಲಿ ನಮೂದಾಗಿರುವ ವಕ್ಫ್ ಬೋರ್ಡ್ ಹೆಸರು ತೆಗೆಯಬೇಕು ಎಂದು ಒತ್ತಾಯಿಸಿದರು.
ಉಡುಪಿಯ ಶಿವಳ್ಳಿ ಎಂಬ ಗ್ರಾಮ ಸುಲ್ತಾನಪುರ ಗ್ರಾಮ ಎಂದು ದಿಶಾಂಕ ಆಯಪ್ ನಲ್ಲಿ ತೋರಿಸುತ್ತಿದೆ. ಇದರಿಂದ ಆತಂಕದ ವಾತಾವರಣ ಮನೆ ಮಾಡಿದೆ. ಐತಿಹಾಸಿಕ ಸ್ಮಾರಕಗಳು ಸಹ ವಕ್ಫ್ ಎಂದಾಗಿದೆ. ವಿಜಯಪುರದ ಡಿಸಿ, ಎಸ್ಪಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಇತರೆ ದೇವಸ್ಥಾನಗಳು ವಕ್ಫ್ ಎಂದಾಗಿದೆ. ದಾನದ ಮೂಲಕ ವಕ್ಫ್ ಗೆ ಬರಬೇಕು. ಆದರೆ, ಇವೆಲ್ಲಾ ಹೇಗೆ ವಕ್ಫ್ ಎಂದಾದವು ಎಂದು ಪ್ರಶ್ನಿಸಿದರು.
1974ರ ಗೆಜೆಟ್ ನೊಟಿಫಿಕೇಷನ್ ಸಂಪೂರ್ಣ ರದ್ದಾಗಬೇಕು. ಇದು ರದ್ದಾಗುವವರೆಗೂ ಹೋರಾಟ ಮಾಡುತ್ತೇವೆ. ಶಾಸಕ ಯತ್ನಾಳ ನೇತೃತ್ವದಲ್ಲಿ ನಡೆಯುವ ಅಹೋರಾತ್ರಿ ಧರಣಿಯಲ್ಲಿ ನಾನೂ‌ ಭಾಗಿಯಾಗುವೆ. ರಾಜ್ಯದ ಹಲವಾರು ದೇವಸ್ಥಾನಗಳು ವಕ್ಪ್ ಎಂದಾಗಿವೆ. ಇದು ಯಾವ ಷಡ್ಯಂತ್ರ ಎಂದು‌ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಫ್ ಉಲ್ಲೇಖ ಇಲ್ಲ. 1954-55ರಲ್ಲಿ ನೆಹರು ವಕ್ಫ್ ಸೇರಿಸಿದ್ದಾರೆ. ಇಲ್ಲಿ ಜಮೀನು ವಕ್ಫ್ ದ್ದು ಅಲ್ಲ. ಮಠಗಳಿಗೆ ಚಾಲುಕ್ಯರು ಹೊಯ್ಸಳರು, ಕಿತ್ತೂರು ರಾಣಿ ಚೆನ್ನಮ್ಮ ಇಲ್ಲಿನ ಜಮೀನು ಕೊಟ್ಟದ್ದು, ಇಂಥವನ್ನೂ ವಕ್ಫ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಷರಿಯತ್ ಕಾನೂನನ್ನು ರಾಜ್ಯದಲ್ಲಿ ತರಲು ಸಿದ್ದರಾಮಯ್ಯ ಹಾಗೂ‌ ಜಮೀರ್ ಹೊರಟಿದ್ದಾರೆ ಎಂದು ಆರೋಪಿಸಿ ಅವರು, ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು, ಲೋಕಸಭೆಯಲ್ಲಿ ಸಂವಿಧಾನ‌ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಕರ್ನಾಟಕದಲ್ಲಿ ಇದು ನಡೆಯಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...