spot_img
spot_img

LEOPARD CAPTURE OPERATION : ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಎರಡನೇ ದಿನವೂ ಮುಂದುವರೆದ ಚಿರತೆ ಸೆರೆ ಕಾರ್ಯಾಚರಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

ಇನ್ಫೋಸಿಸ್‌ ಕ್ಯಾಂಪಸ್​ನಲ್ಲಿ ಮಂಗಳವಾರ ಚಿರತೆ ಪ್ರತ್ಯಕ್ಷವಾಗಿದ್ದು, ಅದರ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇನ್ಫೋಸಿಸ್ ಅವರಣದಲ್ಲಿ ಚಿರತೆ ಸೆರೆ ಕಾರ್ಯಚರಣೆಯ ನೇತೃತ್ವ ವಹಿಸಿದ್ದಾರೆ. ನಗರದ ಹೆಬ್ಬಾಳು ಕೈಗಾರಿಕಾ ಪ್ರದೇದಲ್ಲಿ ಇರುವ ಇನ್ಫೋಸಿಸ್ ಅವರಣದಲ್ಲಿ ಮಂಗಳವಾರ ಕಾಣಿಸಿಕೊಂಡ ಚಿರತೆ ಸರೆ ಕಾರ್ಯಾಚರಣೆ ಎರಡನೇ ದಿನವೂ ಮುಂದುವರೆದಿದೆ. ಡ್ರೋನ್ ಕ್ಯಾಮರಾ ಮೂಲಕ ಚಿರತೆಯ ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಚಿರತೆ ಕಂಡುಬಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಳಿಕ ಮಂಗಳವಾರ ಬೆಳ್ಳಗೆಯಿಂದಲೇ ಅರಣ್ಯ ಇಲಾಖೆಯ ಸುಮಾರು 40 ಜನರ ತಂಡ ಕಾರ್ಯಚರಣೆ ಅರಂಭಿಸಿದೆ. ಆದರೆ‌ ಮಂಗಳವಾರ ಸಂಜೆ ವರೆಗೆ ಚಿರತೆ ಪತ್ತೆಯಾಗಿರಲಿಲ್ಲ.ಮೈಸೂರು ನಗರದ ಹೊರವಲಯದಲ್ಲಿರುವ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಸುಮಾರು 350 ಎಕರೆ ವಿಸ್ತೀರ್ಣದಲ್ಲಿ ಇರುವ ಇನ್ಫೋಸಿಸ್ ಕ್ಯಾಂಪಸ್​​ನಲ್ಲಿ‌ ಮಂಗಳವಾರ ಬೆಳಗಿನ ಜಾವ ಚಿರತೆಯೊಂದು ಕಾಣಿಸಿಕೊಂಡಿತ್ತು.

Operation continued on Wednesday:

ಮಂಗಳವಾರ ರಾತ್ರಿ ಇನ್ಫೋಸಿಸ್ ಕ್ಯಾಂಪಸ್​ನ ಅಯಕಟ್ಟಿನ ಜಾಗಗಳಲ್ಲಿ ಟ್ರ್ಯಾಪ್ ಕ್ಯಾಮರಾ ಹಾಗೂ ಎರಡು ಬೋನ್​ಗಳನ್ನು ಸಹ ಅಳವಡಿಸಲಾಗಿದೆ. ಆದರೆ ಮಂಗಳವಾರ ರಾತ್ರಿ ಚಿರತೆಯ ಸಂಚಾರ ಕ್ಯಾಂಪಸ್​ನ ಎಲ್ಲಿಯೂ ಕಂಡು ಬಂದಿಲ್ಲ.ಚಿರತೆ ಸೆರೆಗೆ ಎರಡನೇ ದಿನವು ಅರಣ್ಯ ಇಲಾಖೆ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಚರಣೆ ಆರಂಭಿಸಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಡ್ರೋನ್ ಕ್ಯಾಮರಾಗಳಿಗೆ ಚಿರತೆ ಓಡಾಟದ ದೃಶ್ಯ ಕಂಡುಬಂದಿದೆ. ಚಿರತೆ ಸೆರೆಗೆ ಡಿಸಿಎಫ್ ಪ್ರಭುಗೌಡ ಹಾಗೂ ಡಿಸಿಎಫ್ ಬಸವರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಬುಧವಾರ ಬೆಳಗೆಯಿಂದಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಚಿರತೆ ಕಾರ್ಯಪಡೆ ಹಾಗೂ ಪಶು ವೈದ್ಯರ ತಂಡ, ಅರಿವಳಿಕೆ ತಜ್ಞರ ಜೊತೆ ಕಾರ್ಯಾಚರಣೆ ಆರಂಭಿಸಿತ್ತು.

Note to personnel to be cautious:

ಯಾರೂ ಸಹ ಕ್ಯಾಂಪಸ್​​ನ ಒಳಗೆ ಓಡಾಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಸಿಬ್ಬಂದಿ, ಹೊರಗಿನಿಂದ ಬರುವವರನ್ನು ಭದ್ರತಾ ಸಿಬ್ಬಂದಿ ಕ್ಯಾಂಪಸ್ ಒಳಗೆ ಬಿಡುತ್ತಿಲ್ಲ. ಆಡಳಿತ ಅಧಿಕಾರಿಗಳು ನೌಕರರನ್ನು ಮನೆಯಿಂದಲೇ ಕಾರ್ಯ ನಿರ್ವಹಿಸಿ ಎಂದು ಸೂಚಿಸಲಾಗಿದೆ.350 ಎಕರೆ ವಿಸ್ತೀರ್ಣದ ಬೃಹತ್‌ ಇನ್ಫೋಸಿಸ್ ಕ್ಯಾಂಪಸ್ ಇದಾಗಿದ್ದು, ಸಾವಿರಾರು ಮಂದಿ‌ ದೇಶ, ವಿದೇಶಗಳಿಂದ ತರಬೇತಿಗೆ ಬಂದ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಜೊತೆಗೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಯೂ ಇದ್ದು, ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸಬೇಕು.‌ ಇಂದೂ ಸಹ ಹುಡುಕಾಟ ಮುಂದುವರೆದಿದ್ದು, ಅರಣ್ಯ ಇಲಾಖೆ ಡ್ರೋನ್ ಕ್ಯಾಮರಾ, ಟ್ರ್ಯಾಪ್ ಕ್ಯಾಮರಾ, ಬೋನ್​ಗಳು ಹಾಗೂ ನುರಿತ ಸಿಬ್ಬಂದಿ ಜೊತೆಗೆ ಚಿರತೆ ಕಾರ್ಯಪಡೆಯೂ ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಚಿರತೆಯು ಇನ್ಫೋಸಿಸ್ ಅವರಣದಲ್ಲಿ ಇರುವ ಸುಳಿವು ಡ್ರೋನ್ ಕ್ಯಾಮರಾದಲ್ಲಿ ಪತ್ತೆಯಾಗಿರುವ ಬಗ್ಗೆ ಕಾರ್ಯಾಚರಣೆಯಲ್ಲಿ ಇರುವ ಅಧಿಕಾರಿ ಒಬ್ಬರು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

 

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...