spot_img
spot_img

ವಿಶ್ವಕರ್ಮ ಯೋಜನೆಯಡಿ ಸಾಲ ಮಂಜೂರು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕಮ್ಮಾರರು, ಮೇಸ್ತ್ರಿಗಳು, ಕುಂಬಾರರು, ಬಡಗಿಗಳು ಮತ್ತು ದರ್ಜಿಗಳಂತಹ ಬಡ ಕುಶಲಕರ್ಮಿಗಳಿಗೆ ಅಕ್ಟೋಬರ್ 31ರವರೆಗೆ ಬ್ಯಾಂಕುಗಳು 1,751 ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿವೆ ಎಂದು ಸಂಸತ್ತಿಗೆ ಮಾಹಿತಿ ನೀಡಲಾಗಿದೆ.

ಕೈಗಳು ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಕುಶಲಕರ್ಮಿಗಳಿಗೆ ಎಂಡ್ – ಟು – ಎಂಡ್ ಬೆಂಬಲವನ್ನು ಒದಗಿಸಲು ಸರ್ಕಾರವು ಸೆಪ್ಟೆಂಬರ್ 17, 2023 ರಂದು ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಾರಂಭಿಸಿತು. ಈ ಸಾಂಪ್ರದಾಯಿಕ ಕುಶಲಕರ್ಮಿಗಳನ್ನು ‘ವಿಶ್ವಕರ್ಮರು’ ಎಂದು ಕರೆಯಲಾಗುತ್ತದೆ. 2023-2024ರಿಂದ 2027-28ರ ಹಣಕಾಸು ವರ್ಷದವರೆಗೆ ಈ ಯೋಜನೆಗೆ 13,000 ಕೋಟಿ ರೂ. ಮೀಸಲಿಡಲಾಗಿದೆ.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಜನ ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸಲು ಮತ್ತು ಅವರ ಅಗತ್ಯಗಳನ್ನು ಪೂರೈಸಲು ಸುಲಭವಾಗಿ ಸಾಲ ಸಿಗುವಂತೆ ಮಾಡಲು ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸಚಿವರು ಒದಗಿಸಿದ ಅಂಕಿ – ಅಂಶಗಳ ಪ್ರಕಾರ, ಪಿಎಂ ವಿಶ್ವಕರ್ಮ ಯೋಜನೆಯಡಿ 2.02 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ತೆರೆಯಲಾಗಿದ್ದು, ಒಟ್ಟು 1,751.20 ಕೋಟಿ ರೂ. ಸಾಲ ಬಟವಾಡೆ ಮಾಡಲಾಗಿದೆ.

ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್ಎಸ್​ಡಿಸಿ) ಸಂಗ್ರಹಿಸಿದ ಮಾಹಿತಿ ಅನ್ವಯ, ಪಿಎಂ ವಿಶ್ವಕರ್ಮ ಯೋಜನೆಗೆ ಇದುವರೆಗೆ 2.58 ಕೋಟಿ ಅರ್ಜಿಗಳು ಬಂದಿದ್ದು, ಯೋಜನೆ ಸಾಕಷ್ಟು ಪ್ರಗತಿ ಸಾಧಿಸಿದೆ. ಅದರಲ್ಲಿ 23.75 ಲಕ್ಷ ಅರ್ಜಿಗಳು ಮೂರು ಹಂತದ ಪರಿಶೀಲನೆ ನಂತರ ಯೋಜನೆಯ ಪ್ರಯೋಜನಗಳನ್ನು ಒದಗಿಸಲು ಯಶಸ್ವಿಯಾಗಿ ನೋಂದಾಯಿಸಲ್ಪಟ್ಟಿವೆ.

ಈ ಯೋಜನೆಯಡಿ ಸುಮಾರು 10 ಲಕ್ಷ ಜನರು ತಮ್ಮ ಉದ್ಯೋಗಕ್ಕೆ ಸೂಕ್ತವಾದ ಆಧುನಿಕ ಉಪಕರಣಗಳನ್ನು ಖರೀದಿಸಲು ಇ-ವೋಚರ್ ಗಳ ಮೂಲಕ 15,000 ರೂ.ಗಳವರೆಗೆ ಟೂಲ್ ಕಿಟ್ ಪ್ರೋತ್ಸಾಹ ಧನವನ್ನು ಪಡೆದಿದ್ದಾರೆ.

ಕುಶಲಕರ್ಮಿಗಳಿಗೆ ನೀಡಲಾಗುವ ಸಾಲಕ್ಕೆ ಶೇಕಡಾ 5 ರಷ್ಟು ಬಡ್ಡಿದರ ವಿಧಿಸಲಾಗುತ್ತದೆ. ಭಾರತ ಸರ್ಕಾರವು ಶೇಕಡಾ 8 ರಷ್ಟು ಬಡ್ಡಿ ಸಹಾಯಧನವನ್ನು ಒದಗಿಸುತ್ತದೆ. ಇದು ಒಟ್ಟಾರೆ ಸಾಲದ ವೆಚ್ಚವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.

ಸಾಲದ ಮೊದಲ ಕಂತನ್ನು 18 ತಿಂಗಳು ಮತ್ತು ಎರಡನೇ ಕಂತನ್ನು 30 ತಿಂಗಳುಗಳಲ್ಲಿ ಮರುಪಾವತಿ ಮಾಡಬಹುದು. ಪಿಎಂ ವಿಶ್ವಕರ್ಮ ಯೋಜನೆಯು 18 ವಿಭಿನ್ನ ಕುಶಲಕರ್ಮಿಗಳನ್ನು ಒಳಗೊಂಡಿದೆ. ಸಾಂಪ್ರದಾಯಿಕ ಕುಶಲಕರ್ಮಿ ಉದ್ಯಮಿಗಳು ಸ್ವಾವಲಂಬಿಗಳಾಗಲು ಸಹಾಯ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

PM MODI SPEECH : SC, ST, OBC ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ಹೆಚ್ಚಳ

New Delhi News: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿಂದು ಪ್ರPM MODI SPEECH. ಸರ್ಕಾರದ ಸಾಧನೆಗಳ ಕುರಿತು ಸುದೀರ್ಘ ಭಾಷಣ ಮಾಡಿದ ಅವರು,...

PM MODI PRAYAGRAJ VISIT : ಕುಂಭಮೇಳದಲ್ಲಿ ಭಾಗಿಯಾಗಿ ಪವಿತ್ರ ಸ್ನಾನ ಮಾಡಲಿರುವ ಪ್ರಧಾನಿ

Prayagraj, Uttar Pradesh News: ಮಹಾಕುಂಭ ಮೇಳದಲ್ಲಿ ಭಾಗಿಯಾಲು PM MODI PRAYAGRAJ VISIT ನೀಡುತ್ತಿದ್ದಾರೆ. ಈ ವೇಳೆ ಅವರು ಭದ್ರತೆಯ ನಡುವೆ ಸಾಧು -...

ICC CHAMPIONS TROPHY 2025 : 1.8 ಲಕ್ಷ ರೂಪಾಯಿ ಬೆಲೆಯ ಟಿಕೆಟ್ಗಳೂ ಖಾಲಿ!

India vs Pakistan, ICC Champions Trophy-2025: 2023ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಉಭಯ ತಂಡಗಳು ಎದುರುಬದುರಾಗಿದ್ದವು. ಇದೀಗ 15 ತಿಂಗಳ ನಂತರ ಎರಡೂ...

IPL 2025 RCB CAPTAIN : RCB ಮುಂದಿನ ನಾಯಕ ಯಾರು ಗೊತ್ತಾ?

IPL 2025 RCB Captain: IPL 2025 RCB CAPTAIN ಇತ್ತೀಚೆಗೆ ಜೆಡ್ಡಾದಲ್ಲಿ 18ನೇ ಆವೃತ್ತಿ ಹಿನ್ನೆಲೆ ಆಟಗಾರರ ಮೆಗಾ ಹರಾಜು ನಡೆದಿತ್ತು. ಇದರಲ್ಲಿ ಎಲ್ಲಾ...