spot_img
spot_img

LOKAYUKTA RAID : ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore/Raichur/Belagavi News:

ಬೆಂಗಳೂರಿನ ಹೆಬ್ಬಾಳದಲ್ಲಿರುವ ಬಿಬಿಎಂಪಿ ವಲಯದ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಅವರ ವಿದ್ಯಾರಣ್ಯಪುರದ ನಿವಾಸ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಸೆಕ್ರೆಟರಿ ಟಿ.ಕೆ.ರಮೇಶ್ ನಿವಾಸ, ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶಿವಲಿಂಗಯ್ಯ ಹಿರೇಮಠ ಅವರ ನಿವಾಸ, ಬೆಳಗಾವಿ ಉತ್ತರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಸಚಿನ್ ಮಾಂಡೆದ್, ಬೆಳಗಾವಿಯ ರಾಯಭಾಗದ ವೆಟರ್ನರಿ ಇನ್ಸ್‌ಪೆಕ್ಟರ್ ಸಂಜಯ್ ಅಣ್ಣಪ್ಪ ದುರ್ಗಣ್ಣವರ್ ನಿವಾಸ ಸೇರಿ ವಿವಿಧೆಡೆ LOKAYUKTA RAID ಮಾಡಿದ್ದಾರೆ.

ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 7 ಕಡೆಗಳಲ್ಲಿ LOKAYUKTA RAID ನಡೆಸಿದ್ದಾರೆ.

ಬೆಂಗಳೂರು ಹಾಗೂ ಬೆಳಗಾವಿಯ ಎರಡು ಸ್ಥಳಗಳು, ಚಿತ್ರದುರ್ಗ, ಬಾಗಲಕೋಟೆ, ರಾಯಚೂರು ಜಿಲ್ಲೆಯ ತಲಾ ಒಂದೊಂದು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಅಧಿಕಾರಿಗಳು ಶೋಧ ಕಾರ್ಯದಲ್ಲಿದ್ದಾರೆ. LOKAYUKTA RAID ಬೆಂಗಳೂರು ಸೇರಿದಂತೆ 5 ಜಿಲ್ಲೆಗಳ ವಿವಿಧೆಡೆ ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿ, ಪರಿಶೀಲನೆ ಮಾಡುತ್ತಿದ್ದಾರೆ.

Attack on GP Accounts Assistant Officer:

ರಾಯಚೂರು ಜಿ.ಪಂ.ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್​ ಅವರ ರಾಯಚೂರಿನ ಜವಾರ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Shock for two officers of Belgaum:

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ, ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮನೆ ಮೇಲೆ ದಾಳಿ ಮಾಡಲಾಗಿದೆ. ಅನಗೋಳ, ಹಾರೋಗೇರಿ,‌ ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆದಿದೆ.

Lokayukta attack on PDO:

ಬಾದಾಮಿ ತಾಲೂಕಿನ‌ ಹೂಲಗೇರಿ ಗ್ರಾ.ಪಂ ಪಿಡಿಒ ಶಿವಲಿಂಗಯ್ಯ ಹಿರೇಮಠ ಅವರಿಗೆ ಸಂಬಂಧಿಸಿದ ಮೂರು ಕಡೆ ದಾಳಿಯಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿನ ಮತ್ತು ನರಗುಂದದ ಮನೆ ಮೇಲೆ ಲೋಕಾಯುಕ್ತ ಡಿವೈಎಸ್​​ಪಿ ಸಿದ್ದೇಶ್ ನೇತೃತ್ವದ ತಂಡ ದಾಳಿ ಮಾಡಿ, ಪರಿಶೀಲನೆ ನಡೆಸಿದೆ.

ಇದನ್ನು ಓದಿರಿ : MOTHER AND DAUGHTER DEAD BODY : ಮಧ್ಯರಾತ್ರಿ ಮೃತದೇಹಗಳ ಆಗಮನ, ಡಿಸಿ ನಮನ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...