spot_img
spot_img

ಅರಣ್ಯ ಭೂಮಿ ವಶಕ್ಕೆ ದೀರ್ಘಾವಧಿ ಗುತ್ತಿಗೆ ಬಾಕಿ: ಸಚಿವ ಈಶ್ವರ್ ಖಂಡ್ರೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಅರಣ್ಯ ಭೂಮಿ ರಕ್ಷಣೆಗೆ ಹಲವು ಹಾಗೂ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ ಹಾಗೂ ದೀರ್ಘಾವಧಿ ಗುತ್ತಿಗೆ ಬಾಕಿ ಇರುವ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ.
ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಈಶ್ವರ್ ಬಿ ಖಂಡ್ರೆ ಅವರು ಶನಿವಾರ ಹೇಳಿದರು.
ನಾವು ಭೂಮಿಯ ಸ್ವರೂಪವನ್ನು ಬದಲಾಯಿಸಲಾಗುವುದಿಲ್ಲ. ಗುತ್ತಿಗೆ ಅವಧಿಯಲ್ಲಿ ಭೂ ಬಳಕೆಯನ್ನು ಬದಲಾಯಿಸಬಾರದು ಎಂಬುದು ಎಲ್ಲಾ ಗುತ್ತಿಗೆ ಒಪ್ಪಂದಗಳಲ್ಲಿನ ಇರುವ ಪ್ರಮುಖ ಷರತ್ತಾಗಿದೆ. ಅರಣ್ಯಾಧಿಕಾರಿಗಳು ಅರಣ್ಯ ಹೊದಿಕೆ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದ್ದು, ಅರಣ್ಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ, ಅರಣ್ಯ ಹೊದಿಕೆ ಹೆಚ್ಚಳಕ್ಕೆ ಇಚ್ಛಾಶಕ್ತಿಯನ್ನೂ ಪ್ರದರ್ಶಿಸಬೇಕು. ಹಾಗಾದರೆ ಮಾತ್ರ ಕೆಲವೇ ವರ್ಷದಲ್ಲಿ ರಾಜ್ಯದ ಅರಣ್ಯ ಹೊದಿಕೆ ಶೇ.33ರಷ್ಟು ಹೆಚ್ಚಳವಾಗಲಿದೆ. ಸರ್ಕಾರ ಗುತ್ತಿಗೆ ಪಡೆದಿರುವ ಹಾಗೂ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ವಶಪಡಿಸಿಕೊಳ್ಳಲು ಶ್ರಮಿಸುತ್ತಿದ್ದು, ಹೊಸದಾಗಿ ಒಂದು ಇಂಚು ಭೂಮಿಯನ್ನೂ ಅತಿಕ್ರಮಿಸಲು ಬಿಡುವುದಿಲ್ಲ ಎಂದು ತಿಳಿಸಿದರು.
ನಗರದಲ್ಲಿ ನಡೆದ ‘ಮೈಫಾರೆಸ್ಟ್’ 60ನೇ ವರ್ಷದ ಸಂಭ್ರಮಾಚರಣೆ ಹಾಗೂ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿ ರಕ್ಷಣೆಗೆ ಹಲವು ಹಾಗೂ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ ಹಾಗೂ ದೀರ್ಘಾವಧಿ ಗುತ್ತಿಗೆ ಬಾಕಿ ಇರುವ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ ಎಂದು ಹೇಳಿದರು.
ಬಳಿಕ ಮಾತನಾಡಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು., ಸುಮಾರು 7,000 ಎಕರೆ ಅರಣ್ಯ ಭೂಮಿಯನ್ನು ಗುತ್ತಿಗೆಗೆ ನೀಡಲಾಗಿದ್ದು, ಸರ್ಕಾರಕ್ಕೆ 2000 ಕೋಟಿ ರೂ. ಹಣ ಬರಬೇಕಿದೆ. ಕಾಫಿ ಮತ್ತು ರಬ್ಬರ್ ತೋಟಗಳಿಗೆ ಕೊಡಗು ಮತ್ತು ಬಿಆರ್‌ಟಿ ಅರಣ್ಯ ವಿಭಾಗಗಳಲ್ಲಿ ದೊಡ್ಡ ಮಟ್ಟದ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಭೂಮಿಯನ್ನು ಗುತ್ತಿಗೆ ಪಡೆದಿದ್ದವರು, ಇದೀಗ ಭೂಮಿಯ ಮಾಲೀಕರೆಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಕೆಲವರು ಗುತ್ತಿಗೆ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿದ್ದು, ಮರ ಮತ್ತು ಕಾಫಿ ತೋಟಗಳಲ್ಲಿ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇಗಳನ್ನು ನಿರ್ಮಾಣ ಮಾಡಿದ್ದಾರೆ. ಗುತ್ತಿಗೆ ಪಡೆದ ಭೂಮಿಯನ್ನು ಇತರರಿಗೆ ಮಾರಿದ್ದಾರೆ. ಆರ್ಥಿಕ ನಷ್ಟವನ್ನು ಉಲ್ಲೇಖಿಸಿ ಭೂಮಿಯನ್ನು ಇತರರಿಗೆ ಗುತ್ತಿಗೆ ನೀಡಿದ್ದಾರೆಂದು ತಿಳಿಸಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GALWAN VALLEY IN LEH LADAKH:ಭರದ ಕಾರ್ಯಾಚರಣೆ.

Leh (Ladakh) News: ಭಾರತೀಯ ಸೇನೆ ಮತ್ತು ಸ್ಥಳೀಯ ಮಧ್ಯಸ್ಥಗಾರರ ಸಹಯೋಗದಲ್ಲಿ ಅಧಿಕಾರಿಗಳು ಕಣಿವೆಯಲ್ಲಿ ಈ ಯೋಜನೆಗೆ ಮುಂದಾಗಿದ್ದು, ಸ್ಥಳೀಯ ಪ್ರವಾಸಿಗ ಆಕರ್ಷಿಣೀಯ ತಾಣವಾಗಿ ರೂಪಿಸುವ...

PINK SALT BENEFITS FOR HEALTH : ಪಿಂಕ್ ಉಪ್ಪಿನಿಂದ ಆರೋಗ್ಯಕ್ಕೆ ಹಲವು ಪ್ರಯೋಜನ

Pink Salt Benefits for Health News: ಹಿಮಾಲಯನ್ ಪಿಂಕ್ ರಾಕ್ SALT ಅಥವಾ ಪಿಂಕ್ ಉಪ್ಪು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ಹಲವು ಪ್ರಯೋಜನಗಳು ದೊರೆಯುತ್ತವೆ...

MACHINERY CAPITAL : ಕರ್ನಾಟಕವು ದೇಶದ ಯಂತ್ರೋಪಕರಣಗಳ ರಾಜಧಾನಿ

Bangalore News: ಭಾರತದ MACHINERY ಉದ್ಯಮದಲ್ಲಿ ಕರ್ನಾಟಕ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ತಿಳಿಸಿದರು.MACHINERY ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ...

SHAH JAHAN URUS: ಪ್ರವಾಸಿಗರಿಗೆ ಉಚಿತ ಪ್ರವೇಶ, ಬಿಗಿ ಭದ್ರತೆ.

Agra (Uttar Pradesh) News : ಉಚಿತ ಅಷ್ಟೇ ಅಲ್ಲ, ಪ್ರವಾಸಿಗರು ಚಕ್ರವರ್ತಿ ಷಹಜಹಾನ್ ಮತ್ತು ಬೇಗಂ ಮುಮ್ತಾಜ್ ಅವರ ನಿಜವಾದ ಸಮಾಧಿಗಳನ್ನು ವೀಕ್ಷಿಸಬಹುದಾಗಿದೆ.ಜನವರಿ 26,...