spot_img
spot_img

ಬಹುದಿನಗಳ ಬೇಡಿಕೆ : ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

spot_img
spot_img

Share post:

ಕುಂದಾಪುರ:  ತಿರುಪತಿ ಮತ್ತು ಉಡುಪಿ-ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್‌ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ ಎಂದು ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಸೇವೆಗೆ ಭಾರತೀಯ ರೈಲ್ವೆ ಸಮ್ಮತಿ ಸೂಚಿಸಿದೆ.

ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣದ ಮೂಲಕ ಮಂಗಳೂರಿಗೆ ಬರುತಿದ್ದ ಕಾಚಿಗುಡ-ಮಂಗಳೂರು ವಾರಕ್ಕೆರಡು ದಿನದ ರೈಲನ್ನು ಉಡುಪಿ ಕುಂದಾಪುರದ ಮೂಲಕ ಮುರುಡೇಶ್ವರಕ್ಕೆ ವಿಸ್ತರಣೆ ಮಾಡುವ ಸಂಸದರ ಕೋರಿಕೆಯನ್ನು ಮನ್ನಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಬುಧವಾರ ಮತ್ತು ಶನಿವಾರ ಸಂಜೆ 5 ಗಂಟೆಗೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಗ್ಗೆ 11 ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ. ಮುರುಡೇಶ್ವರದ ಮೂಲಕ ಕುಂದಾಪುರ, ಉಡುಪಿ, ಸುರತ್ಕಲ್‌, ಮೂಲ್ಕಿ ನಗರಗಳು, ಕೊಯಂಬತ್ತೂರು, ತಿರುಪತಿ, ಮಂತ್ರಾಲಯ ಸಮೀಪದ ದೊನೆ ಜಂಕ್ಷನ್‌ ಸೇರಿದಂತೆ ಹೈದರಾಬಾದ್‌ವರೆಗೆ ರೈಲು ಸಂಪರ್ಕ ದೊರಕಿದಂತಾಗಿದೆ.

ಪುಣ್ಯ ಕ್ಷೇತ್ರಗಳಿಗೆ ರೈಲು ಸಂಪರ್ಕ: ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಕರಾವಳಿಗೆ ರೈಲು ಘೋಷಣೆಯಾಗಬೇಕು ಎನ್ನುವ ಕಾರಣಕ್ಕೆ ಸತತವಾಗಿ ದಿಲ್ಲಿಯ ಅಧಿಕಾರಿಗಳ ಜತೆ ಸಭೆಯ ಮೇಲೆ ಸಭೆ ನಡೆಸಿದ ಪರಿಣಾಮ ವಿಜಯದಶಮಿ ಸಂದರ್ಭದಲ್ಲಿ ಈ ರೈಲಿನ ವಿಸ್ತರಣೆಗೆ ಆದೇಶ ದೊರಕಿದೆ. ಕರಾವಳಿಯ ಪ್ರತಿ ಮನೆಯಿಂದಲೂ ತಿರುಪತಿ ತೆರಳುವ ಅಸಂಖ್ಯಾತ ಭಕ್ತವರ್ಗವಿದ್ದು, ರೈಲಿನ ಅಲಭ್ಯತೆಯ ಕಾರಣದಿಂದ ಬಸ್‌ ಅಥವಾ ಬೆಂಗಳೂರು ತಲುಪಿ ಅಲ್ಲಿಂದ ಪ್ರಯಾಣ ಮಾಡ ಬೇಕಾದ ಪರಿಸ್ಥಿತಿಯಿತ್ತು.

ಸ್ವಾತಂತ್ರ್ಯದ 76 ವರ್ಷಗಳ ಬಳಿಕ ದಕ್ಷಿಣದ ಎಲ್ಲ ರಾಜ್ಯಗಳ ಜತೆ ಕೊಂಕಣ ರೈಲ್ವೆ ಮೂಲಕ ರೈಲು ಸಂಪರ್ಕ ಲಭಿಸಿದ್ದು, ಪುಣ್ಯ ಕ್ಷೇತ್ರ ತಿರುಪತಿಯನ್ನು ಉಡುಪಿ ಶ್ರೀಕೃಷ್ಣ, ಕೊಲ್ಲೂರು ಮೂಕಾಂಬಿಕಾ ದೇಗುಲದ ಮೂಲಕ ಮುರುಡೇಶ್ವರದವರೆಗೆ ನಾನಾ ಪುಣ್ಯಸ್ಥಳಗಳಿಗೆ ರೈಲು ಸಿಕ್ಕಂತಾಗಿದೆ ಎಂದು ಸಂಸದ ಶ್ರೀನಿವಾಸ್‌ ಪೂಜಾರಿ ತಿಳಿಸಿದ್ದಾರೆ.

ಮನವಿಗೆ ಅತ್ಯಂತ ಕ್ಷಿಪ್ರವಾಗಿ ಮನವಿಗೆ ಸ್ಪಂದಿಸಿದ ಭಾರತೀಯ ರೈಲ್ವೆಯ ಹಲವು ಅಧಿಕಾರಿಗಳಿಗೆ, ರೈಲ್ವೆ ರಾಜ್ಯ ಸಚಿವ ಸೋಮಣ್ಣ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರಿಗೆ ಅಭಾರಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ತಿರುಪತಿಗೆ ರೈಲು ಬೇಕೆನ್ನುವ ಕರಾವಳಿಯ ಮನೆ ಮನಗಳ ಬೇಡಿಕೆ ಈಡೇರಿಸಲು ಸಂಸದರ ಆರಂಭಿಸಿದ ಪ್ರಯತ್ನಕ್ಕೆ ತಿಂಗಳೊಳಗೆ ಯಶಸ್ಸು ಲಭಿಸಿದೆ. ಭಾರತದ ದಕ್ಷಿಣ ಭಾಗದ ಎಲ್ಲ ರಾಜ್ಯಗಳನ್ನೂ ಕೊಂಕಣ ಮಾರ್ಗದ ಮೂಲಕ ಬೆಸೆಯುವ ಕಾರ್ಯ ಸ್ವಾತಂತ್ರ್ಯದ 76 ವರ್ಷಗಳ ಬಳಿಕ ಸಂಸದರಿಂದ ನಡೆದಿದೆ ಎಂದು ಕುಂದಾಪುರ ರೈಲು ಹಿತರಕ್ಷಣಾ ಸಮಿತಿಯ ಪ್ರಥ್ವಿ ಕುಂದರ್‌ ಹೇಳಿದ್ದಾರೆ.

ತಿರುಪತಿ ಮತ್ತು ಕರಾವಳಿ ನಡುವೆ ರೈಲು ಬೇಕು ಎಂಬುದು ನಮ್ಮ ಹಲವು ದಶಕಗಳ ಪ್ರಯತ್ನವಾಗಿತ್ತು. ವಿಜಯ ಕರ್ನಾಟಕ ಹಲವು ಬಾರಿ ಗಮನಸೆಳೆದಿತ್ತು. ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ನಮ್ಮ ಬೇಡಿಕೆಯನ್ನು ಸಂಸದನಾದ ನೂರು ದಿನದಲ್ಲಿ ಈಡೇರಿಸುವ ಭರವಸೆ ನೀಡಿದ್ದರು. ಅದರಂತೆಯೇ ಇಂದು ತಿರುಪತಿಯ ಜತೆಗೇ ಉದ್ಯಮ ನಗರಿ ಹೈದರಾಬಾದ್‌ ಕೂಡ ಕರಾವಳಿಯ ಜತೆಗೆ ಬೆಸೆದಿದೆ. ವಾರಕ್ಕೊಂದು ದಿನ ಘೋಷಣೆಯಾಗಬೇಕಿದ್ದ ಹೊಸ ರೈಲಿನ ಬದಲು ವಾರಕ್ಕೆರಡು ದಿನದ ಕಾಚಿಗುಡ ರೈಲಿನ ವಿಸ್ತರಣೆ ಕೂಡ ಸಂಸದರ ಸಮರ್ಪಕ ನಡೆಯಾಗಿದ್ದು, ರೈಲು ಸೇವೆಗಳಲ್ಲಿ ಕ್ರಾಂತಿಕಾರ ಬದಲಾವಣೆಗೆ ಹೊರಟಿರುವ ಉಡುಪಿ ಸಂಸದ ಶ್ರೀ ಕೋಟ ಶ್ರೀನಿವಾಸ್‌ ಪೂಜಾರಿ ಅವರಿಗೆ ಕರಾವಳಿಯ ರೈಲು ಪ್ರಯಾಣಿಕರ ಪರವಾಗಿ ಅಭಿನಂದಿಸುತ್ತೇನೆ ಎಂದು ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಗಣೇಶ್‌ ಪುತ್ರನ್‌ ತಿಳಿಸಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...