spot_img
spot_img

LOST GOLD CHAIN RETURNED TO OWNER: ಮರಳಿ ವಾರಸುದಾರರಿಗೆ ತಲುಪಿಸಿದ CISF ಸಿಬ್ಬಂದಿ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mangalore News:

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳೆದು ಹೋಗಿದ್ದ ಬಾಲಕನ ಚಿನ್ನದ ಸರವನ್ನು ಸಿಐಎಸ್‌ಎಫ್ ಸಿಬ್ಬಂದಿ ತನಿಖೆ ಮಾಡಿ ಅದೇ ದಿನ ಹುಡುಕಿ ಕೊಟ್ಟಿದ್ದಾರೆ.ಮಹಿಳೆಯ ಕುಟುಂಬಸ್ಥರು ಬಳಿಕ ಏರ್ಪೋರ್ಟ್‌ಗೆ ಆಗಮಿಸಿ GOLD CHAINದ ಸರ ಪಡೆದು ತೆರಳಿದ್ದಾರೆ.

ಈ ಬಗ್ಗೆ ಸ್ವತಃ ರಚನಾ ಅವರೇ ವಿಡಿಯೋ ಮಾಡಿ “ಮಂಗಳೂರು ವಿಮಾನ ನಿಲ್ದಾಣದಲ್ಲಿ CISF ತಂಡ ಮಾಡಿದ ಶ್ಲಾಘನೀಯ ಕೆಲಸಕ್ಕೆ ನಾನು ಸಾಕ್ಷಿಯಾಗಲು ಬಯಸುತ್ತೇನೆ. ಅವರಿಗೆ ಹ್ಯಾಟ್ಸ್ ಆಫ್. ನಾನು ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಹತ್ತುತ್ತಿದ್ದೆ, ಅದು ಇಂಡಿಗೊದ ವಿಮಾನ. ನಾನು ಬೆಳಿಗ್ಗೆ 8.30ಕ್ಕೆ ವಿಮಾನ ನಿಲ್ದಾಣದಲ್ಲಿ ಇಳಿದಿದ್ದೆ, ಮತ್ತು 30 ನಿಮಿಷಗಳ ಅವಧಿಯಲ್ಲಿ, ಸರ ಕಾಣೆಯಾಗಿದೆ ಎಂದು ನಮಗೆ ಅರಿವಾಯಿತು. ಆಗ ನಾನು ನನ್ನ ಮಗನನ್ನು ತಪಾಸಣೆ ಮಾಡುತ್ತಿದ್ದ CISF ಸಿಬ್ಬಂದಿಗೆ ದೂರು ನೀಡಿದ್ದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ನಾನು ದೂರು ನೀಡಿದ್ದೆ ಮತ್ತು ಸಂಜೆ 7 ಗಂಟೆಯ ಹೊತ್ತಿಗೆ, ಅವರು ಸರ ತೆಗೆದುಕೊಂಡ ವ್ಯಕ್ತಿಯನ್ನು ಪತ್ತೆಹಚ್ಚಿದರು ಮತ್ತು ಅದೇ ದಿನ ನನ್ನ ಕುಟುಂಬ ಸದಸ್ಯರಿಗೆ ಸರವನ್ನು ಹಸ್ತಾಂತರಿಸಲಾಯಿತು. ಇಂದು ನಾನು ತುಂಬಾ ಭಾವುಕನಾಗಿದ್ದೆ, ಆದರೆ ಇದು ಒಂದು ಪವಾಡದಂತೆ ನಡೆದಿದೆ. ಇಂದು ಈ ಶೋಧ ಕಾರ್ಯಾಚರಣೆಯಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬ ವ್ಯಕ್ತಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ತುಂಬಾ ಧನ್ಯವಾದಗಳು. ಭಾರತವು ಇಂತಹ ತಂಡದೊಂದಿಗೆ ಉತ್ತಮ ಕೈಯಲ್ಲಿದೆ ಎಂದು ನಾನು ಹೇಳಬಲ್ಲೆ” ಎಂದಿದ್ದಾರೆ.

ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಮಗುವಿನ ಕಳೆದು ಹೋಗಿದ್ದ GOLD CHAINದ ಸರವನ್ನು ಸಿಐಎಸ್‌ಎಫ್ ಸಿಬ್ಬಂದಿ ವಾಪಸ್‌ ದೊರಕಿಸಿಕೊಟ್ಟಿದ್ದಾರೆ.

ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಆಗ ಏರ್ಪೋರ್ಟ್ ಮೇಲಂತಸ್ತಿನಲ್ಲಿ ಕಾರಿನಿಂದ ಇಳಿದು ಒಳಗೆ ಬರುವಾಗಲೇ ಮಗುವಿನ ಸರ ಬಿದ್ದು ಹೋಗಿರುವುದು ತಿಳಿದು ಬಂದಿದೆ. ಅಲ್ಲದೆ, ಆ ಸರ ವಾಹನವೊಂದರ ಚಾಲಕನಿಗೆ ಸಿಕ್ಕಿದ್ದು, ಆತ ಅದನ್ನು ತೆಗೆದುಕೊಂಡು ಹೋದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಆದ್ದರಿಂದ ಆ ವಾಹನದ ನಂಬರ್ ಮೂಲಕ ಚಾಲಕನ ಪತ್ತೆ ಮಾಡಿ ಪೊಲೀಸರು ಕರೆ ಮಾಡಿದ್ದರು. ಈ ವೇಳೆ, ಸರ ಬಿದ್ದು ಸಿಕ್ಕಿರುವುದನ್ನು ಒಪ್ಪಿಕೊಂಡ ಚಾಲಕ, ಅದನ್ನು ವಾರಸುದಾರರಿಗೆ ನೀಡುತ್ತೇನೆ ಎಂದು ಹೇಳಿದ್ದಾನೆ.ಜ.26ರಂದು ಬೆಳಗ್ಗೆ 8.30ಕ್ಕೆ ರಚನಾ ಮಾರ್ಲ ಎಂಬ ಮಹಿಳೆ ತಮ್ಮ ಮಗುವಿನೊಂದಿಗೆ ವಿಮಾನ ನಿಲ್ದಾಣದಲ್ಲಿ ಚೆಕ್ಕಿಂಗ್ ಆಗಿ ವಿಮಾನದ ಬಳಿ ಬರುತ್ತಿದ್ದರು.

ಈ ವೇಳೆ ಮಗುವಿನ ಕತ್ತಿನಲ್ಲಿ ಸರ ಇಲ್ಲದಿರುವುದು ಗಮನಕ್ಕೆ ಬಂದಿದೆ. ಆದರೆ ಹೊರಗೆ ಬಂದು ಸರ ಬಿದ್ದು ಹೋಗಿದೆಯೇ ಎಂದು ಪರಿಶೀಲನೆ ಮಾಡುವಷ್ಟು ಸಮಯವೂ ಇರಲಿಲ್ಲ. ಆದ್ದರಿಂದ ಅವರು ಏರ್ಪೋರ್ಟ್ ಸಿಐಎಸ್‌ಎಫ್‌ ಭದ್ರತಾ ಸಿಬ್ಬಂದಿಗೆ ಸರ ಬಿದ್ದುಹೋಗಿರುವ ಬಗ್ಗೆ ದೂರು ಕೊಟ್ಟು ಬೆಂಗಳೂರಿಗೆ ತೆರಳಿದ್ದರು.

ಇದನ್ನು ಓದಿರಿ : FREE FLIGHT TRAVEL FOR STUDENTS: ಬಳ್ಳಾರಿ ವೈಕಿಂಗ್ಸ್ ರೌಂಡ್ ಟೇಬಲ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಉಚಿತ ವಿಮಾನ ಪ್ರಯಾಣ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...