spot_img
spot_img

MAATRUTVA SURAKSHA ABHIYAAN : ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Raichur News:

ರಾಯಚೂರಿನಲ್ಲಿಂದು MAATRUTVA SURAKSHA ABHIYAAN ಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಪ್ರತಿ ತಿಂಗಳು ಎರಡು ಬಾರಿ ಬಾಣಂತಿಯರ ಆರೋಗ್ಯ ತಪಾಸಣೆಗಾಗಿಯೂ ಶಿಬಿರ ಆಯೋಜಿಸಲಾಗುವುದು. ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ದಿನೇಶ ಗೂಂಡೂರಾವ್, “ತಾಯಂದಿರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ ಆಗಿದೆ.

ಗುಣಮಟ್ಟದ ಸೇವೆ ನೀಡುವ ಸಲುವಾಗಿ MAATRUTVA SURAKSHA ABHIYAAN ಶುರು ಮಾಡಿದ್ದೇವೆ. ರಾಜ್ಯಾದ್ಯಂತ ಈ ಯೋಜನೆ ತಾಲೂಕು, ಜಿಲ್ಲೆಯಲ್ಲಿ ನಡೆಯಲಿದೆ. ರಾಯಚೂರು ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕಾಗಿದೆ. 1 ಲಕ್ಷಕ್ಕೆ 64 ಬಾಣಂತಿಯರು ಸಾವು ಆಗುತ್ತಿದೆ ಎನ್ನುವುದು ಸೂಚ್ಯಂಕದಿಂದ ವರದಿಗಳು ಹೇಳುತ್ತಿವೆ.

ಇವುಗಳನ್ನು ಕಡಿಮೆ ಮಾಡುವ ಪ್ರಯತ್ನ ಹಾಗೂ ಈ ಮರಣ ಸಂಖ್ಯೆ ಶೂನ್ಯಕ್ಕೆ ತರಬೇಕಾಗಿದೆ‌” ಎಂದರು. ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.  ಗರ್ಭಿಣಿಯರ ಸಾವುಗಳ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ MAATRUTVA SURAKSHA ABHIYAAN ಕ್ಕೆ ರಾಯಚೂರಿನಲ್ಲಿ ಇಂದು ಚಾಲನೆ ನೀಡಲಾಯಿತು.

Each barangay’s health should be tracked:

“ಎಲ್ಲಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಸಂಬಂಧಿಸಿದ ವೈದ್ಯರ ಭರ್ತಿ ಮಾಡುವುದು ನಡೆದಿದೆ. ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಎಷ್ಟು ಕೆಲಸ ಮಾಡಿದರು ಆರೋಗ್ಯ ಇಲಾಖೆಯಲ್ಲಿ ಇನ್ನೂ ಕೆಲಸ ಇರುತ್ತದೆ. ಜನರ ಜೀವಕ್ಕೆ ಸಂಬಂಧಿಸಿದ ಇಲಾಖೆ ಅಂದರೆ ಅದು ಆರೋಗ್ಯ ಇಲಾಖೆ. ರಾಯಚೂರು ಜಿಲ್ಲೆಯಲ್ಲಿ ಸಬ್​ ಡಿವಿಷನ್ ಆಸ್ಪತ್ರೆ ಮಾಡಲು ಯೋಜನೆ ರೂಪಿಸಿದ್ದೇವೆ”.

MAATRUTVA SURAKSHA ABHIYAAN ದ ಮುಖಾಂತರ ಅಪಾಯದಲ್ಲಿ ಇರುವ ಗರ್ಭಿಣಿಯರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತೆ. ಗರ್ಭಿಣಿಯರನ್ನು ಮಾನಸಿಕ ಹಾಗೂ ದೈಹಿಕವಾಗಿ ರೆಡಿ ಮಾಡುವುದೇ MAATRUTVA SURAKSHA ABHIYAAN ದ ಉದ್ದೇಶವಾಗಿದೆ. ಮೊದಲ ಮತ್ತು ಮೂರನೇ ತ್ರೈಮಾಸಿಕ ತಪಾಸಣೆ ಕಡ್ಡಾಯ ಆಗಬೇಕು.

“ಗ್ಯಾರಂಟಿ ಯೋಜನೆಗೆ 55 ಸಾವಿರ ಕೋಟಿ ರೂ. ಖರ್ಚು ಆಗಿದೆ. ಅನ್ನಭಾಗ್ಯ, ಎರಡು ಸಾವಿರ ನೇರವಾಗಿ ಜನರಿಗೆ ಅನುಕೂಲ ಆಗುತ್ತಿದೆ. ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಕಮಿಷನ್ ಇಲ್ಲ. ವಿರೋಧ ಪಕ್ಷದವರು ಆರೋಪ ಮಾಡುತ್ತಾರೆ. ಯಾವುದೂ ಮಾಡಬೇಕು ಅದೂ ಮಾಡಬೇಕು ಎಂದು ವಿಪಕ್ಷಗಳಿಗೆ ಸಚಿವ ದಿನೇಶ್ ಗುಂಡೂರಾವ್​ ಟಾಂಗ್ ನೀಡಿದರು”.

ಪ್ರತಿ ಬಾಣಂತಿಯರ ಆರೋಗ್ಯ ಟ್ರ್ಯಾಕ್​ ಮಾಡಬೇಕು. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ವೈದ್ಯರು ಇಲ್ಲದೇ ಬಾಣಂತಿ ಸಾವು ಆಯ್ತು. ಪ್ರಸೂತಿ ತಜ್ಞರು ಆಸ್ಪತ್ರೆಯಲ್ಲಿ ಇರಬೇಕು. ತಾಲೂಕು ಆಸ್ಪತ್ರೆಯಲ್ಲಿ ದಿನದ 24 ಗಂಟೆ ಚಿಕಿತ್ಸೆ ಸಿಗಬೇಕು. ತಾಲೂಕು ಆಸ್ಪತ್ರೆ ಹೆಚ್ಚಿನ ಸೇವೆಗಳು ಸಿಗುವಂತೆ ಮಾಡುವ ಪ್ರಯತ್ನ ನಡೆದಿದೆ.

ತಾಲೂಕು ಆಸ್ಪತ್ರೆಗಳು ಮಿನಿ ಜಿಲ್ಲಾಸ್ಪತ್ರೆಯಂತೆ ಇರಬೇಕು. ಅದಕ್ಕೆ ಸಿಎಂ ಸಿದ್ದರಾಮಯ್ಯ ಸಹ ಹೇಳಿದ್ದಾರೆ. ಅದಕ್ಕಾಗಿ ನಮ್ಮ ಪ್ರಯತ್ನ ಮುಂದುವರೆದಿದೆ ಎಂದು ತಿಳಿಸಿದರು.

ಇದನ್ನು ಓದಿರಿ : IHOLE BUILDING : ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ ಬ್ಲಾಕ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...