spot_img
spot_img

MAATRUTVA SURAKSHA ABHIYAAN : ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ

spot_img
spot_img

Share post:

Raichur News:

ರಾಯಚೂರಿನಲ್ಲಿಂದು MAATRUTVA SURAKSHA ABHIYAAN ಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಪ್ರತಿ ತಿಂಗಳು ಎರಡು ಬಾರಿ ಬಾಣಂತಿಯರ ಆರೋಗ್ಯ ತಪಾಸಣೆಗಾಗಿಯೂ ಶಿಬಿರ ಆಯೋಜಿಸಲಾಗುವುದು. ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ದಿನೇಶ ಗೂಂಡೂರಾವ್, “ತಾಯಂದಿರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ ಆಗಿದೆ.

ಗುಣಮಟ್ಟದ ಸೇವೆ ನೀಡುವ ಸಲುವಾಗಿ MAATRUTVA SURAKSHA ABHIYAAN ಶುರು ಮಾಡಿದ್ದೇವೆ. ರಾಜ್ಯಾದ್ಯಂತ ಈ ಯೋಜನೆ ತಾಲೂಕು, ಜಿಲ್ಲೆಯಲ್ಲಿ ನಡೆಯಲಿದೆ. ರಾಯಚೂರು ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕಾಗಿದೆ. 1 ಲಕ್ಷಕ್ಕೆ 64 ಬಾಣಂತಿಯರು ಸಾವು ಆಗುತ್ತಿದೆ ಎನ್ನುವುದು ಸೂಚ್ಯಂಕದಿಂದ ವರದಿಗಳು ಹೇಳುತ್ತಿವೆ.

ಇವುಗಳನ್ನು ಕಡಿಮೆ ಮಾಡುವ ಪ್ರಯತ್ನ ಹಾಗೂ ಈ ಮರಣ ಸಂಖ್ಯೆ ಶೂನ್ಯಕ್ಕೆ ತರಬೇಕಾಗಿದೆ‌” ಎಂದರು. ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.  ಗರ್ಭಿಣಿಯರ ಸಾವುಗಳ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ MAATRUTVA SURAKSHA ABHIYAAN ಕ್ಕೆ ರಾಯಚೂರಿನಲ್ಲಿ ಇಂದು ಚಾಲನೆ ನೀಡಲಾಯಿತು.

Each barangay’s health should be tracked:

“ಎಲ್ಲಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಸಂಬಂಧಿಸಿದ ವೈದ್ಯರ ಭರ್ತಿ ಮಾಡುವುದು ನಡೆದಿದೆ. ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಎಷ್ಟು ಕೆಲಸ ಮಾಡಿದರು ಆರೋಗ್ಯ ಇಲಾಖೆಯಲ್ಲಿ ಇನ್ನೂ ಕೆಲಸ ಇರುತ್ತದೆ. ಜನರ ಜೀವಕ್ಕೆ ಸಂಬಂಧಿಸಿದ ಇಲಾಖೆ ಅಂದರೆ ಅದು ಆರೋಗ್ಯ ಇಲಾಖೆ. ರಾಯಚೂರು ಜಿಲ್ಲೆಯಲ್ಲಿ ಸಬ್​ ಡಿವಿಷನ್ ಆಸ್ಪತ್ರೆ ಮಾಡಲು ಯೋಜನೆ ರೂಪಿಸಿದ್ದೇವೆ”.

MAATRUTVA SURAKSHA ABHIYAAN ದ ಮುಖಾಂತರ ಅಪಾಯದಲ್ಲಿ ಇರುವ ಗರ್ಭಿಣಿಯರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತೆ. ಗರ್ಭಿಣಿಯರನ್ನು ಮಾನಸಿಕ ಹಾಗೂ ದೈಹಿಕವಾಗಿ ರೆಡಿ ಮಾಡುವುದೇ MAATRUTVA SURAKSHA ABHIYAAN ದ ಉದ್ದೇಶವಾಗಿದೆ. ಮೊದಲ ಮತ್ತು ಮೂರನೇ ತ್ರೈಮಾಸಿಕ ತಪಾಸಣೆ ಕಡ್ಡಾಯ ಆಗಬೇಕು.

“ಗ್ಯಾರಂಟಿ ಯೋಜನೆಗೆ 55 ಸಾವಿರ ಕೋಟಿ ರೂ. ಖರ್ಚು ಆಗಿದೆ. ಅನ್ನಭಾಗ್ಯ, ಎರಡು ಸಾವಿರ ನೇರವಾಗಿ ಜನರಿಗೆ ಅನುಕೂಲ ಆಗುತ್ತಿದೆ. ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಕಮಿಷನ್ ಇಲ್ಲ. ವಿರೋಧ ಪಕ್ಷದವರು ಆರೋಪ ಮಾಡುತ್ತಾರೆ. ಯಾವುದೂ ಮಾಡಬೇಕು ಅದೂ ಮಾಡಬೇಕು ಎಂದು ವಿಪಕ್ಷಗಳಿಗೆ ಸಚಿವ ದಿನೇಶ್ ಗುಂಡೂರಾವ್​ ಟಾಂಗ್ ನೀಡಿದರು”.

ಪ್ರತಿ ಬಾಣಂತಿಯರ ಆರೋಗ್ಯ ಟ್ರ್ಯಾಕ್​ ಮಾಡಬೇಕು. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ವೈದ್ಯರು ಇಲ್ಲದೇ ಬಾಣಂತಿ ಸಾವು ಆಯ್ತು. ಪ್ರಸೂತಿ ತಜ್ಞರು ಆಸ್ಪತ್ರೆಯಲ್ಲಿ ಇರಬೇಕು. ತಾಲೂಕು ಆಸ್ಪತ್ರೆಯಲ್ಲಿ ದಿನದ 24 ಗಂಟೆ ಚಿಕಿತ್ಸೆ ಸಿಗಬೇಕು. ತಾಲೂಕು ಆಸ್ಪತ್ರೆ ಹೆಚ್ಚಿನ ಸೇವೆಗಳು ಸಿಗುವಂತೆ ಮಾಡುವ ಪ್ರಯತ್ನ ನಡೆದಿದೆ.

ತಾಲೂಕು ಆಸ್ಪತ್ರೆಗಳು ಮಿನಿ ಜಿಲ್ಲಾಸ್ಪತ್ರೆಯಂತೆ ಇರಬೇಕು. ಅದಕ್ಕೆ ಸಿಎಂ ಸಿದ್ದರಾಮಯ್ಯ ಸಹ ಹೇಳಿದ್ದಾರೆ. ಅದಕ್ಕಾಗಿ ನಮ್ಮ ಪ್ರಯತ್ನ ಮುಂದುವರೆದಿದೆ ಎಂದು ತಿಳಿಸಿದರು.

ಇದನ್ನು ಓದಿರಿ : IHOLE BUILDING : ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ ಬ್ಲಾಕ್

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...