spot_img
spot_img

MAHA KUMBH : ಮಹಾಕುಂಭಮೇಳದಲ್ಲಿ 10 ದಿನದಲ್ಲಿ 10 ಕೋಟಿ ಜನರಿಂದ ಪವಿತ್ರ ಸ್ನಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Prayagraj News:

ಪ್ರಯಾಗ್​ ರಾಜ್​ ಭೇಟಿ ನೀಡುತ್ತಿರುವ ಯಾತ್ರಾರ್ಥಿಗಳ ಸಂಖ್ಯೆ ನಿರಂತರವಾಗಿ ಏರಿಕೆ ಕಾಣುತ್ತಿದ್ದು, ನಿತ್ಯ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಜನವರಿ 13 ರಿಂದ ಆರಂಭವಾಗಿರುವ ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಕಾರ್ಯಕ್ರಮದಲ್ಲಿ ಅಸಂಖ್ಯಾತ ಜನರು ಗಂಗಾ, ಯಮುನಾ ಮತ್ತು ಪೌರಣಿಕ ಸರಸ್ವತಿ ನದಿ ಸೇರುವ ಸಂಗಮದಲ್ಲಿ ಪವಿತ್ರ ಸ್ನಾನ ನಡೆಸುತ್ತಿದ್ದು, 10 ದಿನಗಳಿಂದ ಸಾಗುತ್ತಿರುವ ಈ ಕಾರ್ಯಕ್ರಮದಲ್ಲಿ 10 ಕೋಟಿ ಜನರು ಸ್ನಾನ ಮಾಡಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ಈ ಮೈಲಿಗಲ್ಲು ಮುಟ್ಟಿದೆ ಎಂದು ಸರ್ಕಾರ ತಿಳಿಸಿದೆ.   ಉತ್ತರ ಪ್ರದೇಶದ ಪ್ರಯಾಗ್​ ರಾಜ್​ನಲ್ಲಿ ನಡೆಯುತ್ತಿರುವ MAHA KUMBH ಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಇದುವರೆಗೆ 10 ಕೋಟಿ ಯಾತ್ರಾರ್ಥಿಗಳು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

Constantly increasing number of pilgrims:

MAHA KUMBH ಮೇಳ ಆರಂಭಕ್ಕೆ ಮೊದಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಸರ್ಕಾರವೂ, ಈ ವರ್ಷದ ಈ ಬೃಹತ್​ ಧಾರ್ಮಿಕ ಕಾರ್ಯಕ್ರಮದಲ್ಲಿ 45 ಕೋಟಿ ಜನರು ಭೇಟಿ ನೀಡಬಹುದು ಎಂದು ಅಂದಾಜಿಸಿದೆ. ಪ್ರಯಾಗ್​ ರಾಜ್​ ಭೇಟಿ ನೀಡುತ್ತಿರುವ ಯಾತ್ರಾರ್ಥಿಗಳ ಸಂಖ್ಯೆ ನಿರಂತರವಾಗಿ ಏರಿಕೆ ಕಾಣುತ್ತಿದ್ದು, ಪ್ರತಿನಿತ್ಯ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡುತ್ತಿದ್ದಾರೆ.

ಈ ಸಂಖ್ಯೆ ಕೋಟಿಗಳನ್ನು ದಾಟಿದೆ. ಇದೀಗ 10 ಕೋಟಿ ತಲುಪುವ ಮೂಲಕ MAHA KUMBHಗಮನಾರ್ಹ ಮೈಲಿಗಲ್ಲು ಮುಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.ಪ್ರಯಾಗ್​ ರಾಜ್​​ಗೆ ಭೇಟಿ ನೀಡುತ್ತಿರುವ ಭಕ್ತರು ಅತ್ಯುತ್ಸಾಹದಿಂದ ಬೇಟಿ ನೀಡುತ್ತಿದ್ದು, ದೇಶ ಮಾತ್ರವಲ್ಲದೇ ವಿದೇಶಗಳಿಂದ ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ನಡೆಸುತ್ತಿದ್ದಾರೆ. ಗುರುವಾರ ಒಂದೇ ದಿನ ಮಧ್ಯಾಹ್ನ 12ರ ಹೊತ್ತಿಗೆ 10 ಲಕ್ಷ ಕಲ್ಪವಸಿಗಳು ಸೇರಿದಂತೆ 30 ಲಕ್ಷ ಜನರು ಸ್ನಾನ ನಡೆಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

3.5 Crore People Bathe on Sankranti Day:

ಕಳೆದ 10 ದಿನಗಳ ಹಿಂದೆ ಆರಂಭವಾದ ಮಹಾ ಕುಂಭ ಮೇಳದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ನಾನ ಮಾಡಿದ್ದು, ಮಕರ ಸಂಕ್ರಾಂತಿಯಂದು. ಅಂದು ಒಂದೇ ದಿನ 3.5 ಕೋಟಿ ಜನರು ಸ್ನಾನ ನಡೆಸಿದ್ದು, ಪುಷ್ಯ ಪೂರ್ಣಿಮಾ ಹಬ್ಬದಂದು 1.7 ಕೋಟಿ ಜನರು ಭಾಗಿಯಾಗಿದ್ದರು. ಇಷ್ಟು ಅಪಾರ ಪ್ರಮಾಣದಲ್ಲಿ ಪ್ರಯಾಗ್​ ರಾಜ್​ಗೆ ಜನರು ಭೇಟಿ ನೀಡುತ್ತಿದ್ದರೂ ನಗರದ ದೈನಂದಿನ ಜನ ಜೀವನದ ಮೇಲೆ ಯಾವುದೇ ಒತ್ತಡ ಉಂಟಾಗಿಲ್ಲ. ಪವಿತ್ರ ಸ್ನಾನಕ್ಕೆ ವಿಶೇಷವಾದ ದಿನಗಳಲ್ಲಿ ಮಾತ್ರ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದು, ಶಾಲೆ, ಉದ್ಯಮಗಳು ಸಾಮಾನ್ಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಲಾಗಿದೆ.

ಇದನ್ನು ಓದಿರಿ : MYSTERIOUS DEATH IN RAJOURI : ಜಮ್ಮುವಿನಲ್ಲಿ ಒಂದೇ ಗ್ರಾಮದ 17 ಜನರ ನಿಗೂಢ ಸಾವು

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...

KIDNEY FAILURE SYMPTOMS:ನಿಮ್ಮನ್ನು ನಿರಂತರವಾಗಿ ಈ ಸಮಸ್ಯೆಗಳು ಕಾಡುತ್ತಿವೆಯೇ?

Kidney Failure Symptoms News: ಮೂತ್ರಪಿಂಡಗಳು ಹಾನಿಗೊಳಗಾದ ನಂತರ ಡಯಾಲಿಸಿಸ್ ಅಥವಾ ಮೂತ್ರಪಿಂಡ ಕಸಿ ಮಾಡುವುದನ್ನು ಬಿಟ್ಟು ಬೇರೆ ಯಾವುದೇ ದಾರಿಯಿಲ್ಲ. ವೈದ್ಯಕೀಯ ತಜ್ಞರು ತಿಳಿಸುವಂತೆ...

HOW TO MAKE IDLI RAVA:ಈ ರವಾದಿಂದ ಇಡ್ಲಿಗಳು ತುಂಬಾ ಸಾಫ್ಟ್.

How to Make Idli Rave News: IDLI RAVA ಮಾಡಲು ರವೆ ಮುಖ್ಯವಾಗಿರುತ್ತದೆ. ಅದಕ್ಕಾಗಿಯೇ ಅನೇಕರು ಮಾರುಕಟ್ಟೆಗೆ ಹೋದಾಗ ಹೆಚ್ಚಿನ ಪ್ರಮಾಣದಲ್ಲಿ IDLI RAVA...

WOMAN DONATES 35 YEARS OF SAVINGS:35 ವರ್ಷದ ಉಳಿತಾಯದ ಹಣವನ್ನು ಶಿಕ್ಷಣ ಸಂಸ್ಥೆಗೆ ದಾನ ಮಾಡಿದ ಮಹಿಳೆ.

Tirupati (Andhra Pradesh) News: ರೇಣಿಗುಂಟದ ಸಿ.ಮೋಹನ ದಾನ ಮಾಡಿದ WOMAN. ಇವರು ವಿಶ್ವಸಂಸ್ಥೆಯ ಅಭಿವೃದ್ಧಿ ಮತ್ತು ನಿರ್ವಹಣೆ ವಲಯದಲ್ಲಿ ಕೊಸೊವೊ, ಅಲ್ಬೇನಿಯಾ, ಯೆಮೆನ್, ಸೌದಿ...