spot_img
spot_img

MAHAKUMBHMELA : ತಿಥಿ ಕಾರ್ಯದ ವೇಳೆ ನಗುನಗುತ್ತ ಎಂಟ್ರಿ ಕೊಟ್ಟ..!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Prayagraj news :

ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ (Prayagraj) ನಡೆಯುತ್ತಿರುವ MAHAKUMBHMELA ಕಾಲ್ತುಳಿತ (Maha Kumbh stampede) ಸಂಭವಿಸಿತ್ತು. ಈ ದುರಂತದಲ್ಲಿ ಮನೆಯ ಸದಸ್ಯನೊಬ್ಬ ನಿಧನರಾಗಿದ್ದಾರೆ ಅಂದುಕೊಂಡ ಕುಟುಂಬ, ದಿನಕಾರ್ಯಕ್ಕೆ ಮುಂದಾಗಿತ್ತು. ಆದರೆ ಆತ, ತಿಥಿ ಕಾರ್ಯದ ದಿನ ಮನೆಗೆ ಎಂಟ್ರಿ ನೀಡಿ ಅಚ್ಚರಿ ಮೂಡಿಸಿದ್ದಾನೆ. ಖುಂಟಿ ಗುರು ಬದುಕಿ ಬಂದಿರುವ ವ್ಯಕ್ತಿ.

MAHAKUMBHMELA ಜನವರಿ 28 ರಂದು ಮೌನಿ ಅಮಾವಾಸ್ಯೆಯ ಸ್ನಾನಕ್ಕೆ ಹೋಗ್ತೀನಿ ಎಂದು ಗುರು ಹೊರಟಿದ್ದ. ಬಳಿಕ ಆತ ಮನೆಗೆ ಹಿಂತಿರುಗಿ ಬಂದಿರಲಿಲ್ಲ. ಆತನ ಸಂಪರ್ಕಿಸಲು ನಡೆಸಿದ್ದ ಪ್ರಯತ್ನ ಕೂಡ ವಿಫಲವಾಗಿತ್ತು. ಹೀಗಾಗಿ ಮೌನಿ ಅಮಾವಾಸ್ಯೆಯ ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡಿದ್ದಾನೆ ಎಂದು ಕುಟುಂಬ ನಂಬಿತ್ತು. ಖುಂಟಿ ಗುರು ಮೂಲತಃ ಪ್ರಯಾಗರಾಜ್ ನಿವಾಸಿ.

ಪ್ರಯಾಗರಾಜ್​​ನ ಝೀರೋ ರೋಡ್ ಏರಿಯಾದ ಚಹ್​ಚಂದ್ ಗಾಲಿ ನಿವಾಸಿ. ಸಣ್ಣ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ. ಜನವರಿ 29 ರಂದು ನಡೆದ ಕಾಲ್ತುಳಿತದಲ್ಲಿ ಸುಮಾರು 30 ಭಕ್ತರು ನಿಧನರಾಗಿದ್ದಾರೆ. 60 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, MAHAKUMBHMELA ಆರಂಭವಾಗಿ ಇಲ್ಲಿಯವರೆಗೆ ಒಟ್ಟು 50 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ತಿಳಿಸಿದೆ.

2 ವಾರ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತ ನಿಧನ ಆಗಿರಬಹುದು ಅಂದುಕೊಂಡ ಕುಟುಂಬ, ಕಾರ್ಯಗಳನ್ನ ನೆರವೇರಿಸಿತ್ತು. ಕೊನೆಯ 13ನೇ ದಿನದ ತಿಥಿ ಕಾರ್ಯದ ವೇಳೆ ಖುಂಟಿ ಗುರು ಮನೆಗೆ ಎಂಟ್ರಿ ನೀಡಿದ್ದಾನೆ. ಆತನ ನೋಡುತ್ತಿದ್ದಂತೆಯೇ ಮನೆಯವರೆಲ್ಲ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.

ಇದನ್ನು ಓದಿರಿ : Chandrababu Naidu, Nitish Kumar Support Waqf Bill

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...