spot_img
spot_img

MAHAMASTAKABHISHEKA : ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ರಾಜ್ಯಪಾಲರಿಂದ ಚಾಲನೆ

spot_img
spot_img

Share post:

Hubli News:

ವರೂರು ಕ್ಷೇತ್ರದಲ್ಲಿ ಬುಧವಾರ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ MAHAMASTAKABHISHEKAಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ವಿಶ್ವಶಾಂತಿಗಾಗಿ ಇಂದಿನಿಂದ MAHAMASTAKABHISHEKA, ಸುಮೇರು ಪರ್ವತ ಲೋಕಾರ್ಪಣೆ ಒಂದು ಐತಿಹಾಸಿಕ ಕಾರ್ಯಕ್ರಮ. ರಾಷ್ಟ್ರಸಂತ ಆಚಾರ್ಯ ಶ್ರೀಗುಣಧರ ನಂದಿ ಮಹಾರಾಜರ ನೇತೃತ್ವದಲ್ಲಿ ಒಳ್ಳೆಯ ಕಾರ್ಯಕ್ರಮ ಇದಾಗಿದೆ. ವರೂರು ಗ್ರಾಮದಲ್ಲಿ ಅತ್ಯಂತ ವಿಶಾಲವಾದ ಪ್ರದೇಶದಲ್ಲಿ ಸುಮೇರು ಪರ್ವತ ನಿರ್ಮಾಣ ಮಾಡಲಾಗಿದೆ.

ಇದೊಂದು ಅತ್ಯಂತ ಪುಣ್ಯ ಕ್ಷೇತ್ರ ಎಂದು ಹೇಳಿದರು. ಸತ್ಯ, ಅಹಿಂಸಾ ಮಾರ್ಗದಲ್ಲಿ ನಡೆಯುವ ಧರ್ಮ ಜೈನ ಧರ್ಮ. ಸತ್ಯ ಮಾರ್ಗದಲ್ಲಿ ಮೋಕ್ಷ ಕಾಣಬಹುದು ಎಂಬ ಸಾರ ಸಾರುತ್ತದೆ. ಜೈನ ತೀರ್ಥಂಕರರು ಮಾನವೀಯ ಮೌಲ್ಯಗಳ ಎತ್ತಿ ಹಿಡಿದಿದ್ದಾರೆ ಎಂದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ನಾಡಿನ ಅನೇಕ ಸಾಧು ಸಂತರು ಇಲ್ಲಿ ನೆರೆದಿದ್ದಾರೆ. ಧರ್ಮ ಹಾಗೂ ಮೋಕ್ಷಕ್ಕಾಗಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಧರ್ಮ ಜಾಗೃತಿಗೆ ಇದೊಂದು ಮಾದರಿ ಕಾರ್ಯಕ್ರಮವಾಗಿದೆ ಎಂದರು.

ಜೈನ ಧರ್ಮ ಉಚ್ಛ ಮಟ್ಟದ ಸಂಸ್ಕಾರ ನೀಡುತ್ತದೆ. ವ್ಯಸನ ಮುಕ್ತ ಜೊತೆಗೆ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ದಾರಿ ದೀಪವಾಗಿದೆ. ಸಾಂಸ್ಕೃತಿಕ ಪ್ರಾಚೀನಕ್ಕೆ ಈ ಧರ್ಮ ಸೇರಿದೆ. ಜೈನ ಧರ್ಮ ಪರೋಪಕಾರಿಯಲ್ಲಿ ಕೈಲಾಸ ಕಾಣುತ್ತದೆ. ಭಗವಾನ್ ಮಹಾವೀರರು ನಾಡಿನ ವಿಶ್ವ ಶಾಂತಿಗಾಗಿ ಸಂದೇಶ ಸಾರಿದ್ದಾರೆ. ಪಂಚಕಲ್ಯಾಣ ಮಹೋತ್ಸವ ಹಾಗೂ ಸಮೇರ ಪರ್ವತ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಆಶಿಸಿದರು.

ಸತ್ಯ, ಅಹಿಂಸಾ, ಧರ್ಮ‌ ಮಾರ್ಗದಲ್ಲಿ ನಡೆಯುವ ಮೂಲಕ ಜೈನ ಸಮಾಜ ಮಾದರಿಯಾಗಿದೆ. ತೀರ್ಥಂಕರರು ಮಾನವ ಕಲ್ಯಾಣಕ್ಕೆ ಜನಿಸಿದ ದೇವರಾಗಿದ್ದಾರೆ. ಇಂತಹ ಮಹಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಪಾವನರಾಗುವಂತೆ ಮಾಡಿದ್ದಾರೆ. ರಾಜ್ಯಪಾಲರಾದ ನಂತರ ರಾಜ ಭವನದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಯಾರೇ ವಿದೇಶಿಗರು ಬಂದರೂ ಅವರಿಗೆ ಸಸ್ಯಾಹಾರ ನೀಡಲಾಗುತ್ತಿದೆ ಎಂದು ಹೇಳಿದರು.

ವಿಶ್ವಶಾಂತಿಗೆ, ಸಫಲತೆಗೆ ನಾವು ಜೈನ ಸಮಾಜದ ಸಿದ್ಧಾಂತ ಪಾಲಿಸೋಣ. ಭಾರತೀಯ ಸಂಸ್ಕೃತಿಯ ಪರಿಸರ, ಪ್ರಾಣಿ, ಪ್ರಕೃತಿಯನ್ನು ಪೂಜಿಸಲಾಗುತ್ತದೆ. ಈಗ ಪರಿಸರ ಅಸಮತೋಲನವಾಗಿ ನಾಶವಾಗುತ್ತಿದೆ. ಅದನ್ನು ಸಂರಕ್ಷಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಸತ್ಯ, ಅಹಿಂಸಾ, ಧರ್ಮ‌ ಮಾರ್ಗದಲ್ಲಿ ನಡೆಯುವ ಮೂಲಕ ಜೈನ ಸಮಾಜ ಮಾದರಿಯಾಗಿದೆ.

ತೀರ್ಥಂಕರರು ಮಾನವ ಕಲ್ಯಾಣಕ್ಕೆ ಜನಿಸಿದ ದೇವರಾಗಿದ್ದಾರೆ. ಇಂತಹ ಮಹಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಪಾವನರಾಗುವಂತೆ ಮಾಡಿದ್ದಾರೆ. ರಾಜ್ಯಪಾಲರಾದ ನಂತರ ರಾಜ ಭವನದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಯಾರೇ ವಿದೇಶಿಗರು ಬಂದರೂ ಅವರಿಗೆ ಸಸ್ಯಾಹಾರ ನೀಡಲಾಗುತ್ತಿದೆ ಎಂದು ಹೇಳಿದರು. ಈ ಹಿಂದೆ ಶ್ರೀಗಳ ಜನ್ಮ ಶತಮಾನದ ಕಾರ್ಯಕ್ರಮಕ್ಕೆ ಮತ್ತು ಸುಮೇರು ಪರ್ವತ ನಿರ್ಮಾಣದ ವೇಳೆಯೂ ಆಗಮಿಸಿದ್ದೆ.

17 ನೇ ವಯಸ್ಸಿನಲ್ಲಿ ಬ್ರಹ್ಮಚಾರಿ, 27ಕ್ಕೆ ಆಚಾರ್ಯರಾಗಿ ಗುಣಧರ ನಂದಿ ಶ್ರೀಗಳು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಬಡವರಿಗೆ ಶಿಕ್ಷಣ, ಆರೋಗ್ಯ, ಆಧ್ಯಾತ್ಮಿಕ ಸೇರಿದಂತೆ ಎಲ್ಲ ಕಾರ್ಯವನ್ನು ಮಾಡುತ್ತಿದ್ದಾರೆ. MAHAMASTAKABHISHEKA, ಪಂಚ ಕಲ್ಯಾಣ, ನವಗ್ರಹ ಇತ್ಯಾದಿ ಮಾಡಿದ್ದಾರೆ. ನಾವು ಸಂತರಾಗಲು ಸಾಧ್ಯವಿಲ್ಲ. ಆದರೆ ಅವರ ಸಂಪರ್ಕಕ್ಕೆ ಬಂದು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಇದನ್ನು ಓದಿರಿ : AMBIGARA CHOUDAYYA MANTAP : ಅಂಬಿಗರ ಚೌಡಯ್ಯ ಐಕ್ಯ ಮಂಟಪ ಅಭಿವೃದ್ಧಿಗಾಗಿ ಸ್ವಾಮೀಜಿಗೆ ಪಟ್ಟಾಭಿಷೇಕ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...