spot_img
spot_img

Mahatma Gandhi Photo Exhibition : ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Suvarna Soudha news  in Belagavi

ಕಲಾಪ ವೀಕ್ಷಣೆಗೆ suvarna soudha ಬರುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು ಮಹಾತ್ಮ ಗಾಂಧೀಜಿ ಅವರ ಚಿತ್ರಗಳನ್ನೂ ಕಂಡು ಇತಿಹಾಸವನ್ನು ಮೆಲುಕು ಹಾಕುತ್ತಿದ್ದಾರೆ.ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ suvarna soudha ದಲ್ಲಿ ಮಹಾತ್ಮ ಗಾಂಧೀಜಿ ಅವರ ಇಡೀ ಜೀವನ ಸಾರುವ ಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ.

ದೆಹಲಿಯ ಗಾಂಧಿ ಮ್ಯೂಸಿಯಂನಿಂದ ಈ ಫೋಟೋಗಳನ್ನು ತರಲಾಗಿದ್ದು, ಗಾಂಧೀಜಿಯ ಇಡೀ ಜೀವನವನ್ನು ಫೋಟೋಗಳಲ್ಲಿ ನೋಡಬಹುದು.ಈ ಐತಿಹಾಸಿಕ ಅಧಿವೇಶನಕ್ಕೆ ಈಗ ಶತಮಾನದ ಸಂಭ್ರಮ. ಹಾಗಾಗಿ, ರಾಜ್ಯ ಸರ್ಕಾರ ವರ್ಷವಿಡೀ ‘ಗಾಂಧಿ ಭಾರತ’ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರ ಭಾಗವಾಗಿ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೆಆರ್‌ಐಡಿಎಲ್ ವತಿಯಿಂದ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಅವರ ವಿಶೇಷ ಫೋಟೋಗಳ ಪ್ರದರ್ಶನ ಆಯೋಜಿಸಲಾಗಿದೆ.

ಬೆಳಗಾವಿಯಲ್ಲಿ 1924ರ ಡಿ.26, 27ರಂದು ನಡೆದ ಕಾಂಗ್ರೆಸ್ ಅಧಿವೇಶನ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ.

ಗಾಂಧೀಜಿ ಹುಟ್ಟಿದ ಮನೆ, ಕಲಿತ ಶಾಲೆ, ಚಳುವಳಿಯಲ್ಲಿ ಪಾಲ್ಗೊಂಡಿದ್ದು, ಮಗುವನ್ನು ಮುದ್ದಾಡುತ್ತಿರುವುದೂ ಸೇರಿ ವಿವಿಧ ಫೋಟೋಗಳನ್ನು ನಾಡಿನ ವಿವಿಧೆಡೆಯಿಂದ ಆಗಮಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕಣ್ತುಂಬಿಕೊಂಡು, ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಡುತ್ತಿದ್ದಾರೆ.

ಸುವರ್ಣ ವಿಧಾನಸೌಧದ ನೆಲಮಹಡಿ ಮತ್ತು ವಿದ್ಯಾರ್ಥಿಗಳು ಕಲಾಪ ವೀಕ್ಷಿಸಲು ತೆರಳುವ ಮಾರ್ಗದಲ್ಲಿ 130 ಅಪರೂಪದ ಫೋಟೋಗಳನ್ನು ಪ್ರದರ್ಶನಕ್ಕಿಡಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ವೀಣಾ ಹೆಗಡೆ “ಸುವರ್ಣ ಸೌಧದೊಳಗೆ ನಾವು ಬರುತ್ತಿದ್ದಂತೆ ಗಾಂಧೀಜಿ ಫೋಟೋಗಳನ್ನು ನೋಡಿದಾಗ ಅವರ ಚಳುವಳಿ ನಮ್ಮ ಕಣ್ಮುಂದೆ ಬಂತು.

ಅದೇ ರೀತಿ ಮಕ್ಕಳ ಮೇಲೆ ಅವರಿಗಿದ್ದ ಪ್ರೀತಿ ತಿಳಿಯಿತು. ಅವರ ಇಡೀ ಜೀವನ ಒಮ್ಮೆ ಸ್ಮೃತಿ ಪಟಲದ ಮೇಲೆ ಬಂದು ಹೋಯಿತು. ಗಾಂಧಿ ಅವರ ಅಹಿಂಸೆ, ಸತ್ಯ, ಸರಳತೆ ಮಾರ್ಗ ನನಗೆ ಪ್ರೇರಣೆ” ಎಂದರು.ಕೆಂಗಾನೂರ ಸರ್ಕಾರ ಪ್ರೌಢಶಾಲೆ ಶಿಕ್ಷಕ ಮಡಿವಾಳಯ್ಯ ಪೂಜೇರ ಮಾತನಾಡಿ, “ಕಲಾಪ ವೀಕ್ಷಣೆಗೆ ನಮ್ಮ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದೇವೆ. ಇಲ್ಲಿ ಗಾಂಧಿ ಅವರ ಜೀವನ ಚರಿತ್ರೆ ಸಾರುವ ಫೋಟೋಗಳನ್ನು ಮಕ್ಕಳು ತುಂಬಾ ಆನಂದದಿಂದ ವೀಕ್ಷಿಸಿದರು.

ಒಂದೆಡೆ ಕಲಾಪ ವೀಕ್ಷಣೆ ಮಾಡಿದರೆ, ಮತ್ತೊಂದೆಡೆ ಬಾಪೂಜಿ ವಿಚಾರಧಾರೆ ತಿಳಿಯುವ ಸುವರ್ಣ ಅವಕಾಶವೂ ಸಿಕ್ಕಿದ್ದು, ಗಾಂಧೀಜಿ ವ್ಯಕ್ತಿತ್ವದಿಂದ ಪ್ರೇರಿತರಾಗಿ ನಮ್ಮ ಮಕ್ಕಳು ಅವರಂತೆ ದೊಡ್ಡ ಸಾಧನೆ ಮಾಡಲಿ ಎಂಬುದು ನಮ್ಮ ಆಶಯ” ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, “1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮ ಗಾಂಧೀಜಿ ವಹಿಸಿದ್ದರು. ಹಾಗಾಗಿ, ಅವರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಸೌಧದಲ್ಲಿ ಫೋಟೋಗಳ ಪ್ರದರ್ಶನ ಏರ್ಪಡಿಸಿದ್ದೇವೆ. ಫೋಟೋ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಪೂಜಿ ವಿಚಾರಧಾರೆಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು‌.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...