spot_img
spot_img

ಬೆಂಗಳೂರಲ್ಲಿ ಮಖಾನ ಮಹೋತ್ಸವ

spot_img
spot_img

Share post:

ಬೆಂಗಳೂರು: ಮಖಾನ ಪ್ರಯೋಜನಗಳ ಕುರಿತು ಸಂಶೋಧನೆ ಸಹ ನಡೆಯುತ್ತಿದೆ. ಜನರು ಮಖಾನ ಬಗ್ಗೆ ಹೆಚ್ಚು ಒಲವು ತೋರಿಸಿ, ಅದರ ತಿನಿಸುಗಳನ್ನು ಸೇವಿಸಬೇಕು ಎಂದು ಬಿಹಾರದ ಡಿಸಿಎಂ ಸಾಮ್ರಾಟ್ ಚೌಧರಿ ಮನವಿ ಮಾಡಿದ್ದಾರೆ.

ಮಖಾನ ಬೆಳೆ ಹಾಗೂ ಅದರಿಂದ ತಯಾರಿಸುವ ತಿನಿಸನ್ನು ರಾಜ್ಯ, ದೇಶ ಹಾಗೂ ವಿದೇಶಗಳಲ್ಲೂ ಪರಿಚಯಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮಖಾನ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಿಳಿಸಿದರು.

ಬಿಹಾರ ಸರ್ಕಾರ ಮಖಾನ ಬೆಳೆಗಾರರಿಗೆ ಶೇ.75ರ ಸಬ್ಸಿಡಿ ಸಹ ನೀಡುತ್ತಿದೆ. ಇದರಲ್ಲಿ ಹೆಚ್ಚು ನಾರು ಹಾಗೂ ಪ್ರೋಟಿನ್​ ಅಂಶವಿರುವುದರಿಂದ ತಿನಿಸು, ಸಿರಿಧಾನ್ಯ, ಖೀರು ಅಥವಾ ಇನ್ನಾವುದೇ ರೂಪದಲ್ಲಿ ತಯಾರಿಸಿ ಸೇವಿಸಬಹುದು. ಮಖಾನ ಲಾಭಗಳ ಕುರಿತು ಸಂಶೋಧನೆ ಸಹ ನಡೆಯುತ್ತಿದೆ. ಜನರು ಇದರ ಬಗ್ಗೆ ಹೆಚ್ಚು ಒಲವು ತೋರಿಸಿ, ಇದರ ತಿನಿಸುಗಳನ್ನು ಸೇವಿಸಬೇಕು ಎಂದು ಮನವಿ ಮಾಡಿದರು.

ಅರಮನೆ ಮೈದಾನದ ಕಿಂಗ್ಸ್​ಕೋರ್ಟ್​ನಲ್ಲಿ ಬಿಹಾರ ಸರ್ಕಾರ ಹಾಗೂ ಭಾರತೀಯ ವಾಣಿಜ್ಯ ಮಂಡಳಿ ಸಹಯೋಗದಲ್ಲಿ 2 ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಮಖಾನ ಮಹೋತ್ಸವದಲ್ಲಿ ಅವರು ಮಾತನಾಡಿದರು. ದೇಶದ ಶೇ.80 ರಷ್ಟು ಮಖಾನ ಬಿಹಾರದಲ್ಲಿ ಬೆಳೆಯಲಾಗುತ್ತದೆ. ಈ ಬೆಳೆ ಅಲ್ಲಿನ ರೈತರಿಗೆ ಮಾರುಕಟ್ಟೆ ಕಲ್ಪಿಸುತ್ತದೆ.

ಕಾರ್ಯಕ್ರಮದ ಅಂಗವಾಗಿ ಮಖಾನ ಬೀಜ, ಇದರ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ಮಖಾನ ಕುರಿತು 2.4 ಕೋಟಿಯ ಪ್ರಥಮ ಒಡಂಬಡಿಕೆ ಸಹ ಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬಿಹಾರದ ಕೃಷಿ ಇಲಾಖೆ ಕಾರ್ಯದರ್ಶಿ ಸಂಜಯ್ ಕುಮಾರ್ ಅಗರ್ವಾಲ್, ತೋಟಗಾರಿಕೆ ನಿರ್ದೇಶಕ ಅಭಿಷೇಕ್ ಕುಮಾರ್, ರಿಪಬ್ಲಿಕ್​ ಆಫ್ ಅರ್ಮೇನಿಯಾದ ಕೌನ್ಸಿಲ್ ಜನರಲ್ ಶಿವಕುಮಾರ್ ಈಶ್ವರನ್, ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಕುಮಾರ್ ರವಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿಹಾರದ ಕೃಷಿ ಸಚಿವ ಮಂಗಲ್ ಪಾಂಡೆ ಮಾತನಾಡಿ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಖಾನ ಬೀಜ, ಬೆಳೆ, ತಿನಿಸು ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಈ ಖಾದ್ಯದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಲು ಮಖಾನ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಮಖಾನ ತಿನ್ನುವುದರಿಂದ ದೇಹಕ್ಕೆ ಪೋಷಕಾಂಶ ಸಿಗುವುದರ ಜೊತೆಗೆ ಕ್ಯಾನ್ಯರ್ ರೋಗ ಸಹ ತಡೆಯಬಹುದಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದರ ಬೆಲೆ ಮೂರು ಪಟ್ಟು ಏರಿಕೆಯಾಗಿದೆ. ಪ್ರಸ್ತುತ ಇದು ಕೆಜಿಗೆ 1800 ರಿಂದ 2000 ರೂಪಾಯಿಯವರೆಗೆ ಮಾರಾಟವಾಗುತ್ತಿದೆ. ಇದರ ಮಾರುಕಟ್ಟೆ ವಿಸ್ತರಿಸುವ ನಿಟ್ಟಿನಲ್ಲಿ ಮಖಾನವನ್ನು ಎಲ್ಲೆಡೆ ಪ್ರಚುರ ಪಡೆಸುವ ಅವಶ್ಯಕತೆ ಇದೆ ಎಂದರು.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...