spot_img
spot_img

MANN KI BAAT – ‘ಸಂವಿಧಾನ ಓದು’ ಅಭಿಯಾನಕ್ಕೆ ಪಿಎಂ ಮೋದಿ ಚಾಲನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ದೇಶಾದ್ಯಂತ ಸಂವಿಧಾನ ಓದಿ ಅಭಿಯಾನಕ್ಕೆ ಪಿಎಂ ಮೋದಿ ಚಾಲನೆ ನೀಡಿದ್ದಾರೆ. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 117 ನೇ ಸಂಚಿಕೆಯಲ್ಲಿ ಭಾನುವಾರ ಪ್ರಧಾನಿ ಈ ಘೋಷಣೆ ಮಾಡಿದ್ದಾರೆ. ಭಾರತವು ಸಂವಿಧಾನವನ್ನು ಅಂಗೀಕರಿಸಿದ 75ನೇ ವರ್ಷಾಚರಣೆಯ ಭಾಗವಾಗಿ ದೇಶಾದ್ಯಂತ ಸಂವಿಧಾನ ಓದು ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

“2025ನೇ ವರ್ಷ ಇನ್ನೇನು ಕೆಲವೇ ದಿನಗಳ ಹತ್ತಿರದಲ್ಲಿದೆ. ಜನವರಿ 26, 2025 ಕ್ಕೆ ಸಂವಿಧಾನವನ್ನು ಅಂಗೀಕರಿಸಿ 75 ವರ್ಷಗಳು ತುಂಬುತ್ತವೆ. ಇದು ನಮ್ಮೆಲ್ಲರಿಗೂ ಅಪಾರ ಹೆಮ್ಮೆಯ ವಿಷಯವಾಗಿದೆ. ನಮ್ಮ ಸಂವಿಧಾನ ರಚನಾಕಾರರು ನಮಗೆ ನೀಡಿದ ಸಂವಿಧಾನವು ಸಮಯದ ಪರೀಕ್ಷೆಯನ್ನು ಎದುರಿಸಿದೆ. ಸಂವಿಧಾನ ನಮ್ಮ ದಾರಿದೀಪ. ಸಂವಿಧಾನ ನೀಡಿದ ಶಕ್ತಿಯಿಂದಲೇ ನಾನು ಇಂದು ಈ ಸ್ಥಾನದಲ್ಲಿದ್ದೇನೆ ಮತ್ತು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ” ಎಂದು ಅವರು ಹೇಳಿದರು.

“ಈ ವರ್ಷದ ನವೆಂಬರ್ 26 ರಂದು ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿದ 75 ನೇ ವರ್ಷಾಚರಣೆಯ ಅಂಗವಾಗಿ ಸಂವಿಧಾನ್ ದಿವಸ್ ಆಚರಿಸಲಾಯಿತು. ಈ ಮೈಲಿಗಲ್ಲನ್ನು ಗೌರವಿಸಲು, ಸಂವಿಧಾನದ ಪೀಠಿಕೆಯನ್ನು ಓದಲು ಮತ್ತು ನಾಗರಿಕರು ವೀಡಿಯೊಗಳನ್ನು ಹಂಚಿಕೊಳ್ಳಲು ಆಹ್ವಾನಿಸುವ ರಾಷ್ಟ್ರವ್ಯಾಪಿ ಅಭಿಯಾನವನ್ನು ನಡೆಸಲಾಗುವುದು. ಆ ಮೂಲಕ ಸಾಮೂಹಿಕ ಹೆಮ್ಮೆ ಮತ್ತು ಏಕತೆಯ ಪ್ರಜ್ಞೆಯನ್ನು ಜಾಗೃತಗೊಳಿಸಲಾಗುವುದು” ಎಂದು ಪ್ರಧಾನಿ ಹೇಳಿದರು.

ದೇಶದ ನಾಗರಿಕರನ್ನು ಸಂವಿಧಾನದ ಪರಂಪರೆಯೊಂದಿಗೆ ಸಂಪರ್ಕಿಸಲು ವಿಶೇಷ ವೆಬ್ ಸೈಟ್ ರಚಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ವೆಬ್​ಸೈಟ್​ಗೆ ಭೇಟಿ ನೀಡಿ ಸಂವಿಧಾನ ದಿನಾಚರಣೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಅವರು ಕರೆ ನೀಡಿದರು.”ಈ ವೆಬ್​ಸೈಟ್​ನಲ್ಲಿ ನೀವು ಸಂವಿಧಾನವನ್ನು ವಿವಿಧ ಭಾಷೆಗಳಲ್ಲಿ ಓದಬಹುದು ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬಹುದು” ಎಂದು ಪ್ರಧಾನಿ ಹೇಳಿದರು.

ಸಂಸತ್ತಿನಲ್ಲಿ ಕೂಡ ಭಾರತದ ಸಂವಿಧಾನದ 75 ವರ್ಷಗಳ ಬಗ್ಗೆ ಈಗಾಗಲೇ ಕೂಲಂಕಷವಾಗಿ ಚರ್ಚೆ ನಡೆದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳು ನಡೆಸಿದ ಚರ್ಚೆಯಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಬಿಸಿ ಬಿಸಿ ಚರ್ಚೆ ನಡೆಯಿತು. ನವೆಂಬರ್ 26, 1949 ರಂದು ಸಂವಿಧಾನವನ್ನು ಅಂಗೀಕರಿಸಿದಾಗಿನಿಂದ ಅದರ ಮಹತ್ವ ಮತ್ತು ವಿಕಾಸದ ಬಗ್ಗೆ ಚರ್ಚೆ ಕೇಂದ್ರೀಕೃತವಾಗಿತ್ತು. ಈ ತಿಂಗಳ ಮನ್ ಕಿ ಬಾತ್ ಎಲ್ಲರಿಗೂ ಆಸಕ್ತಿಯನ್ನುಂಟುಮಾಡುವ ವ್ಯಾಪಕ ಶ್ರೇಣಿಯ ವಿಷಯಗಳನ್ನು ಒಳಗೊಂಡಿದೆ ಎಂದು ಪ್ರಧಾನಿ ಈ ಹಿಂದೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...