spot_img
spot_img

ಚೊಚ್ಚಲ‌ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹಾವೇರಿ: ದಾನಮ್ಮದೇವಿ ಜಾತ್ರೆ ಪ್ರಯುಕ್ತ ಕಳೆದ 8 ವರ್ಷಗಳಿಂದ ಬ್ಯಾಡಗಿ ಪಟ್ಟಣದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಬಡ ಚೊಚ್ಚಲ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಯಿತು.

ಸೀಮಂತ ಪ್ರತಿಯೋರ್ವ ಮಹಿಳೆಯ ಜೀವನದ ಅತ್ಯಂತ ಮಹತ್ತರ ಘಟ್ಟ. ಆದರೆ ಕೆಲ ಬಡ ಹೆಣ್ಣು ಮಕ್ಕಳಿಗೆ ಸೀಮಂತದ ಸಂಭ್ರಮವೇ ಇರುವುದಿಲ್ಲ.

ಇದನ್ನು ಮನಗಂಡ ಬ್ಯಾಡಗಿ ಪಟ್ಟಣದ ದಾನಮ್ಮದೇವಿ ದೇವಸ್ಥಾನದ ಆಡಳಿತ ಸಮಿತಿ ಬಡ ಹೆಣ್ಣುಮಕ್ಕಳಿಗಾಗಿ ಕಳೆದ 8 ವರ್ಷಗಳಿಂದ ಚೊಚ್ಚಲ‌ ಗರ್ಭಿಣಿಯರಿಗೆ ಸಾಮೂಹಿಕವಾಗಿ ಸೀಮಂತ ಕಾರ್ಯಕ್ರಮ ಆಯೋಜಿಸುತ್ತ ಬಂದಿದೆ. ಪ್ರಸ್ತುತ ವರ್ಷದ ಸಾಮೂಹಿಕ ಸೀಮಂತ ಕಾರ್ಯಕ್ರಮ ಶನಿವಾರ ರಾತ್ರಿ ನಡೆಯಿತು.

ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ 136 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯ ನೆರವೇರಿಸಲಾಯಿತು. ಬಡವ ಬಲ್ಲಿದ ಹಿಂದೂ ಮುಸ್ಲಿಂ ಎಂಬ ಯಾವುದೇ ಭೇದ ಎನಿಸದೆ ಎಲ್ಲಾ ಚೊಚ್ಚಲ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕವಾಗಿ ಸೀಮಂತ ಮಾಡಲಾಯಿತು.

ಕಳೆದ 13 ವರ್ಷಗಳಿಂದ ಪ್ರತಿ ವರ್ಷ ದಾನಮ್ಮದೇವಿ ಜಾತ್ರೆ ಮಾಡಲಾಗುತ್ತೆ. ಜಾತ್ರೆ ಪ್ರಯುಕ್ತ ಕಳೆದ 8 ವರ್ಷಗಳಿಂದ ಚೊಚ್ಚಲ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಮಾಡಲಾಗುತ್ತದೆ. ಹೂವಿನಶಿಗ್ಲಿ ವಿರಕ್ತಮಠದ ಚೆನ್ನವೀರೇಶ್ವರ ಶ್ರೀಗಳು ಸೇರಿದಂತೆ ನಗರದ ಗಣ್ಯರು ಮುದ್ದಾದ ಮಗು ಜನಿಸಲಿ ಎಂದು ಹರಸಿದರು.

ಜಾನಪದ ಗೀತೆಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಆಡಳಿತ ಮಂಡಳಿಯ ಸದಸ್ಯೆಯರು ಮತ್ತಷ್ಟು ಮೆರುಗು ತಂದರು. ಸೀಮಂತಕ್ಕೆ ಬಂದ ಮಹಿಳೆಯರ ಸಂಬಂಧಿಕರಿಗೆ ಮತ್ತು ಪಟ್ಟಣದ ಜನತೆಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಸೀರೆ, ಕುಪ್ಪಸ, ಹಸಿರು ಬಳೆ, ಅರಿಶಿನ, ಗೋಧಿ ಸರ, ಕಂಕಣ ಕಟ್ಟಿ, ಹೂವಿನ ದಂಡಿ ತಲೆಯ ಮೇಲೆ ಹಾಕಿ, ಅಕ್ಷತೆ ಹಾಕಿ ಸೀಮಂತ ಕಾರ್ಯ ಮಾಡಲಾಯಿತು. ಹಾಗೇ ಅವರ ಬಯಕೆಗೆ ತಕ್ಕಂತೆ ಮಾವಿನಕಾಯಿ, ಬೆಲ್ಲ, ಉಪ್ಪಿನಕಾಯಿ, ಜಿಲೇಬಿ, ಹುಣಸೇಕಾಯಿ, ಬೆಟ್ಟದ ನೆಲ್ಲಿಕಾಯಿ ಸೇರಿದಂತೆ ಸಿಹಿ ತಿನಿಸುಗಳನ್ನು ನೀಡಲಾಯಿತು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...

KIDNEY FAILURE SYMPTOMS:ನಿಮ್ಮನ್ನು ನಿರಂತರವಾಗಿ ಈ ಸಮಸ್ಯೆಗಳು ಕಾಡುತ್ತಿವೆಯೇ?

Kidney Failure Symptoms News: ಮೂತ್ರಪಿಂಡಗಳು ಹಾನಿಗೊಳಗಾದ ನಂತರ ಡಯಾಲಿಸಿಸ್ ಅಥವಾ ಮೂತ್ರಪಿಂಡ ಕಸಿ ಮಾಡುವುದನ್ನು ಬಿಟ್ಟು ಬೇರೆ ಯಾವುದೇ ದಾರಿಯಿಲ್ಲ. ವೈದ್ಯಕೀಯ ತಜ್ಞರು ತಿಳಿಸುವಂತೆ...

HOW TO MAKE IDLI RAVA:ಈ ರವಾದಿಂದ ಇಡ್ಲಿಗಳು ತುಂಬಾ ಸಾಫ್ಟ್.

How to Make Idli Rave News: IDLI RAVA ಮಾಡಲು ರವೆ ಮುಖ್ಯವಾಗಿರುತ್ತದೆ. ಅದಕ್ಕಾಗಿಯೇ ಅನೇಕರು ಮಾರುಕಟ್ಟೆಗೆ ಹೋದಾಗ ಹೆಚ್ಚಿನ ಪ್ರಮಾಣದಲ್ಲಿ IDLI RAVA...

WOMAN DONATES 35 YEARS OF SAVINGS:35 ವರ್ಷದ ಉಳಿತಾಯದ ಹಣವನ್ನು ಶಿಕ್ಷಣ ಸಂಸ್ಥೆಗೆ ದಾನ ಮಾಡಿದ ಮಹಿಳೆ.

Tirupati (Andhra Pradesh) News: ರೇಣಿಗುಂಟದ ಸಿ.ಮೋಹನ ದಾನ ಮಾಡಿದ WOMAN. ಇವರು ವಿಶ್ವಸಂಸ್ಥೆಯ ಅಭಿವೃದ್ಧಿ ಮತ್ತು ನಿರ್ವಹಣೆ ವಲಯದಲ್ಲಿ ಕೊಸೊವೊ, ಅಲ್ಬೇನಿಯಾ, ಯೆಮೆನ್, ಸೌದಿ...