spot_img
spot_img

MINISTER H C MAHADEVAPPA : ಶ್ರೀರಾಮುಲುರನ್ನ ಕಾಂಗ್ರೆಸ್ ಪಕ್ಷಕ್ಕೆ ಕರೆ ತರುವ ಪ್ರಸ್ತಾಪ ಇಲ್ಲ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Belgaum News:

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದಲ್ಲಿ ಬಿರುಕು ಉಂಟು ಮಾಡಲು ಇಂತಹ ಅಂತೆ-ಕಂತೆಗಳನ್ನು ಸೃಷ್ಟಿಸಲಾಗುತ್ತಿದೆ. ಇವೆಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿಸುವ ಪ್ರಯತ್ನಗಳು. ಕಾಂಗ್ರೆಸ್​ನಲ್ಲಿ ಇಂತವೆಲ್ಲಾ ನಡೆಯುವುದಿಲ್ಲ ಎಂದು ಹೇಳಿದರು.

ಸಚಿವ ಸತೀಶ್​ ಜಾರಕಿಹೊಳಿ ಅವರನ್ನ ಮಣಿಸಲು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರಲಾಗುತ್ತಿದೆ ಎಂಬ ಮಾಜಿ ಸಚಿವ ಜನಾರ್ದನ ರೆಡ್ಡಿ ಟೀಕೆಗೆ ಸಮಾಜ ಕಲ್ಯಾಣ ಸಚಿವ MINISTER H C MAHADEVAPPA ತಿರುಗೇಟು ನೀಡಿದ್ದಾರೆ.

ಬಿಜೆಪಿ ನಾಯಕ ಶ್ರೀರಾಮುಲು ಅವರನ್ನ ಕಾಂಗ್ರೆಸ್​ ಪಕ್ಷಕ್ಕೆ ಕರೆತರುವ ಪ್ರಸ್ತಾಪ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್​ ಸಿ ಮಹಾದೇವಪ್ಪ ಹೇಳಿದ್ದಾರೆ. ಒಂದು ವೇಳೆ ಶ್ರೀರಾಮುಲು ಕಾಂಗ್ರೆಸ್​ಗೆ ಬಂದರೆ ಸ್ವಾಗತಿಸುತ್ತಿರಾ? ಎಂಬ ಮಾಧ್ಯಮದವರ ಪ್ರಶ್ನೆಗೆ, ಸದ್ಯಕ್ಕೆ ಆ ಪ್ರಸ್ತಾಪವೇ ಇಲ್ಲ. ಹಿಪ್ಪನ್ ಬರ್ಡ್ಸ್ ಯಾಕೆ? ಚುನಾವಣೆ ಸಂದರ್ಭದಲ್ಲಿ ಶ್ರೀರಾಮುಲು ಅವರನ್ನ ಸೆಳೆಯಲು ಅನೇಕ ತಂತ್ರಗಾರಿಕೆ ಆಗಿರಬಹುದು. ಜನ ನಮಗೆ ಆಶೀರ್ವಾದ ಕೊಟ್ಟಿದ್ದಾರೆ.

MINISTER H C MAHADEVAPPA ಸರ್ಕಾರ ನಡೆಸುತ್ತಿದ್ದೇವೆ ಎಂದರು. ರಾಜ್ಯದಲ್ಲಿ ಮೈಕ್ರೋ ಪೈನಾನ್ಸ್ ಹಾವಳಿ ಬಗ್ಗೆ ಮಾತನಾಡಿದ ಅವರು, ಭಾರತೀಯ ರಿಸರ್ವ್ ಬ್ಯಾಂಕ್, ಸಹಕಾರಿ ಸಂಘದಿಂದ ಫೈನಾನ್ಸ್​ಗಳು ಅನುಮತಿ ಪಡೆದು, ಅವುಗಳ ಮಾರ್ಗಸೂಚಿಯಡಿ ಕಾನೂತ್ಮಕವಾಗಿ ಅವರು ವ್ಯವಹರಿಸುತ್ತಿದ್ದಾರೆ. ಸಾಲದ ನೆಪದಲ್ಲಿ ಮಹಿಳೆಯರ ಮೇಲೆ ಕೇಸ್ ಹಾಕುವುದು ಸರಿಯಲ್ಲ.

ಕಾನೂನಿನ ಪ್ರಕಾರ ಮಹಿಳೆಯರಿಗೆ ಶಿಕ್ಷೆ ಕೊಡುವುದಾದರೆ ಕಾನೂನು ಮೂಲಕವೇ ಅವರು ಸಮಸ್ಯೆ ಎದುರಿಸಬೇಕಾಗುತ್ತದೆ. ಈ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಸಭೆ ಕರೆದಿದ್ದಾರೆ. MINISTER H C MAHADEVAPPA ಇಂತಹ ಘಟನೆ ತಪ್ಪಿಸಲು ಏನು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತಾರೆ ಎಂದು ಹೇಳಿದರು. ಅಹಿಂದ ನಾಯಕರಾಗಿ ಸತೀಶ್ ಜಾರಕಿಹೊಳಿ ಅವರು ಬೆಳೆಯುತ್ತಿದ್ದಾರೆ.

ಇಂಥ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ನಾಯಕರನ್ನೇ ಕರೆತರುವ ಪ್ರಯತ್ನ ನಡೆದಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಪ್ರಶ್ನೆ ಅಪ್ರಸ್ತುತ. ಇಂತಹ ಯಾವ ಪ್ರಶ್ನೆಗಳು ಕೂಡ ಸರ್ಕಾರ ಹಾಗೂ ಪಕ್ಷದ ಮುಂದೆ ಇಲ್ಲವೇ ಇಲ್ಲ ಎಂದು ಸಮಜಾಯಿಷಿ ನೀಡಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಗುದ್ದಾಟ ಏರ್ಪಟ್ಟಿರುವುದರ ಕುರಿತ ಪ್ರಶ್ನೆಗೆ, ಇವು ಯಾವೂ ರಾಜ್ಯದ ವಿಷಯಗಳಲ್ಲ.

ಎಲ್ಲಾ ಹೈಕಮಾಂಡ್ ಮುಂದೆ ಇರುವ ವಿಷಯಗಳು. ಪಕ್ಷ ಮತ್ತು ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ ಎಂದರು. ಮೈಸೂರು ಅರಮನೆ ಆಸ್ತಿ ವಿಚಾರವಾಗಿ ಸರ್ಕಾರ ವಿರೋಧ ಮಾಡುತ್ತಿಲ್ಲ. ಕೆಲವು ಆಸ್ತಿಗಳು ಸರ್ಕಾರಕ್ಕೆ ಸೇರಬೇಕು ಎಂಬ ವಾದ ನಡೆಯುತ್ತಿದೆ.

ಮೈಸೂರಿನಲ್ಲಿ ರಸ್ತೆ ಅಗಲೀಕರಣ ಮಾಡುವುದಕ್ಕೆ ಟಿಡಿಆರ್ ಮಾಡಬೇಕಾಗಿದೆ. ಹೆಚ್ಚಿನ ಪ್ರಮಾಣದ ಅನುದಾನವನ್ನು ನೀಡಲು ಸಾಧ್ಯವಾಗದ ಹಿನ್ನೆಲೆ ನಿನ್ನೆ ತುರ್ತು ಸಚಿವ ಸಂಪುಟ ಸಭೆ ಮಾಡಿ ತೀರ್ಮಾನ ಕೈಗೊಂಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ಇದನ್ನು ಓದಿರಿ : REDDY RAMULU FIGHT : ಶ್ರೀರಾಮುಲುರನ್ನ ಜನಾರ್ದನ ರೆಡ್ಡಿ ಬೆಳೆಸಿಲ್ಲ, ಸ್ವಂತ ಶಕ್ತಿಯಿಂದ ಬೆಳೆದಿದ್ದಾರೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...