spot_img
spot_img

MINISTER LAKSHMI HEBBALKAR : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ, ಸುರ್ಜೆವಾಲ, ಡಿಕೆಶಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Belgaum News:

ಕಾರು ಅಪಘಾತದಲ್ಲಿ ಗಾಯಗೊಂಡಿರುವ MINISTER LAKSHMI HEBBALKAR ಆರೋಗ್ಯವನ್ನು ಸುತ್ತೂರು ಮಠದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿ, ಆದಷ್ಟು ಬೇಗನೇ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅಣಿಯಾಗುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವದಿಸಿದರು.

ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.

Car accident:

ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ MINISTER LAKSHMI HEBBALKAR ಅವರಿದ್ದ ಸರ್ಕಾರಿ ಕಾರು ಅಪಘಾತಕ್ಕೀಡಾದ ಘಟನೆ ಮಕರ ಸಂಕ್ರಾಂತಿ ಹಬ್ಬ ಅಂದ್ರೆ ಜನವರಿ 14ರ ಬೆಳಗಿನ ಜಾವ ಸುಮಾರು 5 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸಂಭವಿಸಿತ್ತು.

ಘಟನೆಯಲ್ಲಿ MINISTER LAKSHMI HEBBALKAR , ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಅಪಘಾತದಲ್ಲಿ MINISTER LAKSHMI HEBBALKAR ಅವರ ಬೆನ್ನು ಮೂಳೆಗೆ ಭಾರಿ ಪೆಟ್ಟು ಬಿದ್ದು ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೆನ್ನರಾಜ ಹಟ್ಟಿಹೊಳಿ ಮತ್ತು ಕಾರು ಚಾಲಕ, ಗನ್​ಮ್ಯಾನ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಅದೇ ದಿನ ಡಿಸ್ಚಾರ್ಜ್ ಆಗಿದ್ದಾರೆ.

A case of hit and run?:

ಕಿತ್ತೂರು‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ಶಿವಪ್ರಸಾದ ಗಂಗಾಧರಯ್ಯ ಅವರು ದೂರು ನೀಡಿದ್ದಾರೆ. ದೂರಿನ ಪ್ರಕಾರ ಆ ಕಾರಿನಲ್ಲಿ MINISTER LAKSHMI HEBBALKAR , ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು.

ಬೆಳಗ್ಗೆ 5 ಗಂಟೆಗೆ ಅಂಬಡಗಟ್ಟಿ ಕ್ರಾಸ್ ಬಳಿ ಒಂದು ಕಂಟೇನರ್ ಟ್ರಕ್ ಬಲಗಡೆಯಿಂದ ಎಡಗಡೆಗೆ ಬಂತು.‌ ಈ ವೇಳೆ ಇವರ ಕಾರಿನ ಬಲಭಾಗಕ್ಕೆ ತಾಗಿದೆ. ಅದರಿಂದ ಮುಂದೆ ಆಗಲಿದ್ದ ಹೆಚ್ಚಿನ ಅನಾಹುತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಗಿಳಿದು ಕಾರು ಮರಕ್ಕೆ ಗುದ್ದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಿಟ್ ಅಂಡ್​ ರನ್ ಪ್ರಕರಣ ಎಂದು ಪರಿಗಣಿಸಿದ್ದು, ಎಲ್ಲ ಆಯಾಮದಲ್ಲೂ ತನಿಖೆ ಕೈಗೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದರು.

ಇದನ್ನು ಓದಿರಿ : SATISH JARKIHOLI : ಬೆಳಗಾವಿ ಸಭೆಯಲ್ಲಿ ಸುರ್ಜೇವಾಲ ಮುಂದೆ ಸತೀಶ್ ಬೆಂಬಲಿಗರಿಂದ ಅಸಮಾಧಾನ, ವಾಗ್ವಾದ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...