spot_img
spot_img

MIRCHI PRASADHA : ಭಕ್ತರಿಗೆ ಇಂದು 10 ಲಕ್ಷಕ್ಕೂ ಹೆಚ್ಚು ಮಿರ್ಚಿ ತಯಾರಿಕೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Koppala News:

ಕೊಪ್ಪಳ ಗವಿ ಸಿದ್ದೇಶ್ವರ ಜಾತ್ರೆಯಲ್ಲಿ ಮಹಾದಾಸೋಹ ನಡೆಯುತ್ತಿದೆ. ಇಲ್ಲಿ ಇಂದು ಭಕ್ತರು ಉತ್ತರ ಕರ್ನಾಟಕದ ಸ್ಪೆಷಲ್ MIRCHI PRASADHA ಸವಿಯಲಿದ್ದಾರೆ. ಕಳೆದ 9 ವರ್ಷಗಳಿಂದ ಕೊಪ್ಪಳದ ಗೆಳಯರ ಬಳಗ ಮಹಾದಾಸೋಹದಲ್ಲಿ MIRCHI PRASADHA ಸೇವೆ ಮಾಡುತ್ತಿದೆ. ಈ ವರ್ಷ ಒಟ್ಟು 10 ಲಕ್ಷಕ್ಕೂ ಹೆಚ್ಚು MIRCHI PRASADHA ತಯಾರಿಸುವ ಯೋಜನೆ ರೂಪಿಸಿಕೊಂಡಿದೆ.

ಅದಕ್ಕಾಗಿ ತಿಂಗಳ ಹಿಂದಿನಿಂದಲೇ ತಯಾರಿ ನಡೆಸಿದ್ದು, MIRCHI PRASADHA ತಯಾರಿಕೆಗಾಗಿ 25 ಕ್ವಿಂಟಾಲ್ ಕಡ್ಲೆಹಿಟ್ಟು, 22 ಕ್ವಿಂಟಾಲ್ ಹಸಿಮೆಣಸಿನಕಾಯಿ, 200 ಕೆಜಿಯ 20 ಬ್ಯಾರಲ್ ಒಳ್ಳೆಣ್ಣೆ, 50 ಕೆಜಿ ಅಜಿವಾನ, 50 ಕೆಜಿ ಸೋಡಾಪುಡಿ, 60 ಅಡುಗೆ ತಯಾರಿ ಸಿಲಿಂಡರ್ ಬಳಸಲಾಗುತ್ತಿದೆ. ಈ ಕುರಿತು ಭಕ್ತ ಚಂದ್ರಶೇಖರ್ ರೆಡ್ಡಿಯವರು ಮಾತನಾಡಿ, ”ಈ ಭಾಗದಲ್ಲಿ ರುಚಿಕರವಾದ ಖಾದ್ಯ ಎಂದರೆ ಮಿರ್ಚಿ. ಗೆಳೆಯರ ಬಳಗದಿಂದ ಸುಮಾರು ಏಳೆಂಟು ವರ್ಷದಿಂದ ಈ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ.

ಈ ಜಾತ್ರೆಗೆ ಬರುವ ಎಲ್ಲಾ ಭಕ್ತರಿಗೂ ನಾವು ಮಿರ್ಚಿಯನ್ನ ಕೊಡುತ್ತೇವೆ. ಇದಕ್ಕಾಗಿ ನಾವು ಒಂದರಿಂದ ಒಂದೂವರೆ ತಿಂಗಳಿನಿಂದ ತಯಾರಿ ಮಾಡುತ್ತಾ ಬಂದಿದ್ದೇವೆ”ಎಂದರು. ಒಟ್ಟು 18 ಗ್ರಾಮದಿಂದ 300 ಸ್ವಯಂಸೇವಕರು MIRCHI PRASADHA ತಯಾರಿಕೆಯಲ್ಲಿ ತೊಡಗಿದ್ದಾರೆ. ಎರಡನೇ ದಿನದ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರು ಮಹಾ ಪ್ರಸಾದದಲ್ಲಿ MIRCHI PRASADHA ರುಚಿ ಸವಿಯಲಿದ್ದಾರೆ.

ಈ ಬಗ್ಗೆ ಸ್ವಯಂಸೇವಕರಾದ ಗಿರಿಜಾ ಎಂಬುವವರು ಮಾತನಾಡಿ, ”ಕಳೆದ ಐದು ವರ್ಷದಿಂದ ನಾವು ಇಲ್ಲಿಗೆ ಬರುತ್ತಿದ್ದೇವೆ. ದೇವರಿಗೆ ಸೇವೆ ಸಲ್ಲಿಸುವುದರಿಂದ ಅನುಗ್ರಹ ಸಿಗುತ್ತೆ, ಒಳ್ಳೆಯ ವಿದ್ಯೆ, ಬುದ್ದಿ ಬರುತ್ತೆ. ನೆಮ್ಮದಿ ಬರುತ್ತೆ. ನಮ್ಮ ಮಕ್ಕಳಿಗೆ ಬೇಕಾದ ನೌಕರಿ ಸಿಗುತ್ತೆ. ಹೀಗಾಗಿ, ನಾವು ತೃಪ್ತಿಯಾಗಿ ಸೇವೆ ಮಾಡುತ್ತಿದ್ದೇವೆ” ಎಂದು ಹೇಳಿದರು.

Wednesday drive for Maharathotsava:

ಕೊಪ್ಪಳ ಗವಿಸಿದ್ದೇಶ್ವರರ ಮಹಾರಥೋತ್ಸವ 8 ಲಕ್ಷ ಜನ ಭಕ್ತ ಸಾಗರದ ಮಧ್ಯೆ ಬುಧವಾರ ಸಂಜೆ ಪುಷ್ಯ ಮಾಸದ ಬಹುಳ ಬಿದಿಗೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಹಿಂದೂಸ್ಥಾನಿ ಸಂಗೀತದ ಮೇರು ಪರ್ವತ ಪಂಡಿತ, ಪದ್ಮಶ್ರೀ ಪುರಸ್ಕೃತ ಎಂ.ವೆಂಕಟೇಶ್​ ಕುಮಾರ್ ಅವರು ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಇದನ್ನು ಓದಿರಿ : FARMERS PROTEST : ಶಂಭು ಗಡಿಯಿಂದ ದೆಹಲಿಗೆ 101 ರೈತರಿಂದ ಕಾಲ್ನಡಿಗೆ ಜಾಥಾ ಜ.21 ರಿಂದ ಪುನಾರಂಭ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...