spot_img
spot_img

MUDA Scam Updates: HDK ಒತ್ತಡಕ್ಕೆ ಮಣಿದ BJP ರಾಜ್ಯ ಪ್ರಧಾನ ಕಾರ್ಯದರ್ಶಿ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

MUDA Scam :

HDK ಒತ್ತಡಕ್ಕೆ ಮಣಿದ BJP ರಾಜ್ಯ ಪ್ರಧಾನ ಕಾರ್ಯದರ್ಶಿ  ಸಮಾವೇಶದಲ್ಲಿ ಕಾಣಿಸಿಕೊಳ್ಳದ ಪ್ರೀತಂ ಗೌಡ?ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ CM ಸಿದ್ದರಾಮಯ್ಯನವರ   ವಜಾಕ್ಕೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ.

Muda Scam

Muda Scam ರಾಜ್ಯ ರಾಜಕೀಯದಲ್ಲಿ ಮಹತ್ವದ  ಸಂಚಲನ?

Muda Scam ರಾಜ್ಯ ರಾಜಕೀಯದಲ್ಲಿ ಮಹತ್ವದ  ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೆ C M  ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು BJP  ಮತ್ತುJDS  ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ. ಪಾದಯಾತ್ರೆ ಉದ್ಘಟನಾ ಕಾರ್ಯಕ್ರಮದಲ್ಲಿ BJP ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ (Preetham gowda) ಕಾಣಸಿಕೊಂಡಿಲ್ಲ. ಈ ಮೂಲಕ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಷರತ್ತಿಗೆ  ಬಿಜೆಪಿ  ಸಮ್ಮತಿಸಿದೆ

ಒತ್ತಡ ಯಾವುದು ಮತ್ತು ಷರತ್ತು ಏನು ?

ಭ್ರಷ್ಟಾಚಾರ ಮುಕ್ತ ಆಡಳಿತಕ್ಕೋಸ್ಕರ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆಗೆ  ಆಗ್ರಹಿಸಿ ಬಿಜೆಪಿ, ಜೆಡಿಎಸ್​ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ಸಿದ್ಧತೆ ಸಮಯದಲ್ಲೇ ಅಪಸ್ವರ ಕೇಳಿಬಂದಿತ್ತು. ಜೆಡಿಎಸ್ ನಾಯಕರು​ ಪಾದಯಾತ್ರೆಗೆ ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದ್ದರು. ರಾಜ್ಯದಲ್ಲಿಗ  ಪ್ರವಾಹ ಪರಿಸ್ಥತಿ ಉಂಟಾಗಿದೆ, ಹೀಗಾಗಿ ಪಾದಯಾತ್ರೆ ನಡೆಸುವುದು ಬೇಡ ಅಂತ ಜೆಡಿಎಸ್​ ರಾಜ್ಯಾಧ್ಯಕ್ಷ ಸೇರಿದಂತೆ ಎಲ್ಲ ಜೆಡಿಎಸ್​ ನಾಯಕರು ಪುನರ್ ಉಚ್ಚರಿಸಿದ್ದರು.​ ಆದರೆ ಬಿಜೆಪಿ ಇದನ್ನುಲೆಕ್ಕಿಸದೆ  ಪಾದಯಾತ್ರೆಯ  ತಯಾರಿಯನ್ನು ಜೋರಾಗಿಯೇ ನಡೆಸಿತ್ತು. ಪಾದಯಾತ್ರೆಗೆ ಪೂರ್ವ ಸಿದ್ಧತೆ ಸಭೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಯವರನ್ನೂ ಆಹ್ವಾನಿಸಲಾಗಿತ್ತು  . ಈ ಸಭೆಯಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಭಾಗಿಯಾಗಿದ್ದರು. ಅಲ್ಲದೆ, ಪಾದಯಾತ್ರೆ ಕೂಡ ಪ್ರೀತಂ ಗೌಡ ನೇತೃತ್ವದಲ್ಲೇ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

Muda Scam
Muda Scam

ಹೆಚ್​ಡಿ ಕುಮಾರಸ್ವಾಮಿ ಯವರು ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ

ಪಾದಯಾತ್ರೆ ಮತ್ತು ಸಭೆಯಲ್ಲಿ ಪ್ರೀತಂ  ಗೌಡ  ಭಾಗಿಯಾಗಿದ್ದಕ್ಕೆ ಕೇಂದ್ರ ಸಚಿವ  ಹೆಚ್​ಡಿ ಕುಮಾರಸ್ವಾಮಿ ಯವರು ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು.

ಕುಮಾರಸ್ವಾಮಿ ಆಕ್ರೋಶಕ್ಕೆ ಕಾರಣ

ಪ್ರೀತಂ ಗೌಡ ಅವರು ತಮ್ಮ ಬೆಂಬಲಿಗರ ಮೂಲಕ ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಅನ್ನು  ಹಂಚಿದ್ದಾರೆ. ದೇವೇಗೌಡರ ಕುಟುಂಬಕ್ಕೆ ವಿಷ ಹಾಕಲು ಹೊರಟಿದ್ದವರನ್ನು ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ. ಮತ್ತು ಪಾದಯಾತ್ರೆ ಬಗ್ಗೆ ನಮಗೆ ಯಾವದೇ  ಮಾಹಿತಿಯನ್ನು  ನೀಡಿಲ್ಲ ,  ಪಾದಯಾತ್ರೆಗೆ ನಮ್ಮ  ಬೆಂಬಲವಿಲ್ಲ  ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಬಿಜೆಪಿ ಹೈಕಮಾಂಡ್ ರಾಜಿ ಸಂಧಾನ

ಪಾದಯಾತ್ರೆಗೆ ಸಂಬಂಧಿಸಿದಂತೆ  ಆರಂಭದಲ್ಲೇ ಎದುರಾಗಿದ್ದ  ವಿಘ್ನಕ್ಕೆ   ಎಚ್ಚೆತ್ತುಕ್ಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ರಾಜಿಸಂಧಾನ ಮಾಡಿದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿ ಹೈಕಮಾಂಡ್​ ಮುಂದೆ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿದ್ದರು.  ಪ್ರೀತಂಗೌಡ  ಮೈಸೂರ ಚಲೋ ಪಾದಯಾತ್ರೆಯಲ್ಲಿ    ಭಾಗಿಯಾಗಲಿಲ್ಲ.

ಇನ್ನಷ್ಟು ಓದಿರಿ:

Mooda scamನಲ್ಲಿ ನನ್ನ ಪಾತ್ರ ಏನು ಇಲ್ಲ CM Siddaramaiah?

Wayanad Landslide: ಕೇರಳ ಜನರ ಪರವಾಗಿ ನಿಂತ ಕರ್ನಾಟಕ ಸರ್ಕಾರ!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...