spot_img
spot_img

ಪುಣ್ಯ ಕ್ಷೇತ್ರಗಳಿಗೆ ಮುಕೇಶ್ ಅಂಬಾನಿ ಭೇಟಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಡೆಹರಾಡೂನ್: ಉತ್ತರಾಖಂಡದಲ್ಲಿರುವ ಪುಣ್ಯ ಕ್ಷೇತ್ರಗಳಾದ ಬದರೀನಾಥ ಮತ್ತು ಕೇದರನಾಥ ಧಾಮಗಳಿಗೆ ರಿಲಯನ್ಸ್ ಇಂಡಸ್ಟ್ರಿಯ ಮುಖ್ಯಸ್ಥ, ಭಾರತದ ನಂಬರ್ ಒನ್ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರು ಅಕ್ಟೋಬರ್ 20ರಂದು ಭೇಟಿ ನೀಡಿದ್ದಾರೆ.
ಶ್ರೀ ಬದರೀನಾಥ ದೇವಸ್ಥಾನಕ್ಕೆ ಆಗಮಿಸಿದ ಮುಕೇಶ್ ಅಂಬಾನಿ ಅವರನ್ನು ದೇಗುಲದ ಅರ್ಚಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಸ್ವಾಗತಿಸಿದರು. ಈ ಎರಡು ಕ್ಷೇತ್ರಗಳಲ್ಲಿ ಮುಕೇಶ್ ಅಂಬಾನಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಧಾರ್ಮಿಕ ಯಾತ್ರೆ ನಡೆಸಿ ದೇಣಿಗೆ ರೂಪದಲ್ಲಿ ಈ ಎರಡು ಧಾಮಗಳಿಗೆ ತಲಾ 5 ಕೋಟಿ ರೂಪಾಯಿ ಹಣವನ್ನು ನೀಡಿದರು.
ಉತ್ತರಾಖಂಡ ನಾಲ್ಕು ಧಾಮಗಳಲ್ಲಿ ದೇಶದ ಪ್ರಮುಖ ಹಿಂದೂ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶ್ರೀ ಬದರೀನಾಥ ಧಾಮವನ್ನು ವಿಷ್ಣು ದೇವರ ನಿವಾಸ ಎಂದು ನಂಬಲಾಗಿದೆ.
ಮುಕೇಶ್ ಅಂಬಾನಿಯವರನ್ನು ಸ್ವಾಗತಿಸಿ ಮಾತನಾಡಿದ ಬದರೀ-ಕೇದಾರ ದೇವಸ್ಥಾನ ಸಮಿತಿಯ ಅಧ್ಯಕ್ಷ ಅಜೇಂದ್ರ ಅಜಯ್ ಮಾತನಾಡಿ, ಅಂಬಾನಿಯವರ ಆಗಮನದಿಂದ ಧಾಮದ ಮಹತ್ವ ಮತ್ತಷ್ಟ ಹೆಚ್ಚಾಗಿದೆ ಎಂದರು.
ಅಂಬಾನಿ ತಮ್ಮ ಕುಟುಂಬದ ಪರವಾಗಿ ಎರಡೂ ದೇಗುಲಕ್ಕೆ ಸೇರಿಸಿ ಐದು ಕೋಟಿ ರೂ. ಹಣವನ್ನು ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಈ ಮೊತ್ತವನ್ನು ದೇವಸ್ಥಾನದ ಅಭಿವೃದ್ಧಿಯ ಕೆಲಸಗಳಲ್ಲಿ ಬಳಕೆ ಮಾಡಲಾಗುವುದು ಎಂದು ಹೇಳಿ ಅಂಬಾನಿಯವರ ಉದಾರತೆಗೆ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಭಕ್ತರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು.
ಎರಡು ಧಾಮಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮುಕೇಶ್ ಅಂಬಾನಿ, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಧಾರ್ಮಿಕ ನಂಬಿಕೆ ದೇಶದ ನಿಜವಾದ ಶಕ್ತಿಯಾಗಿದೆ ಎಂದರು. ಬದರೀನಾಥ ಮತ್ತು ಕೇದಾರನಾಥ ಧಾಮಗಳು ಕೇವಲ ಧಾರ್ಮಿಕ ಕ್ಷೇತ್ರಗಳಲ್ಲ, ಬದಲಾಗಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿವೆ. ಎಲ್ಲಾ ಭಕ್ತಾದಿಗಳು ಕ್ಷೇತ್ರದ ಪಾವಿತ್ರತ್ಯೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಮನವಿ ಮಾಡಿಕೊಂಡರು.
ಧಾರ್ಮಿಕ ವಿಧಿವಿಧಾನಗಳನ್ನು ಪೊರೈಸಿದ ಮುಕೇಶ್ ಅಂಬಾನಿ, ದೇಶದ ಅಭಿವೃದ್ಧಿ, ಶಾಂತಿ ಮತ್ತು ಸುಖ-ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಈ ಧಾಮವು ಹಿಮಾಲಯದ ಎತ್ತರದಲ್ಲಿದ್ದು, ಧಾರ್ಮಿಕ ನಂಬಿಕೆ ಮತ್ತು ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ ಹಾಗೂ ಇದು ಉತ್ತರಾಖಂಡದ ನಾಲ್ಕು ಧಾಮಗಳಲ್ಲಿ ಒಂದಾಗಿದೆ. ಬದರೀನಾಥ ವಿಷ್ಣುವಿನ ನಿವಾಸವಾಗಿದೆ. ಕೇದಾರನಾಥ ದೇವರು ಶಿವನ ಪುಣ್ಯಕ್ಷೇತ್ರವಾಗಿದೆ ಎಂದು ಹೇಳಿದರು.
ಧಾಮದ ಪೂರ್ಣನಿರ್ಮಾಣ, ಭಕ್ತಾದಿಗಳಿಗೆ ಸೌಲಭ್ಯ, ರಕ್ಷಣಾ ವ್ಯವಸ್ಥೆ ಮತ್ತು ಸ್ವಚ್ಛತಾ ಕಾರ್ಯಗಳಲ್ಲಿ ದೇಣಿಗೆ ಮೊತ್ತ ನಿಯೋಜನೆಯಾಗಲಿದೆ.
5 ಕೋಟಿ ಹಣವನ್ನು ದೇವಾಲಯದ ಅಭಿವೃದ್ಧಿ ಕೆಲಸಗಳಲ್ಲಿ ಬಳಕೆಯಾಗಲಿದೆ. ಈ ಹಣ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಕ್ಕಾಗಿ ಸದ್ಬಳಕೆಯಾಗಲಿದೆ ಎಂದು ಆಡಳಿತ ಮಂಡಳಿ ಹೇಳಿಕೆ ಬಿಡುಗಡೆ ಮಾಡಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...