spot_img
spot_img

MUSICAL NIGHT : ಹೊಸ ವರ್ಷ ಸ್ವಾಗತಿಸಲು ಸಜ್ಜಾದ ಶಿವಮೊಗ್ಗ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Shivamogga News :

ಶಿವಮೊಗ್ಗದ ಜನತೆ 2025 ಹೊಸ ವರ್ಷವನ್ನ ಸ್ವಾಗತಿಸಲು ಸಜ್ಜಾಗಿದ್ದಾರೆ. ಹೀಗಾಗಿ, ಜಿಲ್ಲೆಯ ಜನತೆಯನ್ನ ರಂಜಿಸಲು ಮ್ಯೂಸಿಕಲ್ ನೈಟ್ ತಂಡ ಸಿದ್ಧವಾಗಿದೆ. ಜಿಲ್ಲೆಯ ವಿದ್ಯಾನಗರ ಕಂಟ್ರಿ ಕ್ಲಬ್​ನಲ್ಲಿ ದೊಡ್ಡ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಲಾಗಿದೆ. ಇಲ್ಲಿ ಡಿಜೆ ಇದೆ. ಡಿಜೆಯಲ್ಲಿ ರಾಜ್ಯದ ಪ್ರಸಿದ್ಧ ಡಿಜೆಯಾದ ಎಂಸಿರವರು ಬರಲಿದ್ದಾರೆ.

ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬರುವ ಶಿವಮೊಗ್ಗ ಜನತೆಗೆ ಈ ತಂಡ ಸಂಗೀತದ ರಸದೌತಣವನ್ನು ನೀಡಲು ಸಜ್ಜಾಗಿದೆ. ಇದಕ್ಕಾಗಿ ತಂಡ ಎಂಟ್ರಿ ಫೀ ಸಹ ನಿಗದಿಪಡಿಸಿದೆ. ಶಿವಮೊಗ್ಗ ನಗರದಲ್ಲಿ ಕಂಟ್ರಿ ಕ್ಲಬ್ ನಲ್ಲಿ ಮಾತ್ರ ಹೊಸ ವರ್ಷದ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ಸಾಗರ ಪಟ್ಟಣದ ಹೊರ ವಲಯ ತ್ಯಾಗರ್ತಿ ಕ್ರಾಸ್​ನಲ್ಲಿ ಹಾಗೂ ಸಾಗರದ ಗ್ರೀನ್ ಅಂಬಾಸಿ ಹೋಟೆಲ್​ನಲ್ಲೂ ಸಹ ಹೊಸ ವರ್ಷದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಬರುವವರಿಗೆ ಸಂಗೀತದ ರಸದೌತಣದ ಜೊತೆಗೆ ವೆಜ್ ಹಾಗೂ ನಾನ್ ವೆಜ್​ ಊಟವನ್ನು ಸಹ ನೀಡಲಾಗುತ್ತಿದೆ. ಅಲ್ಲದೆ ಮಹಿಳೆಯರಿಗೆ, ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡಲು ಪುರುಷರಿಗೆ ಹಾಗೂ ಮಹಿಳೆಯರಿಗೆ ಬೇರೆ ಬೇರೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಕಾರ್ಯಕ್ರಮದ ಆಯೋಜಕರಾದ ನಿವೇದಿತಾ ಮಾತನಾಡಿ, ‘ಶಿವಮೊಗ್ಗದ ಕಂಟ್ರಿ ಕ್ಲಬ್​ನಲ್ಲಿ ಮ್ಯಾಡ್ ಮ್ಯೂಸಿಕ್ ವತಿಯಿಂದ ‘ಒನ್​​ನೈಟ್​ ಇನ್​ ಟುಮಾರೊಲ್ಯಾಂಡ್’ ಎಂಬ ಹೊಸ ವಿಷಯವನ್ನು ನಾವು ಪ್ರಾರಂಭಿಸುತ್ತಿದ್ದೇವೆ.

ಇಲ್ಲಿ ಇಂದು ಸಂಜೆ 7:30 ರಿಂದ ರಾತ್ರಿ 12:30ರ ತನಕ ಮ್ಯೂಸಿಕ್ ಪಾರ್ಟಿ ಆಯೋಜನೆ ಮಾಡಲಾಗಿದೆ. ಗೇಮ್ ಆಡಿಸಲಾಗುತ್ತಿದೆ. ಬ್ಯಾಂಡ್ ಫಾರ್ಮಸಿಸ್ ಬೆಂಗಳೂರು ಟೀಂ ಬರುತ್ತಿದೆ. ಅಲ್ಲದೆ ಎಲ್ಲರನ್ನು ರಂಜಿಸಲು ಎಂಸಿ ಬರ್ತಾ ಇದ್ದಾರೆ. ಚಂಡೆ ಸಹ ಇರಲಿದೆ. ಚಂಡೆ ಹಾಗೂ ಡಿಜೆ ಜನರನ್ನು ರಂಜಿಸಲಿದ್ದಾರೆ. ಡಿಜೆಯಲ್ಲಿ ಫಿಮೆಲ್​ ಟ್ರಾನ್ಸ್ ಕೂಡಾ ಪ್ಲೇ ಮಾಡ್ತಾ ಇದ್ದಾರೆ. ಇಂದು ಒಂದು ಸಾವಿರ ಜನ ಸೇರುವ ನಿರೀಕ್ಷೆ ಇದೆ’ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...