spot_img
spot_img

NEW GENERAL SECRETARIES OF CONGRESS:11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿ, ಉಸ್ತುವಾರಿಗಳ ನೇಮಕ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಅದೇ ರೀತಿ, ಕರ್ನಾಟಕದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್‌ನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿರುವ ಹರೀಶ್ ಚೌಧರಿ ಬದಲಿಗೆ ಬಾಘೇಲ್ ಅವರನ್ನು ನೇಮಕ ಮಾಡಲಾಗಿದೆ.  CONGRESS​​ ಪಕ್ಷದಲ್ಲಿ ಪ್ರಮುಖ ಪುನಾರಚನೆ ಮಾಡಲಾಗಿದ್ದ, 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​ ಅವರು ನಾಸೀರ್ ಹುಸೇನ್ ಅವರನ್ನು CONGRESS ಅಧ್ಯಕ್ಷರ ಕಚೇರಿ ಜವಾಬ್ದಾರಿಯಿಂದ ಮುಕ್ತಿಗೊಳಿಸಿ, ಜಮ್ಮು ಮತ್ತು ಕಾಶ್ಮೀರದ ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಈವರೆಗೆ ಇಲ್ಲಿ ಭರತ್‌ಸಿಂಗ್​ ಸೋಲಂಕಿ ಉಸ್ತುವಾರಿ ಆಗಿದ್ದರು.CONGRESSನಲ್ಲಿ ಪುನಾರಚನೆಯಾಗಿದ್ದು, ಕರ್ನಾಟಕದ ಬಿ.ಕೆ. ಹರಿಪ್ರಸಾದ್ ಹಾಗೂ ಸೈಯದ್ ನಾಸೀರ್ ಹುಸೇನ್ ಅವರನ್ನು ಹರಿಯಾಣದ ಹಾಗೂ ಜಮ್ಮು & ಕಾಶ್ಮೀರ ಮತ್ತು ಲಡಾಖ್‌ನ ನೂತನ CONGRESS​ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Party Strengthening Responsibility: ಹೀಗಾಗಿ ಅವರ ಮೇಲೆ ಈಗ ಪಕ್ಷದ ಸಂಘಟನೆ ಬಲಗೊಳಿಸುವ ಕಠಿಣ ಸವಾಲು ಇದೆ. ಲಡಾಖ್‌ನಲ್ಲಿ, CONGRESS ಪಕ್ಷವು ಬಿಜೆಪಿ ಮತ್ತು ಎನ್‌ಸಿಗಿಂತ ಹಿಂದೆ ಉಳಿದಿದೆ ಮತ್ತು ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಅವರು ಸ್ಥಳೀಯ ನಾಯಕತ್ವದೊಂದಿಗೆ ಕೆಲಸ ಮಾಡಬೇಕಾಗುತ್ತದೆ.

ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಸೋಲಿನ ನಂತರ, ಅದರ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ರಚಿಸಲಾದ ಸಮಿತಿಯು ಸೋಲಂಕಿ ವಿರುದ್ಧ ವರದಿ ನೀಡಿತ್ತು. ಈಗ ಮತ್ತೆ ಪಕ್ಷವನ್ನು ಪುನರುಜ್ಜೀವನಗೊಳಿಸಲು ಹುಸೇನ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

Rajini in charge of Himachal:ಇಲ್ಲಿ ಈ ಹಿಂದೆ ಹಿರಿಯ ನಾಯಕ ರಾಜೀವ್​​ ಶುಕ್ಲಾ ಅವರು ಉಸ್ತುವಾರಿಯಾಗಿದ್ದರು. ರಜನಿ ಪಟೇಲ್ ಅವರು ರಾಜ್ಯಸಭೆಯಲ್ಲಿ CONGRESS ಪಕ್ಷದ ಮುಖ್ಯ ಸಚೇತಕರಾಗಿದ್ದಾರೆ. ಇನ್ನು ಎಐಸಿಸಿ ಅಧ್ಯಕ್ಷರು ರಾಜ್ಯಸಭಾ ಸದಸ್ಯೆ ರಜನಿ ಪಾಟೀಲ್​ ಅವರನ್ನು ಹಿಮಾಚಲ ಪ್ರದೇಶ ಮತ್ತು ಚಂಡೀಗಢಕ್ಕೆ ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ.

Telangana’s responsibility to Meenakshi Natarajan:ಈ ಬದಲಾವಣೆ ಬಳಿಕ ದೀಪಾ ದಾಸ್ ಮುನ್ಶಿ ಅವರು ಕೇರಳ ಮತ್ತು ಲಕ್ಷದ್ವೀಪಗಳಿಗೆ ಎಐಸಿಸಿ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.ಮಧ್ಯಪ್ರದೇಶದ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್ ತೆಲಂಗಾಣದ ನೂತನ ಉಸ್ತುವಾರಿಯಾಗಿದ್ದಾರೆ. ಈ ರಾಜ್ಯದ ಉಸ್ತುವಾರಿಯಾಗಿ ಮೊದಲು ದೀಪಾ ದಾಸ್ ಮುನ್ಶಿ ಅವರು ಡಿಸೆಂಬರ್ 2023 ರಿಂದ ಹೊಣೆ ಹೊತ್ತಿದ್ದರು.

BK Hariprasad is responsible for strengthening the Haryana party:ಮಣಿಪುರ, ತ್ರಿಪುರ, ಸಿಕ್ಕಿಂ ಮತ್ತು ನಾಗಾಲ್ಯಾಂಡ್‌ನಲ್ಲಿCONGRESS ವ್ಯವಹಾರಗಳನ್ನು ಸಪ್ತಗಿರಿ ಶಂಕರ್ ಉಲಕ ನೋಡಿಕೊಳ್ಳುತ್ತಾರೆ. ಕೃಷ್ಣ ಅಳ್ಳವರು ಬಿಹಾರದ ನೂತನ ಉಸ್ತುವಾರಿಯಾಗಿ ಹೊಣೆ ಹೊರಿಸಲಾಗಿದೆ. ಇನ್ನು ದೀಪಕ್ ಬಬಾರಿಯಾ ಬದಲಿಗೆ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣದ ಉಸ್ತುವಾರಿಯನ್ನಾಗಿ ಖರ್ಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಗಿರೀಶ್​ ಚೋಡಂಕರ್ ಅವರನ್ನು ತಮಿಳುನಾಡು ಮತ್ತು ಪುದುಚೇರಿಗೆ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಅಜಯ್ ಕುಮಾರ್ ಲಲ್ಲು ಒಡಿಶಾಗೆ ಮತ್ತು ಕೆ.ರಾಜು ಜಾರ್ಖಂಡ್‌ಗೆ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.ಹಾಗೇ ನಿರ್ಗಮಿಸುವ ಪ್ರಧಾನ ಕಾರ್ಯದರ್ಶಿಗಳು/ಪ್ರಭಾರಿಗಳಾಗಿದ್ದ ದೀಪಕ್​ ಬಾಬ್ರಿಯಾ, ಮೋಹನ್ ಪ್ರಕಾಶ್, ಭರತ್ ಸಿಂಗ್ ಸೋಲಂಕಿ, ರಾಜೀವ್ ಶುಕ್ಲಾ, ಅಜೋಯ್ ಕುಮಾರ್ ಮತ್ತು ದೇವೇಂದ್ರ ಯಾದವ್ ಕೊಡುಗೆಗಳನ್ನು ಪಕ್ಷವು ಶ್ಲಾಘಿಸಿದೆ.

 

ಇದನ್ನು ಓದಿರಿ :Manipur Stalemate BJP In Dilemma, State May Have 3 Months Of President’s Rule

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KL RAHUL SACRIFICE:ಕನ್ನಡಿಗ ಕೆ.ಎಲ್.ರಾಹುಲ್ ತ್ಯಾಗಕ್ಕೆ ಫ್ಯಾನ್ಸ್ ಮೆಚ್ಚುಗೆ

KL Rahul: ಹೌದು, ಬಾಂಗ್ಲಾ ನೀಡಿದ್ದ 228 ರನ್​ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್​ ಶರ್ಮಾ (41), ವಿರಾಟ್​ ಕೊಹ್ಲಿ...

HUAWEI MATE XT TRI FOLD PHONE:ಇದರ ಬೆಲೆ 2 ಬುಲೆಟ್ ಬೈಕ್ಗಳಿಗೆ ಸಮ!

Huaveli Re-Launched Ultimate Design News: ಇತ್ತೀಚೆಗೆ ಪ್ರಪಂಚದಾದ್ಯಂತ ಆಯ್ದ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿದೆ. ಆದ್ರೆ ಇದರ ಬೆಲೆ ಎರಡು ರಾಯಲ್​ ಎನ್​ಫೀಲ್ಡ್​ಗೆ ಸಮ. ರಾಯಲ್​ ಎನ್‌ಫೀಲ್ಡ್...

PAYTM SOLAR SOUND BOX:ಸೂರ್ಯನ ಬೆಳಕಿನಿಂದಲೇ ಚಾರ್ಜ್ ಆಗುತ್ತೆ ‘ಪೇಟಿಎಂ ಸೌಂಡ್ಬಾಕ್ಸ್’

Paytm Solar SoundBoss News: ಇತ್ತೀಚೆಗೆ PAYTMನ ಪೋಷಕ ಕಂಪನಿ 'ಒನ್97 ಕಮ್ಯುನಿಕೇಷನ್ಸ್' ಮತ್ತೊಂದು ವಿಷಯದೊಂದಿಗೆ ಸುದ್ದಿಯಲ್ಲಿದೆ. ವ್ಯಾಪಾರಿಗಳಿಗಾಗಿ ದೇಶದ ಮೊದಲ ಸೌರಶಕ್ತಿ ಚಾಲಿತ 'ಸೋಲಾರ್​...

UNSAFE MEDICINES:9 ಔಷಧಗಳ ನಿರ್ಬಂಧಿಸುವಂತೆ ಕೇಂದ್ರಕ್ಕೆ ಸಚಿವ ಗುಂಡೂರಾವ್ ಪತ್ರ

Bangalore News: ಈ ಕುರಿತು ನಡ್ಡಾರಿಗೆ 9 MEDICINES ಕಂಪನಿಗಳ ಅಸುರಕ್ಷಿತ MEDICINES ವಿವರಗಳನ್ನು ಉಲ್ಲೇಖಿಸಿ ದಿನೇಶ್ ಗುಂಡೂರಾವ್ ಫೆ.20ರಂದು ಪತ್ರ ಬರೆದಿದ್ದಾರೆ.ವಿವಿಧ 9 MEDICINES...