spot_img
spot_img

PAKISTAN TTP : ಟಿಟಿಪಿ ಉಗ್ರರಿಂದ ಪರಮಾಣು ಆಯೋಗದ 16 ಕಾರ್ಮಿಕರ ಅಪಹರಣ,

spot_img
spot_img

Share post:

Islamabad News:

PAKISTAN ದಲ್ಲಿ ಟಿಟಿಪಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, 16 ಕಾರ್ಮಿಕರನ್ನು ಅಪಹರಿಸಲಾಗಿದೆ.ಅಪಹರಣದ ಮಾಹಿತಿ ತಿಳಿಯುತ್ತಿದ್ದಂತೆಯೇ ಶೋಧ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಎಂಟು ಒತ್ತೆಯಾಳುಗಳನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಿರಂತರ ಉಗ್ರಗಾಮಿ ಚಟುವಟಿಕೆಗಳಿಂದ ಬಾಧಿತವಾಗಿರುವ ಲಕ್ಕಿ ಮಾರ್ವತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

PAKISTAN ದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ತೆಹ್ರೀಕ್-ಇ-ತಾಲಿಬಾನ್ PAKISTAN (ಟಿಟಿಪಿ) ಬಂಡುಕೋರರು ಪಾಕಿಸ್ತಾನ ಪರಮಾಣು ಶಕ್ತಿ ಆಯೋಗದ (ಪಿಎಇಸಿ) 16 ಉದ್ಯೋಗಿಗಳನ್ನು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಖಬುಲ್ ಖೇಲ್ ಅಣುಶಕ್ತಿ ಗಣಿಗಾರಿಕೆ ಯೋಜನಾ ಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದ ಉದ್ಯೋಗಿಗಳನ್ನು ಭಾರಿ ಶಸ್ತ್ರಸಜ್ಜಿತ ಉಗ್ರರು ರಸ್ತೆ ಮಧ್ಯದಲ್ಲಿ ತಡೆದು ದಾಳಿ ನಡೆಸಿದ್ದಾರೆ.

ನಂತರ ಅವರೆಲ್ಲರನ್ನು ಅಪಹರಿಸಿ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಬೆಂಕಿ ಇಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆಯ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಮೂವರು ಗಾಯಗೊಂಡಿದ್ದು, ಅದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಇನ್ನುಳಿದ ಒತ್ತೆಯಾಳುಗಳನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದೆ.ಪಾಕಿಸ್ತಾನದ ಜೈಲುಗಳಲ್ಲಿರುವ ಟಿಟಿಪಿ ಕೈದಿಗಳನ್ನು ಬಿಡುಗಡೆ ಮಾಡುವುದು ಸೇರಿದಂತೆ ಸಂಘಟನೆಯ ಇತರ ಬೇಡಿಕೆಗಳನ್ನು ಈಡೇರಿಸುವ ಮೂಲಕ ತಮ್ಮನ್ನು ಬಿಡುಗಡೆ ಮಾಡಿಸಿಕೊಳ್ಳಬೇಕೆಂದು ಒತ್ತೆಯಾಳುಗಳು ವೀಡಿಯೊದಲ್ಲಿ ಮನವಿ ಮಾಡಿರುವುದು ಕಾಣಿಸುತ್ತದೆ.

ವೀಡಿಯೊ ಅಥವಾ ಉಗ್ರಗಾಮಿಗಳ ಹೇಳಿಕೆಗಳ ಸಾಚಾತನದ ಬಗ್ಗೆ ಇನ್ನಷ್ಟೇ ಪರಿಶೀಲನೆ ನಡೆಯಬೇಕಿದೆ.ಅಪಹರಣದ ಜವಾಬ್ದಾರಿ ಹೊತ್ತುಕೊಂಡಿರುವ ಟಿಟಿಪಿ, ಅಪಹರಣಕ್ಕೊಳಗಾದ ಉದ್ಯೋಗಿಗಳನ್ನು ತೋರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದೆ.ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ಈ ಪ್ರದೇಶದಲ್ಲಿ ಆಗಾಗ ಭದ್ರತಾ ಅಪಾಯ ಎದುರಾಗುತ್ತಿರುವುದನ್ನು ಈ ಘಟನೆಯು ಎತ್ತಿ ತೋರಿಸಿದೆ.

ಅಪಹರಣಕ್ಕೊಳಗಾದ ಉದ್ಯೋಗಿಗಳು ಇಂಧನ, ಕೃಷಿ ಮತ್ತು ಔಷಧದಂತಹ ಕ್ಷೇತ್ರಗಳಲ್ಲಿ ಶಾಂತಿಯುತ ಪರಮಾಣು ಬಳಕೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದ ಪಿಎಇಸಿ ಅಡಿಯಲ್ಲಿನ ಗಣಿಗಾರಿಕೆ ಯೋಜನೆಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ.ಇತ್ತೀಚಿನ ತಿಂಗಳುಗಳಲ್ಲಿ PAKISTAN ದಲ್ಲಿ ಉಗ್ರಗಾಮಿ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಈ ಅಪಹರಣ ಘಟನೆಯ ಒಂದು ದಿನ ಮೊದಲು, ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಯ ಪ್ರತ್ಯೇಕತಾವಾದಿ ಉಗ್ರಗಾಮಿಗಳು ಬಲೂಚಿಸ್ತಾನದಲ್ಲಿ ಸರ್ಕಾರಿ ಕಚೇರಿಗಳು ಮತ್ತು ದುರ್ಗಮ ಪ್ರದೇಶದ ಜಿಲ್ಲೆಗಳಲ್ಲಿನ ಬ್ಯಾಂಕ್ ಮೇಲೆ ದಾಳಿ ಮಾಡಿದ್ದರು.

ಈ ಘಟನೆಗಳಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲವಾದರೂ, ಈ ದಾಳಿಯು ದೇಶಾದ್ಯಂತ ಭಯೋತ್ಪಾದಕ ಕೃತ್ಯಗಳ ತೀವ್ರತೆಯನ್ನು ಪ್ರತಿಬಿಂಬಿಸುತ್ತದೆ. ಟಿಟಿಪಿ ಮತ್ತು ಬಲೂಚ್ ದಂಗೆಕೋರರು ಅಫ್ಘಾನಿಸ್ತಾನದ ಬೆಟ್ಟಗುಡ್ಡಗಳಲ್ಲಿ ಅವಿತುಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದುPAKISTAN ಅಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನು ಓದಿರಿ : HOMELESS PEOPLE DIED : ದೆಹಲಿಯಲ್ಲಿ 474 ನಿರಾಶ್ರಿತರು ಸಾವು,

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...