spot_img
spot_img

PM MODI INAUGURATES BMGE 2025 : ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ ಉದ್ಘಾಟಿಸಿದ ಪ್ರಧಾನಿ ಮೋದಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

PM Modi Inaugurates BMGE 2025:

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ ಕಾರ್ಯಕ್ರಮಕ್ಕೆ PM MODI INAUGURATES BMGE 2025  ನೀಡಿದ್ದು, 5 ದಿನ ನಡೆಯುವ ಈ ಶೋನಲ್ಲಿ 100 ಕ್ಕೂ ಹೆಚ್ಚು ಹೊಸ ಉತ್ಪನ್ನಗಳು ಬಿಡುಗಡೆಯಾಗಲಿವೆ.  ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಎಚ್‌ಡಿ ಕುಮಾರಸ್ವಾಮಿ, ಜಿತನ್ ರಾಮ್ ಮಾಂಝಿ, ಮನೋಹರ್ ಲಾಲ್, ಪಿಯೂಷ್ ಗೋಯಲ್ ಮತ್ತು ಹರ್ದೀಪ್ ಸಿಂಗ್ ಪುರಿ ಮತ್ತು ಆಟೋಮೊಬೈಲ್ ವಲಯದ ನಾಯಕರು ಉದ್ಘಾಟನೆ ವೇಳೆ ಸಾಥ್​ ನೀಡಿದರು.

ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ ಮೊಬಿಲಿಟಿ PM MODI INAUGURATES BMGE 2025 ಭಾರತದ ವಾಹನ ಉದ್ಯಮವು ಅದ್ಭುತವಾಗಿದೆ ಮತ್ತು ಭವಿಷ್ಯಕ್ಕೂ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಭಾರತ ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾದಾಗ ಭಾರತದ ವಾಹನ ಮಾರುಕಟ್ಟೆ ಎಲ್ಲಿರುತ್ತದೆ ಎಂದು ಊಹಿಸಿ.

ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣವು ಮೊಬಿಲಿಟಿ ಕ್ಷೇತ್ರದ ಅಭೂತಪೂರ್ವ ವಿಸ್ತರಣೆಯ ಪ್ರಯಾಣವೂ ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ನಾನು ಕೊನೆಯ ಬಾರಿ ನಿಮ್ಮೊಂದಿಗೆ ಬಂದಾಗ ಲೋಕಸಭಾ ಚುನಾವಣೆಗಳು ದೂರವಿರಲಿಲ್ಲ. ಆ ಸಮಯದಲ್ಲಿ ನಿಮ್ಮೆಲ್ಲರ ವಿಶ್ವಾಸದಿಂದಾಗಿ ಮುಂದಿನ ಬಾರಿಯೂ ನಾನು ಖಂಡಿತವಾಗಿಯೂ ‘ಭಾರತ್ ಮೊಬಿಲಿಟಿ ಎಕ್ಸ್‌ಪೋ’ಗೆ ಬರುತ್ತೇನೆ ಎಂದು ಹೇಳಿದ್ದೆ.

ದೇಶವು ನಮಗೆ ಮೂರನೇ ಬಾರಿಗೆ ಆಶೀರ್ವದಿಸಿತು. ನೀವೆಲ್ಲರೂ ನನ್ನನ್ನು ಇಲ್ಲಿಗೆ ಕರೆದಿದ್ದೀರಿ. ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಈ ವರ್ಷ ಇಂಡಿಯಾ ಮೊಬಿಲಿಟಿ ಎಕ್ಸ್‌ಪೋದ ವ್ಯಾಪ್ತಿ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ತಿಳಿಸಿದರು. ಭಾರತದ ವಾಹನ ಉದ್ಯಮದಲ್ಲಿ ನಾವು ಈ ಆಕಾಂಕ್ಷೆಗಳನ್ನು ನೋಡುತ್ತೇವೆ. ಕಳೆದ ವರ್ಷದಲ್ಲಿ, ಭಾರತದ ವಾಹನ ಉದ್ಯಮವು ಸುಮಾರು ಶೇಕಡ 12 ರಷ್ಟು ಬೆಳೆದಿದೆ. ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಎಂಬ ಮಂತ್ರವನ್ನು ಅನುಸರಿಸಿ, ಈಗ ರಫ್ತು ಕೂಡ ಹೆಚ್ಚುತ್ತಿದೆ.

ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣವು ಅಭೂತಪೂರ್ವ ಪರಿವರ್ತನೆ ಮತ್ತು ಚಲನಶೀಲತೆಯ ಕ್ಷೇತ್ರದ ಹಲವು ಪಟ್ಟು ವಿಸ್ತರಣೆಯ ಪ್ರಯಾಣವಾಗಲಿದೆ ಎಂದು ಪ್ರಧಾನಿ ಹೇಳಿದರು. ಮುಂದಿನ 5-6 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಇಲ್ಲಿಗೆ ಬರುತ್ತಾರೆ.

ಇಲ್ಲಿ ಅನೇಕ ಹೊಸ ವಾಹನಗಳು ಕೂಡ ಬಿಡುಗಡೆಯಾಗಲಿವೆ. ಇದು ಭಾರತದಲ್ಲಿ ಚಲನಶೀಲತೆಯ ಭವಿಷ್ಯದ ಬಗ್ಗೆ ಎಷ್ಟು ಸಕಾರಾತ್ಮಕತೆ ಇದೆ ಎಂಬುದನ್ನು ತೋರಿಸುತ್ತದೆ. ಇಂದಿನ ಭಾರತವು ಆಕಾಂಕ್ಷೆಗಳಿಂದ ತುಂಬಿದೆ, ಯುವಕರು ಶಕ್ತಿಯಿಂದ ತುಂಬಿದ್ದಾರೆ ಎಂದು ಪ್ರಧಾನಿ ಹೇಳಿದರು.

ಭಾರತದಲ್ಲಿ ಪ್ರತಿ ವರ್ಷ ಮಾರಾಟವಾಗುವ ವಾಹನಗಳ ಸಂಖ್ಯೆಯಷ್ಟು ಜನಸಂಖ್ಯೆಯನ್ನು ಅನೇಕ ದೇಶಗಳು ಹೊಂದಿಲ್ಲ ಎಂಬುದು ಗಮನಾರ್ಹ. ಕಳೆದ ಬಾರಿ 800 ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಿದ್ದರು, 1.5 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡಿದ್ದರು.

ಈ ಬಾರಿ ಭಾರತ್ ಮಂಟಪದ ಜೊತೆಗೆ ಈ ಪ್ರದರ್ಶನವನ್ನು ದ್ವಾರಕಾದ ಯಶೋಭೂಮಿ ಮತ್ತು ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಸೆಂಟರ್‌ನಲ್ಲಿಯೂ ಆಯೋಜಿಸಲಾಗಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಬೆಂಬಲದೊಂದಿಗೆ ನಡೆಯುತ್ತಿರುವ ಈ ಜಾಗತಿಕ ಎಕ್ಸ್‌ಪೋವನ್ನು, ಭಾರತೀಯ ಆಟೋಮೊಬೈಲ್ ತಯಾರಕರ ಸಂಘ (SIAM), ಭಾರತೀಯ ಆಟೋಮೋಟಿವ್ ಕಾಂಪೊನೆಂಟ್ ತಯಾರಕರ ಸಂಘ (ACMA), ಭಾರತ ಇಂಧನ ಸಂಗ್ರಹ ಒಕ್ಕೂಟ (IESA), ಆಟೋಮೋಟಿವ್ ಟೈರ್ ತಯಾರಕರ ಸಂಘ (ATMA), ಭಾರತೀಯ ನಿರ್ಮಾಣ ಸಲಕರಣೆ ತಯಾರಕರ ಸಂಘ (ICEMA), ನಾಸ್ಕಾಮ್, ಭಾರತೀಯ ಉಕ್ಕು ಸಂಘ, ಭಾರತದ ವಸ್ತು ಮರುಬಳಕೆ ಸಂಘ ಮತ್ತು CII ಸೇರಿದಂತೆ ಉದ್ಯಮ ಸಂಘಗಳು ಆಯೋಜಿಸುತ್ತಿವೆ. ಇದು 5,100 ಅಂತರರಾಷ್ಟ್ರೀಯ ಭಾಗವಹಿಸುವವರನ್ನು ಒಳಗೊಂಡಿರುತ್ತದೆ ಮತ್ತು ಪ್ರಪಂಚದಾದ್ಯಂತ 5 ಲಕ್ಷಕ್ಕೂ ಹೆಚ್ಚು ಸಂದರ್ಶಕರನ್ನು ಆಕರ್ಷಿಸುವ ಅಂದಾಜಿದೆ.

ಇದನ್ನು ಓದಿರಿ : BBMP CAMPAIGN : 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...