spot_img
spot_img

PRAWESH VERMA ON ARVIND KEJRIWAL : ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಠೇವಣಿ ಕಳೆದುಕೊಳ್ಳುತ್ತಾರೆ

spot_img
spot_img

Share post:

New Delhi News:

ಪ್ರತಿಭಟನಾ ನಿರತ ಯುವಕರ ಮೇಲೆ ಅರವಿಂದ್ KEJRIWAL ತಮ್ಮ ಕಾರು ಹರಿಸಲು ಪ್ರಯತ್ನಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರವೇಶ್ ವರ್ಮಾ ಆರೋಪಿಸಿದ್ದಾರೆ.ಈಗ ಮತ್ತೆ, ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರವೇಶ್ ವರ್ಮಾ ಅವರು ಮಾಜಿ ಸಿಎಂ ಅರವಿಂದ್ KEJRIWAL ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಮಾತಿನ ಸಮರ ಮುಂದುವರೆದಿದೆ.

KEJRIWAL​ ಅವರ ಬೆಂಗಾವಲು ವಾಹನದ ಮೇಲಿನ ದಾಳಿ ಕುರಿತು ಪ್ರತಿಕ್ರಿಯಿಸಿ, ”ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್​ KEJRIWAL​ ಅವರಿಗೆ ಜನರು ಕಪ್ಪು ಬಾವುಟಗಳನ್ನು ತೋರಿಸಿ, ಉದ್ಯೋಗ ಹಾಗೂ ಮತ್ತಿತರ ಸಮಸ್ಯೆಗಳಿಗೆ ಉತ್ತರ ನೀಡುವಂತೆ ಕೇಳುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.”KEJRIWAL ಅವರು ಹೋದಲ್ಲೆಲ್ಲಾ ಜನರು ಕಪ್ಪು ಬಾವುಟ ತೋರಿಸಿ ಉತ್ತರಕ್ಕಾಗಿ ಆಗ್ರಹಿಸುತ್ತಿದ್ದಾರೆ.

ಅವರೆಲ್ಲರೂ ಗೂಂಡಾಗಳಾಗಿದ್ದರೆ, ದೆಹಲಿಯ ಜನರೆಲ್ಲರೂ ಗೂಂಡಾಗಳು ಎಂದಾಗುತ್ತದೆ. ಯಾಕೆಂದರೆ ದೆಹಲಿಯ ಎಲ್ಲ ಜನರೂ KEJRIWAL​ ಅವರನ್ನು ಪ್ರಶ್ನಿಸುತ್ತಿದ್ದಾರೆ. ಈ ಬಾರಿ KEJRIWAL​​ ಠೇವಣಿ ಕಳೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.ನಾನು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. ಯುವಕರ ವಿರುದ್ಧ ಪೊಲೀಸರಿ​ಗೂ ದೂರು ನೀಡಲಾಗುವುದು. ಕೊಲೆ ಯತ್ನ ಪ್ರಕರಣ ದಾಖಲಿಸಲಾಗುವುದು. KEJRIWAL ಅವರನ್ನು ಬಂಧಿಸಬೇಕು, ಅವರ ಕಾರನ್ನು ವಶಪಡಿಸಿಕೊಳ್ಳಬೇಕು ಮತ್ತು ಅವರ ಚಾಲಕನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಬೇಕು” ಎಂದು ಪ್ರವೇಶ್ ವರ್ಮಾ ಆಗ್ರಹಿಸಿದ್ದಾರೆ.

”ವಾಲ್ಮೀಕಿ ಸಮುದಾಯದ ಮೂವರು ಯುವಕರು KEJRIWAL​​ ಅವರನ್ನು ಉದ್ಯೋಗದ ಬಗ್ಗೆ ಕೇಳಿ ತಪ್ಪು ಮಾಡಿದ್ದಾರೆ. ಯಾರಾದರೂ KEJRIWAL​​ ಅವರನ್ನು ಕೇಳಿದರೆ, ಆಪ್​ ಕಾರ್ಯಕರ್ತರು ಅವರನ್ನು ಥಳಿಸುತ್ತಾರೆ. ನಂತರ KEJRIWAL​ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳುತ್ತಾರೆ. ಚುನಾವಣಾ ಆಯೋಗವಾಗಲಿ, ಪೊಲೀಸರಾಗಲಿ ಇದರ ಬಗ್ಗೆ ಗಮನ ಹರಿಸುತ್ತಿಲ್ಲ.”ಸ್ಥಳೀಯ ಯುವಕರು KEJRIWAL ಅವರನ್ನು ಪ್ರಶ್ನಿಸುವ ಧೈರ್ಯ ಮಾಡಿದ್ದರು. ಮತ್ತು KEJRIWAL ಅವರನ್ನು ತಮ್ಮ ಕಾರಿನ ಕೆಳಗೆ ಹತ್ತಿಕ್ಕಲು ಸನ್ನೆ ಮಾಡಿದ್ದರು. ಅರವಿಂದ್ KEJRIWAL ಈ ರೀತಿ ದಲಿತ ಸಮುದಾಯವನ್ನು ಹತ್ತಿಕ್ಕುತ್ತಾರೆಯೇ?” ಎಂದು ವರ್ಮಾ ಪ್ರಶ್ನಿಸಿದರು.

What was it?: ಈ ದಾಳಿಗೆ ಆಮ್​ ಆದ್ಮಿ ಪಕ್ಷ ವರ್ಮಾ ಅವರ ಮೇಲೆ ಆರೋಪ ಮಾಡಿತ್ತು. ಪ್ರವೇಶ್​ ವರ್ಮಾ ಅವರ ಗೂಂಡಾಗಳು KEJRIWAL​ ಅವರ ಮೇಲೆ ದಾಳಿ ಮಾಡಿದ್ದಾರೆ. ಸೋಲಿನ ಭಯದಿಂದ ಬಿಜೆಪಿ ಭಯಭೀತವಾಗಿದೆ ಎಂದು ಆಪ್​ ದೂರಿತ್ತು.

ಅರವಿಂದ್​ KEJRIWAL​ ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದಾಗ ಕೆಲವರು ಅವರಿಗೆ ಕಪ್ಪು ಬಾವುಟಗಳನ್ನು ತೋರಿಸಿ ಘೋಷಣೆಗಳನ್ನು ಕೂಗಿದ್ದರು. ಆಗ KEJRIWAL​ ಅವರಿದ್ದ ಕಾರು ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದರು.

ಇದನ್ನು ಓದಿರಿ : FIRST 3 HOSTAGES ARRIVE IN ISRAEL : ಇಸ್ರೇಲ್ – ಹಮಾಸ್ ಕದನವಿರಾಮ ಒಪ್ಪಂದ

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...