spot_img
spot_img

ಗರ್ಭಧಾರಣೆ-ಮಗುವಿಗೆ 2 ವರ್ಷ ತುಂಬುವವರೆಗೆ ಸಕ್ಕರೆ ಸೇವನೆಗೆ ನಿರ್ಬಂಧ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಬದಲಾದ ಜೀವನಶೈಲಿಯಿಂದ ಇಂದು ಮಕ್ಕಳಲ್ಲಿಯೂ ಮಧುಮೇಹವನ್ನು ಸರ್ವೇಸಾಮಾನ್ಯವಾಗಿ ನೋಡುತ್ತಿದ್ದೇವೆ. ಇದು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅಪಾಯಕಾರಿ. ಹುಟ್ಟಲಿರುವ ಮಗುವಿನ ಆರೋಗ್ಯವು ತಾಯಿಯ ಆರೋಗ್ಯದ ಮೇಲೆ ಅವಲಂಬಿತವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಇತ್ತೀಚಿನ ಅಧ್ಯಯನವೊಂದು ಹಲವು ಕುತೂಹಲಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ.

ತಾಯಿಯು ಗರ್ಭಧಾರಣೆಯಿಂದ ಮಗು ಹುಟ್ಟಿದ 2 ವರ್ಷಗಳ ವರೆಗೆ ಮಕ್ಕಳಿಗೆ ಸಕ್ಕರೆ ಅಂಶಗಳನ್ನು ಪರಿಚಯಿಸದೇ ಇದ್ದರೆ, ವಯಸ್ಕ ಜೀವನದಲ್ಲಿ ದೀರ್ಘಕಾಲದ ಕಾಯಿಲೆಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಇದು ಕಡಿಮೆ ಮಾಡುತ್ತದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ತಾಯಿಯು ಗರ್ಭಧಾರಣೆಯಿಂದ ಮಗು ಹುಟ್ಟಿದ 2 ವರ್ಷಗಳ ವರೆಗೆ ಮಕ್ಕಳಿಗೆ ಸಕ್ಕರೆ ಅಂಶಗಳನ್ನು ಪರಿಚಯಿಸದೇ ಇದ್ದರೆ, ವಯಸ್ಕ ಜೀವನದಲ್ಲಿ ದೀರ್ಘಕಾಲದ ಕಾಯಿಲೆಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಇದು ಕಡಿಮೆ ಮಾಡುತ್ತದೆ ಎಂದು ಹೇಳಿದೆ.

ಮಕ್ಕಳ ಆರಂಭಿಕ ಜೀವನದಲ್ಲಿ ಸಕ್ಕರೆಯ ಸೇವನೆಯನ್ನು ಕಡಿಮೆ ಮಾಡುವುದರಿಂದ ಟೈಪ್ 2 ಮಧುಮೇಹವನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಶೇ.35% ರಷ್ಟು ಮತ್ತು ಅಧಿಕ ರಕ್ತದೊತ್ತಡವು ಶೇ.20 ರಷ್ಟು ಕಡಿಮೆ ಮಾಡಬಹುದು ಎಂದು ಅಧ್ಯಯನ ತಿಳಿಸಿದೆ.

ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯ ಈ ಅಧ್ಯಯನ ನಡೆಸಿದ್ದು, ಈ ಅಧ್ಯಯನವು ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ನ್ಯೂಟ್ರಿಷನ್ ಅಡ್ವೊಕಸಿಯ ಸಂಚಾಲಕ ಡಾ ಅರುಣ್ ಗುಪ್ತಾ ಅವರು ಮಾತನಾಡಿ, ಗರ್ಭಾವಸ್ಥೆಯಲ್ಲಿ ಮತ್ತು ಬಾಲ್ಯದಲ್ಲಿ ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವಂತೆ ಅಧ್ಯಯನ ಸಲಹೆ ನೀಡಿದೆ ಎಂದು ಹೇಳಿದ್ದಾರೆ,

ಅಧ್ಯಯನ ನಡೆಸಿದ ಸಂಶೋಧಕರು ಪಡಿತರ ವಿತರಣೆಗೂ ಮುನ್ನ ಹಾಗೂ ನಂತರದ ಗರ್ಭಿಣಿಯರ ಆರೋಗ್ಯ ಮತ್ತು ಮಕ್ಕಳ ಆರೋಗ್ಯವನ್ನು ಅವಲೋಕನ ನಡೆಸಿದ್ದು, ಇದರ ನಡುವಿನ ವ್ಯತ್ಯಾಸವು ಮಗುವಿನ ಜೀವನದ ಮೊದಲ 1,000 ದಿನಗಳು ಅದರ ಭವಿಷ್ಯದ ಆರೋಗ್ಯವನ್ನು ರೂಪಿಸಲು ನಿರ್ಣಾಯಕ ಅವಧಿಯಾಗಿದೆ ಎಂಬುದನ್ನು ಕಂಡುಕೊಂಡಿದೆ.

ಸೆಪ್ಟೆಂಬರ್ 1953 ರಲ್ಲಿ 2ನೇ ಮಹಾಯುದ್ಧದಿಂದ ಬ್ರಿಟನ್ ಚೇತರಿಸಿಕೊಳ್ಳುತ್ತಿರುವಾಗ ಸಕ್ಕರೆ ಪಡಿತರದಿಂದಾಗಿ ಸುಮಾರು 60,000 ಜನರು ಪ್ರಭಾವಿತರಾಗಿದ್ದರು. ಸಕ್ಕರೆ ಪಡಿತರ ವಿತರಣೆ ಬಳಿಕ ಜನರದಲ್ಲಿ ದೀರ್ಘಕಾಲಿಕ ರೋಗಗಳಿಗೆ ಒಳಗಾಗುವುದು ಹೆಚ್ಚಾಗಿರವುದನ್ನು ಅಧ್ಯಯನ ಪತ್ತೆ ಮಾಡಿದೆ.

ಗರ್ಭಾವಸ್ಥೆಯಲ್ಲಿ ತಾಯಿ ಸೇವನೆ ಮಾಡುವ ಆಹಾರವು ಅತ್ಯಂತ ಮುಖ್ಯವಾಗಿದೆ, ಕಡಿಮೆ ಸಕ್ಕರೆಯ ಆಹಾರದ ಮೂರನೇ ಒಂದು ಭಾಗವು ಗರ್ಭದಲ್ಲಿರುವಾಗಲೇ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಆದಾಗ್ಯೂ, ಮಗುವಿಗೆ ಗರ್ಭದಲ್ಲಿರುವಾಗ ಸಕ್ಕರೆ ಅಂಶವನ್ನು ಕಡಿತಗೊಳಿಸಿದಾಗ ಮತ್ತು ಘನ ಆಹಾರಗಳ ಮೂಲಕ ಆಹಾರ ಸೇವಿಸುವಂತೆ ಮಾಡಿದರೆ ಆರೋಗ್ಯದಲ್ಲಿ ಸುಧಾರಣೆಗಳನ್ನು ತರಬಹುದು ಎಂದು ಅಧ್ಯಯನ ತಿಳಿಸಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...