spot_img
spot_img

ಪ್ರಧಾನಿ, ರಕ್ಷಣಾ ಸಚಿವರ ಭೇಟಿ : ಸಿಎಂ ಫಡ್ನವಿಸ್​

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಸಿಎಂ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​, ಶಿವಾಜಿ ಪ್ರತಿಮೆಯನ್ನು ಉಡುಗೊರೆಯಾಗಿ ಕೊಟ್ಟರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಮಹಾರಾಷ್ಟ್ರದ ಅಭಿವೃದ್ಧಿಗೆ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲಕ್ಕಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದ ಫಡ್ನವೀಸ್​, ಅವರ ಮಾರ್ಗದರ್ಶನದಲ್ಲಿ ರಾಜ್ಯವನ್ನು ‘ಮುಂದಿನ ಹಂತ’ಕ್ಕೆ ಕೊಂಡೊಯ್ಯುವ ಪ್ರತಿಜ್ಞೆ ಮಾಡಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಮಹಾ ಸಿಎಂ, “ಕಳೆದ 10 ವರ್ಷಗಳಲ್ಲಿ, ನಿಮ್ಮ ಬೆಂಬಲದೊಂದಿಗೆ ಮಹಾರಾಷ್ಟ್ರ ಪ್ರತಿಯೊಂದು ಕ್ಷೇತ್ರದಲ್ಲೂ ನಂಬರ್ 1 ಆಗಿದೆ. ಈಗ ನಿಮ್ಮ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಈ ವಿಕಾಸ ಪಯಣವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಗುರಿಯನ್ನು ಹೊಂದಿದ್ದೇವೆ” ಎಂದು ಬರೆದುಕೊಂಡಿದ್ದಾರೆ.
ಡಿಸೆಂಬರ್ 5ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಫಡ್ನವಿಸ್ ಅವರು ಇದೇ ಮೊದಲ ಬಾರಿಗೆ ಪ್ರಧಾನಿಯನ್ನು ಭೇಟಿಯಾದರು.
“ಮಹಾರಾಷ್ಟ್ರದ ಅಭಿವೃದ್ಧಿಯ ಬೆನ್ನಿಗೆ ನಿಂತ ಪ್ರಧಾನಿ ಮೋದಿ ಅವರ ಅಮೂಲ್ಯವಾದ ಸಮಯ, ಮಾರ್ಗದರ್ಶನ, ಆಶೀರ್ವಾದಕ್ಕಾಗಿ ಅವರಿಗೆ ಅತ್ಯಂತ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮಂತಹ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಇನ್ನೂ ಹೆಚ್ಚು ಕೆಲಸ ಮಾಡಲು ನೀವು ಸ್ಫೂರ್ತಿಯಾಗಿದ್ದೀರಿ” ಎಂದು ತಿಳಿಸಿದ್ದಾರೆ.
ಬಳಿಕ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ, ಆಶೀರ್ವಾದ ಪಡೆದರು. ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಫಡ್ನವಿಸ್​ ಅವರ ಮುಂದಿನ ಅವಧಿ ಯಶಸ್ವಿಯಾಗಲಿ ಎಂದು ಸಿಂಗ್​ ಹಾರೈಸಿದರು.
ರಾಜನಾಥ್​ ಸಿಂಗ್​ ಅವರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, “ಮಹಾರಾಷ್ಟ್ರದ ಕ್ರಿಯಾಶೀಲ ಮುಖ್ಯಮಂತ್ರಿ ದೇವೇಂದ್ರ ಫಡ್ನಿವಿಸ್​ ಅವರನ್ನು ಭೇಟಿ ಮಾಡಿದೆ. ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಫಡ್ನವೀಸ್​, ಮಹಾರಾಷ್ಟ್ರದ ಅಭಿವೃದ್ಧಿ ಪಯಣಕ್ಕೆ ಹೊಸ ವೇಗವನ್ನು ನೀಡಲಿದ್ದಾರೆ ಎನ್ನುವ ವಿಶ್ವಾಸವಿದೆ. ಅವರ ಅಧಿಕಾರಾವಧಿ ಅತ್ಯಂತ ಯಶಸ್ವಿಯಾಗಿರಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.
ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಜಯ ಗಳಿಸಿತ್ತು. ಡಿ.5ರಂದು ಫಡ್ನವಿಸ್​ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಕಳೆದ ವಾರ ಫಡ್ನವಿಸ್​ ನವದೆಹಲಿಗೆ ತೆರಳಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಜಗದೀಪ್​ ಧಂಕರ್​ ಅವರನ್ನು ಭೇಟಿ ಮಾಡಿದ್ದರು. ಅವರಿಗೆ ವಿಠಲ-ರುಕ್ಮಿಣಿ ಪ್ರತಿಮೆಗಳನ್ನು ಉಡುಗೊರೆಯಾಗಿಯೂ ನೀಡಿದ್ದರು.
“ನಮ್ಮ ಹಿರಿಯ ನಾಯಕ, ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಅವರನ್ನು ಭೇಟಿ ಮಾಡಿ ತುಂಬಾ ಖುಷಿಯಾಯಿತು. ಅವರಿಗೆ ಗಣೇಶನ ವಿಗ್ರಹವನ್ನು ನೀಡಿ, ಅವರಿಂದ ಆಶೀರ್ವಾದ ಪಡೆದುಕೊಂಡು ಬಂದೆ” ಎಂದು ಪಡ್ನವಿಸ್ ಎಕ್ಸ್​ನಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...