spot_img
spot_img

PUJA KHEDKAR CASE : ಪ್ರೊಬೇಷನರಿ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ PUJA KHEDKAR ​​ಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ.ನಕಲಿ ಒಬಿಸಿ ಮತ್ತು ಪಿಡಬ್ಲ್ಯೂಬಿಡಿ (ವಿಕಲಚೇತನ ವ್ಯಕ್ತಿಗಳು) ಪ್ರಮಾಣಪತ್ರಗಳನ್ನು ಸಲ್ಲಿಸಿದ ಮತ್ತು ತನ್ನ ಗುರುತನ್ನು ನಕಲಿ ಮಾಡುವ ಮೂಲಕ ನಾಗರಿಕ ಸೇವೆಗಳ ಪರೀಕ್ಷೆಗೆ (ಸಿಎಸ್ಇ) ಹಾಜರಾಗಬಹುದಾದ ಗರಿಷ್ಠ ಮಿತಿಗಿಂತಲೂ ಹೆಚ್ಚು ಬಾರಿ ಪರೀಕ್ಷೆಗೆ ಹಾಜರಾದ ಆರೋಪದ ಮೇಲೆ ಖೇಡ್ಕರ್ ವಿರುದ್ಧ ವಿಚಾರಣೆ ನಡೆಯುತ್ತಿದೆ.

ಮಹಾರಾಷ್ಟ್ರ ಕೇಡರ್​ನ ವಜಾಗೊಂಡ ಪ್ರೊಬೇಷನರಿ ಐಎಎಸ್ ಅಧಿಕಾರಿ PUJA KHEDKAR ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೊರಡಿಸಿದ ಮಧ್ಯಂತರ ಆದೇಶದಲ್ಲಿ ನಿರ್ದೇಶಿಸಿದೆ.ಈ ಮಧ್ಯೆ ನ್ಯಾಯಮೂರ್ತಿ ನಾಗರತ್ನ ನೇತೃತ್ವದ ಪೀಠವು PUJA KHEDKAR ಅವರಿಗೆ ಬಂಧನದಿಂದ ರಕ್ಷಣೆ ನೀಡಿತು. ಈ ಹಿಂದೆ, ದೆಹಲಿ ಹೈಕೋರ್ಟ್ ಖೇಡ್ಕರ್ ಅವರ ಬಂಧನ ಪೂರ್ವ ಜಾಮೀನು ಅರ್ಜಿ ವಜಾಗೊಳಿಸಿತ್ತು ಮತ್ತು ಬಂಧನದಿಂದ ರಕ್ಷಿಸುವ ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿತ್ತು.

PUJA KHEDKAR ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಎಸ್.ಸಿ.ಶರ್ಮಾ ಅವರ ನ್ಯಾಯಪೀಠ, ಫೆಬ್ರವರಿ 14 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿ ಪೊಲೀಸರು ಮತ್ತು ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್​ಸಿ) ಸೂಚಿಸಿದೆ.ಡಿಸೆಂಬರ್ 15, 2024 ರಂದು ನೀಡಿದ ತೀರ್ಪಿನಲ್ಲಿ, ನ್ಯಾಯಮೂರ್ತಿ ಚಂದ್ರಧಾರಿ ಸಿಂಗ್ ಅವರ ನ್ಯಾಯಪೀಠವು ಖೇಡ್ಕರ್ ವಿರುದ್ಧ ಮೇಲ್ನೋಟಕ್ಕೆ ಬಲವಾದ ಪ್ರಕರಣ ದಾಖಲಾಗಿದ್ದು, ಇಂಥ ಅಪರಾಧದ ಆರೋಪ ಹೊತ್ತಿರುವ ವ್ಯಕ್ತಿಯ ಕಸ್ಟಡಿ ವಿಚಾರಣೆ ಅಗತ್ಯವಿದೆ ಎಂದು ಹೇಳಿತ್ತು.

ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೇಂದರ್ ಕುಮಾರ್ ಜಂಗಲಾ ಅವರು ಯುಪಿಎಸ್​ಸಿ ಶಿಫಾರಸು ಮಾಡಿದ ಇತರ ಜನ ಕೂಡ ಅರ್ಹತೆಯಿಲ್ಲದೆಯೇ ಕೋಟಾ ಪ್ರಯೋಜನಗಳನ್ನು ಪಡೆದಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದರು.ಇದಕ್ಕೂ ಮೊದಲು, ಇಲ್ಲಿನ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು ಮತ್ತು ಯುಪಿಎಸ್​ಸಿ ಸಂಸ್ಥೆಯೊಳಗಿನ ಯಾರಾದರೂ ಖೇಡ್ಕರ್​ಗೆ ಸಹಾಯ ಮಾಡಿದ್ದಾರೆಯೇ ಎಂಬುದನ್ನು ಕಂಡು ಹಿಡಿಯುವಂತೆ ತನಿಖಾ ಸಂಸ್ಥೆಗೆ ಸೂಚಿಸಿತ್ತು.

ಸರ್ಕಾರಿ ಸೇವೆಗೆ ಖೇಡ್ಕರ್ ಅವರ ಆಯ್ಕೆಯನ್ನು ಯುಪಿಎಸ್​ಸಿ ರದ್ದುಗೊಳಿಸಿದ ಒಂದು ತಿಂಗಳ ನಂತರ, ಕೇಂದ್ರವು ಸೆಪ್ಟೆಂಬರ್ 7, 2024 ರಂದು ಖೇಡ್ಕರ್ ಅವರನ್ನು ಭಾರತೀಯ ಆಡಳಿತ ಸೇವೆಯಿಂದ (ಐಎಎಸ್) ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿತ್ತು. ಖೇಡ್ಕರ್ ಅವರು ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ನಕಲಿ ಮತ್ತು ತಪ್ಪಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿರಿ : LALBAGH FLOWER SHOW : ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ನಡೆದು ಬಂದ ಹಾದಿ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...