spot_img
spot_img

Ramnagar News : ಕ್ಯಾಪ್ಟನ್ ಮಹೇಂದ್ರ ನೇತೃತ್ವದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Ramnagar News:

ಚನ್ನಪಟ್ಟಣ ತಾಲೂಕಿನಲ್ಲಿ ನಿರಂತರ ಕಾಡಾನೆ ದಾಳಿ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳನ್ನು ಸೆರೆ ಹಿಡಿಯಲು ಕ್ಯಾಪ್ಟನ್​ ಮಹೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಉಪಟಳ ನೀಡುತ್ತಿದ್ದ ಎರಡು ಕಾಡಾನೆಗಳ ಸೆರೆಗೆ ಅರಣ್ಯ ಇಲಾಖೆಯಿಂದ ಅನುಮತಿ ಸಿಕ್ಕಿದ್ದು, ಇದರ ಬೆನ್ನಲ್ಲೇ ಕ್ಯಾಪ್ಟನ್ ಮಹೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ಆಂಭಗೊಂಡಿದೆ.

ಚನ್ನಪಟ್ಟಣ ತಾಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿಯಿಂದ ನಲುಗಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ.ಯಾವುದೇ ಅಪಾಯ ಆಗದೇ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಸಾರಥ್ಯದಲ್ಲಿ ತಾಲೂಕಿನ ಕೆಂಗಲ್ ಹನುಮಂತಯ್ಯ ದೇವಸ್ಥಾನದಲ್ಲಿ ಆನೆಗೆ ಪೂಜೆ ಮಾಡಲಾಯಿತು.

ಕೆಲ ವರ್ಷಗಳ ಹಿಂದೆ ಮಹೇಂದ್ರ ಆನೆಯನ್ನು ಹಿಡಿದು ಅರಣ್ಯ ಸಿಬ್ಬಂದಿ ಪಳಗಿಸಿದ್ದರು. ಇದೀಗ ಅದೇ ಆನೆಯ ನಾಯಕತ್ವದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದು ಒಂದು ಆನೆ ಸೆರೆಗೆ ಸರ್ವ ಸಿದ್ಧತೆ ಮಾಡಕೊಳ್ಳಲಾಗಿದ್ದು, ಎಲಿಫೆಂಟ್ ಟಾಸ್ಕ್ ಫೋರ್ಸ್ ಸಿಬ್ಬಂದಿ ಜೊತೆಗೆ ವೈದ್ಯಕೀಯ ತಂಡವೂ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ.

ಪೂಜೆ ಮುಗಿಸಿ ಆನೆಗಳ ತಂಡ ಕಾಡಿನೆಡೆಗೆ ಹೊರಟವು‌. ಸಿ.ಪಿ.ಯೋಗೇಶ್ವರ್ ಮಾತನಾಡಿ, “ದಶಕಗಳಿಂದ ನಮ್ಮ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ನಿರಂತವಾಗಿದೆ. ಆನೆಗಳ ಸೆರೆಗೆ ಸಾಕಷ್ಟು ಪ್ರಯತ್ನ ಕೂಡ ಮಾಡಲಾಗಿದೆ. ಅದರಂತೆ ಕಾಡಾನೆ ಸೆರೆಗಾಗಿ ಆನೆಗಳ ತಂಡ ರಚನೆ ಮಾಡಿಕೊಂಡು ಕ್ರಮ ಕೈಗೊಳ್ಳಲಾಗಿದೆ” ಎಂದರು.

ಲಕ್ಷ್ಮಿಹೆಬ್ಬಾಳ್ಕರ್​ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಈ ವಿಚಾರವಾಗಿ ಈಗ ಚರ್ಚೆ ನಡೆಯುತ್ತಿದೆ. ಅವರ ವಿರುದ್ಧ ದೂರು ದಾಖಲಾಗಿ ಅರೆಸ್ಟ್ ಆಗಿದ್ದಾರೆ. ಆದರೆ ಒಬ್ಬ ಹೆಣ್ಣುಮಗಳನ್ನು ಸದನದಲ್ಲಿ ಈ ರೀತಿ ನಡೆಸಿಕೊಳ್ಳುವುದು ಶೋಭೆ ತರುವುದಿಲ್ಲ. ಸದನ ಒಂದು ದೇವಾಲಯ, ಅಲ್ಲಿ ಈ ರೀತಿ ಆಗಬಾರದು” ಎಂದು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...