spot_img
spot_img

RCB BEAT DC : ದೆಹಲಿ ಮೇಲೆ ಸವಾರಿ ಮಾಡಿದ ಆರ್ಸಿಬಿ ಸಿಂಹಿಣಿ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

WPL, RCB:

ಮಹಿಳಾ ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿ ಸೋಮವಾರದ ಪಂದ್ಯದಲ್ಲಿ ದೆಹಲಿ ಮೇಲೆ ಬೆಂಗಳೂರು ತಂಡ ಸಖತ್​ ದಾಳಿ ಮಾಡಿತು. ಸ್ಮೃತಿ ಮಂಧಾನ ಅಬ್ಬರದ ಬ್ಯಾಟಿಂಗ್‌ಗೆ ಡಿಸಿ ತತ್ತರಿಸಿತು. ಡೆಲ್ಲಿ 19.3 ಓವರ್‌ಗಳಲ್ಲಿ 141 ರನ್‌ಗಳಿಗೆ ಸರ್ವ ಪತನಗೊಂಡಿತು.

RCB BEAT DC  ಆರ್‌ಸಿಬಿ 16.2 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ಗಳು ಕಳೆದುಕೊಂಡು ಗೆಲುವಿನ ದಡ ತಲುಪಿತು. ಭರ್ಜರಿ ಅರ್ಧ ಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಮಣಿಸಿದೆ. ಇದರೊಂದಿಗೆ ಆರ್‌ಸಿಬಿ ಗೆಲುವಿನ ಓಟ ಮುಂದುವರೆಸಿತು.

Partnership of the Century:

ಬಲಗೈ ಬ್ಯಾಟರ್ ವ್ಯಾಟ್​ 33 ಎಸೆತಗಳಲ್ಲಿ ಏಳು ಬೌಂಡರಿಗಳ ಸಹಾಯದಿಂದ 42 ರನ್ ಗಳಿಸಿದರು. ತಂಡಕ್ಕೆ ಗೆಲ್ಲಲು ಒಂಬತ್ತು ರನ್‌ಗಳು ಬೇಕಾಗಿದ್ದಾಗ ಮಂಧಾನ ಔಟಾದರು. ಅವರು 47 ಎಸೆತಗಳಲ್ಲಿ 10 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳಿಂದ 81 ರನ್ ಪೇರಿಸಿದರು. ಇದಾದ ಬಳಿಕ ಬಂದ ಆಲಿಸ್ ಪೆರ್ರಿ ಮತ್ತು ರಿಚಾ ಘೋಷ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಸ್ಮೃತಿ ಮಂಧಾನ ಮತ್ತು ಡ್ಯಾನಿ ವ್ಯಾಟ್ ಮೊದಲ ವಿಕೆಟ್‌ಗೆ 107 ರನ್‌ಗಳ ಜೊತೆಯಾಟವಾಡಿದರು. ಇದಾದ ನಂತರ ದೆಹಲಿ ಸೋಲಿನತ್ತ ಸಾಗಿತು. ಮಂಧಾನ ಅರ್ಧಶತಕ ಗಳಿಸಿ ಮುನ್ನಡೆದರು. ಆದರೆ ವ್ಯಾಟ್ ಅರ್ಧಶತಕ ಗಳಿಸುವ ಅವಕಾಶದಿಂದ ವಂಚಿತರಾದರು.

ಅರುಂಧತಿ ರೆಡ್ಡಿ ಬೌಲಿಂಗ್‌ನಲ್ಲಿ ಜೆಮಿಮಾ ರೊಡ್ರಿಗಸ್ ಅವರಿಗೆ ಕ್ಯಾಚಿತ್ತು ಔಟಾದರು. ಸ್ಮೃತಿ ಮಂಧಾನ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆರ್‌ಸಿಬಿ ಪರ ರೇಣುಕಾ ಠಾಕೂರ್ ಮತ್ತು ಜಾರ್ಜಿಯಾ ವೇರ್‌ಹ್ಯಾಮ್ ತಲಾ 3 ವಿಕೆಟ್ ಪಡೆದು ದೆಹಲಿ ತಂಡ ದೊಡ್ಡ ಸ್ಕೋರ್ ದಾಖಲಿಸುವುದನ್ನು ತಡೆದರು.ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಉತ್ತಮ ಆರಂಭ ಪಡೆದಿತ್ತು.

ಮೊದಲ ಓವರ್‌ನಲ್ಲಿಯೇ ದೆಹಲಿ ತಂಡಕ್ಕೆ ಆರ್‌ಸಿಬಿ ಆಘಾತ ನೀಡಿತು. ಶೆಫಾಲಿ ವರ್ಮಾ ಮೊದಲ ಓವರ್‌ನಲ್ಲಿ ವಿಕೆಟ್ ಕಳೆದುಕೊಂಡರು. ರೇಣುಕಾ ಸಿಂಗ್ ಸ್ಮೃತಿ ಮಂಧಾನ ಅವರಿಗೆ ಕ್ಯಾಚ್ ನೀಡುವ ಮೂಲಕ ಪೆವಲಿಯನ್​ ಹಾದಿ ಹಿಡಿದರು. ಇದರ ನಂತರ ರೊಡ್ರಿಗಸ್ ಮತ್ತು ಲ್ಯಾನಿಂಗ್ ನಡುವೆ ಉತ್ತಮ ಜೊತೆಯಾಟ ಸಾಗಿತು. ಆರು ಓವರ್‌ಗಳು ಮುಗಿಯುವ ವೇಳೆಗೆ ಡೆಲ್ಲಿ ಒಂದು ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿತು.

ಎರಡನೇ ವಿಕೆಟ್‌ಗೆ ರೊಡ್ರಿಗಸ್ ಮತ್ತು ಲ್ಯಾನಿಂಗ್ 59 ರನ್ ಸೇರಿಸಿದರು.ದೆಹಲಿ ಪರ ಜೆಮಿಮಾ ರೊಡ್ರಿಗಸ್ 22 ಎಸೆತಗಳಲ್ಲಿ 34 ರನ್ ಗಳಿಸಿದರು. ಜೆಮಿಮಾ ಮತ್ತು ನಾಯಕಿ ಮೆಗ್ ಲ್ಯಾನಿಂಗ್ ನಡುವಿನ ಜೊತೆಯಾಟ ಹೊರತುಪಡಿಸಿದರೆ ಡೆಲ್ಲಿಗೆ ಬೇರಾವುದೇ ದೊಡ್ಡ ಮೊತ್ತದ ಜೊತೆಯಾಟ ಮೂಡಿಬರಲೇ ಇಲ್ಲ.

RCB BEAT DC  ಆರ್‌ಸಿಬಿ ಪರ ರೇಣುಕಾ ಮತ್ತು ಜಾರ್ಜಿಯಾ ಹೊರತುಪಡಿಸಿ, ಕಿಮ್ ಗಾರ್ತ್ ಮತ್ತು ಏಕ್ತಾ ಬಿಶ್ತ್ ತಲಾ ಎರಡು ವಿಕೆಟ್ ಪಡೆದರು. ಜೆಮಿಮಾ 22 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 34 ರನ್ ಗಳಿಸಿ ಔಟಾದರು. ಆದರೆ ನಾಯಕಿ ಮೆಗ್ ಲ್ಯಾನಿಂಗ್ 19 ಎಸೆತಗಳಲ್ಲಿ ಮೂರು ಬೌಂಡರಿಗಳ ಸಹಾಯದಿಂದ 17 ರನ್ ಗಳಿಸಿದರು. ಇಲ್ಲಿಂದ ದೆಹಲಿ ತಂಡದ ವಿಕೆಟ್‌ಗಳು ಉರುಳುವುದು ನಿಲ್ಲಲಿಲ್ಲ.

ಅನ್ನಾಬೆಲ್ ಸದರ್ಲ್ಯಾಂಡ್ 19, ಮರಿಜಾನ್ನೆ ಕಾಪ್ 12, ಸಾರಾ ಬ್ರೈಸ್ 23, ಮತ್ತು ಶಿಖಾ ಪಾಂಡೆ 14 ರನ್ ಗಳಿಸಿ ತಂಡವನ್ನು 141 ರನ್ ಗಳಿಸಲು ಸಹಾಯ ಮಾಡಿದರು.

ಆರಂಭಿಕ ಹಿನ್ನಡೆಯ ನಂತರ ಆರ್‌ಸಿಬಿ ಬೌಲರ್‌ಗಳು ಪವರ್‌ಪ್ಲೇನಲ್ಲಿ ಬೇರೆ ಯಾವುದೇ ಯಶಸ್ಸನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ದೆಹಲಿಯ ಉತ್ತಮ ಆಟ ಹೆಚ್ಚು ಕಾಲ ಉಳಿಯಲಿಲ್ಲ.

ದೆಹಲಿಯ ಬ್ಯಾಟಿಂಗ್ ಕುಸಿತ ಕಂಡಿದ್ದು, 100 ರನ್‌ಗಳಿಗಿಂತ ಕಡಿಮೆ ಅಂತರದಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು.

ಇದನ್ನು ಓದಿರಿ : WPL 2025: RCB Hammer DC By Eight Wickets As Mandhana Records Her Highest Tournament Score

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...