spot_img
spot_img

RCB LOST AGAINST MI:ತವರಲ್ಲೇ ಮಹಿಳಾ ಮಣಿಗಳಿಗೆ ಮೊದಲ ಸೋಲು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ಶುಕ್ರವಾರ ತವರಿನಲ್ಲಿ ನಡೆದ ತನ್ನ ಮೂರನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ವಿರುದ್ಧ ಆರ್​ಸಿಬಿ ತಂಡ 4 ವಿಕೆಟ್‌ಗಳ ಅಂತರದಿಂದ ಸೋಲಿಗೆ ಶರಣಾಯಿತು.ವುಮೆನ್ಸ್​​​​​ ಪ್ರೀಮಿಯರ್​​​​ಲೀಗ್​ನಲ್ಲಿ ಹಾಲಿ ಚಾಂಪಿಯನ್​​ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ತಂಡ ಮೊದಲ ಸೋಲು ಅನುಭವಿಸಿದೆ. ವುಮೆನ್ಸ್​​​​​ ಪ್ರೀಮಿಯರ್​​​​ಲೀಗ್​​ ಬೆಂಗಳೂರಲ್ಲೇ ನಡೆದ​ ಮೂರನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಮುಂಬೈ ಇಂಡಿಯನ್ಸ್ ಎದುರು ಸೋಲು ಅನುಭವಿಸಿದೆ.

ನಾಯಕಿ ಹರ್ಮನ್​​​​ ಪ್ರೀತ್​ ಕೌರ್​ ಅವರ ಅರ್ಧ ಶತಕ ಮತ್ತು ನ್ಯಾಟ್​ ಸ್ಕಿವರ್-ಬ್ರಂಟ್ ಅವರ ಉಪಯುಕ್ತ 42 ರನ್​ಗಳು ಮುಂಬೈ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವು. ಅಂತಿಮ ಹಂತದಲ್ಲಿ ಉರುಳಿದ ಮುಂಬೈನ 2 ವಿಕೆಟ್​ಗಳು ಪಂದ್ಯವನ್ನು ಮತ್ತಷ್ಟು ರೋಚಕ ಹಂತಕ್ಕೆ ಕೊಂಡೊಯ್ದವು. ಈ ಬಾರಿಯ ಟೂರ್ನಿಯಲ್ಲಿ ಅತಿ ಕಿರಿಯ ಆಟಗಾರ್ತಿ ಎನಿಸಿರುವ ಮುಂಬೈ ಇಂಡಿಯನ್ಸ್​​ ಆಟಗಾರ್ತಿ ಜಿ. ಕಮಲಿನಿ ಕೊನೆಯ ಓವರ್‌ನ ಐದನೇ ಎಸೆತದಲ್ಲಿ ಬೌಂಡರಿ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದರ ಬೆನ್ನಲ್ಲೇ ಡೇನಿಯಲ್ ವ್ಯಾಟ್ ಸಹ 9 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. 57 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಆರ್‌ಸಿಬಿಗೆ ಎಲ್ಲಿಸ್ ಪೆರ್ರಿ ಹಾಗೂ ರಿಚಾ ಘೋಷ್ ಅರ್ಧಶತಕದ ಜೊತೆಯಾಟದ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಭದ್ರವಾಗಿ ಕ್ರೀಸ್‌ನಲ್ಲಿ ನಿಂತ ಎಲ್ಲಿಸ್ ಪೆರ್ರಿ ಹೊಡಿಬಡಿ ಆಟದ ಮೂಲಕ ಕೇವಲ 30 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದರು. ಅಂತಿಮವಾಗಿ 81 ರನ್​ಗಳಿಸಿದ್ದಾಗ 20ನೇ ಓವರ್​ನ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಪೆರ್ರಿ ವಿಕೆಟ್ ಒಪ್ಪಿಸಿದರು.

ಇದಕ್ಕೂ ಮುನ್ನ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಆರಂಭಿಸಿದ ಆರ್​ಸಿಬಿ ಪವರ್ ಪ್ಲೇನಲ್ಲಿ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಡೇನಿಯಲ್ ವ್ಯಾಟ್-ಹಾಡ್ಜ್ ಮೊದಲ ವಿಕೆಟ್​ಗೆ 29 ರನ್​ಗಳ ಜೊತೆಯಾಟವನ್ನಾಡಿದರು. ಉತ್ತಮ ಆರಂಭ ಪಡೆದ ನಾಯಕಿ ಸ್ಮೃತಿ ಮಂಧಾನ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 26 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

 

ಇದನ್ನು ಓದಿರಿ :Champions Trophy 2025: Indian Flag Missing At Karachi Stadium;

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...