spot_img
spot_img

REDDY RAMULU FIGHT : ಶ್ರೀರಾಮುಲುರನ್ನ ಜನಾರ್ದನ ರೆಡ್ಡಿ ಬೆಳೆಸಿಲ್ಲ, ಸ್ವಂತ ಶಕ್ತಿಯಿಂದ ಬೆಳೆದಿದ್ದಾರೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bellary News:

ಶ್ರೀರಾಮುಲು ಅವರನ್ನು ಯಾರೂ ಬೆಳೆಸಿಲ್ಲ. ಸ್ವಂತ ಶಕ್ತಿಯಿಂದ REDDY RAMULU FIGHT ರಾಜ್ಯದಲ್ಲಿ ಬೆಳೆದಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ವಿರುದ್ಧ ವಾಲ್ಮೀಕಿ ಸಮಾಜದ ಮುಖಂಡರು ಕಿಡಿಕಾರಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತಮಾಡಿದ ಅವರು, ಜನಾರ್ದನ ರೆಡ್ಡಿ ಅವರು ಕೀಳು ಮಟ್ಟದ ರಾಜಕಾರಣಿ ಮಾಡುತ್ತಿದ್ದಾರೆ.

ವಾಲ್ಮೀಕಿ ಸಮಾಜದಲ್ಲಿ ಶ್ರೀರಾಮುಲು ಓರ್ವ ಮಾಸ್ ಲೀಡರ್​ ಇದ್ದು, ಇವರ ಬಗ್ಗೆ ಮಾತನಾಡುವವರು ಇನ್ಮುಂದೆ ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಬೇಕು. REDDY RAMULU FIGHT ಜೊತೆ ವಾಲ್ಮೀಕಿ ಸಮಾಜ ಇದೆ. ಅವರನ್ನು ಅವನು – ಇವನು ಅಂತಾ ಮಾತನಾಡುವುದು ಸರಿಯಲ್ಲ. ಜನಾರ್ದನ ರೆಡ್ಡಿ ಎನೋಬಲ್ ಫೈನಾನ್ಸ್ ದಿವಾಳಿಯಾಗಿದ್ದಾಗ ಮೊದಲಿಗೆ ಆಸರೆಯಾಗಿದ್ದೇ ಈ ಶ್ರೀರಾಮುಲು. ಆಗ ಕಾಂಗ್ರೆಸ್ ನಗರಸಭೆ ಸದಸ್ಯರಾಗಿದ್ದರು. ಶ್ರೀರಾಮುಲು ಅವರನ್ನು ಜನಾರ್ದನ ರೆಡ್ಡಿ ಬೆಳೆಸಿಲ್ಲ.

ಸ್ವಂತ ಶಕ್ತಿಯಿಂದ ಶ್ರೀರಾಮುಲು ರಾಜ್ಯದಲ್ಲಿ ಬೆಳೆದಿದ್ದಾರೆ. ಇದು ವಾಲ್ಮೀಕಿ ಸಮಾಜದ ಒಗ್ಗಟ್ಟುನ್ನು ಒಡೆಯಲು ಪ್ರಯತ್ನ ಎಂದು ಅವರು ಆರೋಪ ಮಾಡಿದರು.  ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಇಲ್ಲ- ಸಲ್ಲದ ಹೇಳಿಕೆ ನೀಡುವ ಮೂಲಕ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ವಾಲ್ಮೀಕಿ ಸಮಾಜದ ಮುಖಂಡರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಪರ ವಾಲ್ಮೀಕಿ ಸಮಾಜದ ಮುಖಂಡರು ಆರೋಪ ಮಾಡಿದರು.

ರೈಲ್ವೆ ಬಾಬು ಕೊಲೆ ಬಗ್ಗೆ ಮಾತನಾಡುವ ರೆಡ್ಡಿ ಅವರು ಪದ್ಮಾವತಿ ಕೊಲೆ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಹಾಗಾಗಿ ಜನಾರ್ದನರೆಡ್ಡಿ ಅವರುREDDY RAMULU FIGHT ಅವರಿಗೆ ಕ್ಷಮೆ ಕೇಳಬೇಕು. ಬಿಜೆಪಿ ಪಕ್ಷ ಜನಾರ್ದನರೆಡ್ಡಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಎಲ್ಲಾ ಎಸ್​ಪಿಗಳಿಗೆ ವಾಲ್ಮೀಕಿ ಸಮಾಜದಿಂದ ದೂರು ಕೊಡುತ್ತೇವೆ. ಜನಾರ್ದನರೆಡ್ಡಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ.

ಜನಾರ್ದನರೆಡ್ಡಿ ಮನೆಗೆ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜನಾರ್ದನ ರೆಡ್ಡಿ ಅವರು ಜವಾಬ್ದಾರಿ ತೆಗೆದುಕೊಂಡಿದ್ದರು. ಆದರೆ, ಚುನಾವಣೆಯಲ್ಲಿ ಗೆಲ್ಲಿಸಲಾಗಲಿಲ್ಲ. ಸುದ್ದಿಗೋಷ್ಠಿಯಲ್ಲಿ ಶ್ರೀರಾಮುಲು ಅವರನ್ನು ಕೊಲೆಗಡುಕ ಅಂತಾ ಹೇಳಿದ್ದು, ಈ ಪ್ರಕರಣದಲ್ಲಿ ನೀವು ಭಾಗಿಯಾಗಿದ್ರಾ? ಎಂದು ಪ್ರಶ್ನಿಸಿದ್ದಾರೆ. ಮುಂದುವರೆದು, ಜನಾರ್ದನ ರೆಡ್ಡಿ ಅವರೇ ನಿಮ್ಮ ಅಕ್ರಮ ಆಸ್ತಿ, ಬೇನಾಮಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ನಾಗೇಂದ್ರ ಅವರನ್ನೂ ಕೂಡ ಜನಾರ್ದನ ರೆಡ್ಡಿ ಟಿಶು ಪೇಪರ್ ಅಂತಾ ಹೇಳಿದ್ದಾರೆ. ಶ್ರೀರಾಮುಲು ಅವರನ್ನು ಕೊಲೆಗಡುಕ ಎಂದಕ್ಕೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಎಸ್​ಪಿಗೆ ದೂರು ಕೊಡುತ್ತೇವೆ ಎಂದರು.

Proposal in Party framework:

ಶ್ರೀರಾಮುಲು ಬಗ್ಗೆ ನೀವು ಅವಹೇಳನಕಾರಿಯಾಗಿ ಮಾತನಾಡಿದ್ದೀರಿ ಎಂದು ವಾಲ್ಮೀಕಿ ಸಮುದಾಯ ನಿಮ್ಮ ವಿರುದ್ಧ ದೂರು ನೀಡಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜನಾರ್ದನ ರೆಡ್ಡಿ, ಸಿಬಿಐ ತನಿಖೆ ಎದುರಿಸಿರುವ ನಾನು ಏನೇ ದೂರು ನೀಡಿದರೂ ಫೇಸ್ ಮಾಡುವೆ ಎಂದರು.

REDDY RAMULU FIGHT ಅಪಹರಣಕ್ಕೆ ಒಳಗಾದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಧೈರ್ಯ ಹೇಳಿದ ಬಳಿಕ ಅಲ್ಲಿ ಸೇರಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರ ವಿಚಾರದಲ್ಲಿ ಪಕ್ಷದ ವರಿಷ್ಠರು ಯಾವ ಹೇಳಿಕೆಯನ್ನು ನೀಡಿದಂತೆ ತಿಳಿಸಿದ್ದಾರೆ. ಎಲ್ಲ ವಿಷಯದ ಕುರಿತು ವರಿಷ್ಠರಿಗೆ ತಿಳಿಸಿದ್ದು, ಅವರು ಏನು ಹೇಳುತ್ತಾರೋ ಅದರಂತೆ ನಡೆದುಕೊಳ್ಳುವೆ. ಏನೇ ಇದ್ದರೂ ಪಕ್ಷದ ಚೌಕಟ್ಟಿನಲ್ಲಿ ಪ್ರಸ್ತಾಪ ಮಾಡುವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್, ಮಂಗಳೂರಿನಲ್ಲಿ ಬ್ಯಾಂಕ್​ ದರೋಡೆ ನಡೆದಿದ್ದು, ಹತ್ಯೆ, ವಂಚನೆ ಅಂತಹ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಇದೇ ವೇಳೆ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಓದಿರಿ : MONALISA : ಮಹಾಕುಂಭಮೇಳದ ಮೊನಾಲಿಸಾಗೆ ಚಲನಚಿತ್ರದ ಆಫರ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...