spot_img
spot_img

ಶಾಂತಿ ಇಲ್ಲದೆ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ: ಜೈಶಂಕರ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಗಡಿ ವಿವಾದವನ್ನು ಅಂತ್ಯಗೊಳಿಸಲು ನ್ಯಾಯಯುತ ಮತ್ತು ಪರಸ್ಪರ ಸ್ವೀಕಾರಾರ್ಹ ಒಪ್ಪಂದಕ್ಕೆಬರಲು ಚೀನಾದೊಂದಿಗೆ ಮಾತುಕತೆ ನಡೆಸಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಭಾರತ-ಚೀನಾ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್ ಅವರು, ಚೀನಾದ ಕ್ರಮಗಳಿಂದಾಗಿ ಗಡಿಯಲ್ಲಿ ಶಾಂತಿ ಸ್ಥಾಪನೆ ಸಾಧ್ಯವಾಗುತ್ತಿಲ್ಲ ಮತ್ತು ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, 2020 ರಿಂದ ಭಾರತ-ಚೀನಾ ಸಂಬಂಧ ಸಹಜವಾಗಿಲ್ಲ ಎಂದು ಹೇಳಿದರು.

ಇಂದು ಲೋಕಸಭೆಯಲ್ಲಿ ಭಾರತ-ಚೀನಾ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್ ಅವರು, ಚೀನಾದ ಕ್ರಮಗಳಿಂದಾಗಿ ಗಡಿಯಲ್ಲಿ ಶಾಂತಿ ಸ್ಥಾಪನೆ ಸಾಧ್ಯವಾಗುತ್ತಿಲ್ಲ ಎಂದರು.

ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ಇಲ್ಲದಿರುವಾಗ ಭಾರತ-ಚೀನಾ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ. ನಮ್ಮ ಪರಸ್ಪರ ಸಂಬಂಧಗಳು ಶಾಂತಿ ಮತ್ತು ರಾಜಿ ಆಧಾರದ ಮೇಲೆ ಮಾತ್ರ ಸುಧಾರಿಸುವ ಭರವಸೆ ಇದೆ. ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಿವೆ ಮತ್ತು ಮಿಲಿಟರಿ ಮಟ್ಟದಲ್ಲಿಯೂ ಇದೇ ರೀತಿಯ ಕೆಲಸ ನಡೆಯುತ್ತಿದೆ ಎಂದು ಜೈಶಂಕರ್ ಲೋಕಸಭೆಗೆ ತಿಳಿಸಿದರು.

“ಶಾಂತಿ ಮತ್ತು ನೆಮ್ಮದಿಯ ಮರುಸ್ಥಾಪನೆಯು ಇತರ ವಿಚಾರಗಳಲ್ಲಿ ಉಭಯ ದೇಶಗಳ ಸಂಬಂಧ ಮುಂದುವರಿಯಲು ಆಧಾರವಾಗಿದೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ” ಎಂದು ಅವರು ಹೇಳಿದರು.

ಜೂನ್ 2020 ರಲ್ಲಿ ಗಲ್ವಾನ್ ಕಣಿವೆಯಲ್ಲಿ ಉದ್ವಿಗ್ನತೆಯ ನಂತರ ಚೀನಾ ಮತ್ತು ಭಾರತದ ನಡುವೆ ಸಾಕಷ್ಟು ಉದ್ವಿಗ್ನತೆ ಉಂಟಾಗಿತ್ತು. 1991 ರಲ್ಲಿ, ಎರಡೂ ದೇಶಗಳು ಎಲ್‌ಎಸಿಯಲ್ಲಿ ಶಾಂತಿಗೆ ಒಪ್ಪಿಕೊಂಡಿದ್ದವು. 1993 ರಲ್ಲಿ LAC ಯಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಕುರಿತು ಒಪ್ಪಂದ ಮುಂದುವರೆದಿತ್ತು.

ನಿರಂತರ ರಾಜತಾಂತ್ರಿಕ ಮಾತುಕತೆಗಳ ನಂತರ ಇತ್ತೀಚಿಗೆ ಭಾರತ-ಚೀನಾ ಬಾಂಧವ್ಯದಲ್ಲಿ “ಸ್ವಲ್ಪ ಸುಧಾರಣೆ” ಕಾಣುತ್ತಿದೆ ಎಂದು ಅವರು ಹೇಳಿದರು.

“2020 ರ ಏಪ್ರಿಲ್-ಮೇನಲ್ಲಿ ಪೂರ್ವ ಲಡಾಖ್‌ನಲ್ಲಿ ಚೀನಾ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿತ್ತು. ಇದರಿಂದ ನಮಗೆ ಗಸ್ತು ತಿರುಗಲು ತೊಂದರೆಯಾಗಿತ್ತು ಮತ್ತು ಹಲವಾರು ಬಾರಿ ಉಭಯ ದೇಶಗಳ ಸೇನೆ ಮುಖಾಮುಖಿಯಾದವು ಎಂದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

BSNL RS 99 PLAN : ಕೇವಲ 99 ರೂ.ಗೆ ಅನ್ಲಿಮಿಟೆಡ್ ಕಾಲಿಂಗ್ ಪ್ಲಾನ್ ತಂದ ಬಿಎಸ್ಎನ್ಎಲ್!

BSNL 99 Plan: ಬಿಎಸ್​ಎನ್​ಎಲ್​ ತಮ್ಮ ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ಈ ಆಫರ್​ ಎರಡು ಸಿಮ್‌ಗಳನ್ನು ಬಳಸುವ ಗ್ರಾಹಕರಿಗೆ ಉಪಯುಕ್ತ. ಭಾರತ್ ಸಂಚಾರ್ ನಿಗಮ್...

WORLD CANCER DAY : ಶಿವಣ್ಣ To ಸಂಜಯ್ ದತ್ – ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು

Shivanna News: ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ ಕ್ಯಾನ್ಸರ್​​ ಗೆದ್ದು ಬಂದಿದ್ದಾರೆ. 2024ರ ಡಿಸೆಂಬರ್ 24ರಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸ್ಯಾಂಡಲ್​ವುಡ್​ನ ಖ್ಯಾತ ನಟ, ಅಲ್ಲೇ ಕೆಲ...

AARADHYA BACHCHAN : ಆರೋಗ್ಯದ ಕುರಿತು ಸುಳ್ಳು ಮಾಹಿತಿ

New Delhi News: ತಮ್ಮ ಆರೋಗ್ಯದ ಕುರಿತು ಸುಳ್ಳು ಮಾಹಿತಿ ಪ್ರಕಟಿಸಿದ ಕೆಲವು ಯೂಟ್ಯೂಬ್ ಚಾನೆಲ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಐಶ್ವರ್ಯಾ ರೈ ಪುತ್ರಿ AARADHYA...

205 INDIANS DEPORTED BY US : ಅಕ್ರಮವಾಗಿ ಅಮೆರಿಕದಲ್ಲಿದ್ದ ಭಾರತೀಯರ ಗಡಿಪಾರು

Amritsar News: ಅಕ್ರಮ ವಲಸಿಗರ ವಿರುದ್ದ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣಕ್ರಮ ಕೈಗೊಂಡಿದ್ದಾರೆ. ಅದರಂತೆ ದಾಖಲೆ ರಹಿತವಾಗಿ ಅಮೆರಿಕದಲ್ಲಿ ನೆಲೆನಿಂತಿದ್ದ205 INDIANS DEPORTED BY...