spot_img
spot_img

ಧಾರ್ಮಿಕ ಪೂಜಾ ಸ್ಥಳಗಳ ಕಾಯ್ದೆ ರದ್ದು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯಿದೆ -1991ಯ (Places of worship act) ಸಿಂಧುತ್ವವನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಕೊಳ್ಳಲಿದೆ. ಸಿಜೆಐ ಸಂಜೀವ್ ಖನ್ನಾ, ಜಸ್ಟೀಸ್ ಸಂಜಯ್ ಕುಮಾರ್, ಜಸ್ಟೀಸ್ ಕೆ.ವಿ.ವಿಶ್ವನಾಥನ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಇದರಿಂದ ಹಿಂದೂ ದೇವಾಲಯಗಳ ಜಾಗದಲ್ಲಿ ನಿರ್ಮಿಸಿರುವ ಬೇರೆ ಧರ್ಮದ ಪೂಜಾ ಸ್ಥಳಗಳನ್ನು ಅದೇ ಸ್ವರೂಪದಲ್ಲಿ ಮುಂದುವರಿಸಲಾಗಿದೆ. ಇದು ಧಾರ್ಮಿಕ ಹಕ್ಕಿನ ಉಲಂಘನೆಯಾಗಿದೆ. ಮೂಲಭೂತ ಹಕ್ಕು ನೀಡಲಾಗಿರುವ ಸಂವಿಧಾನದ 14 ಮತ್ತು 25ನೇ ವಿಧಿಗಳ ಉಲಂಘನೆಯಾಗಿದೆ. ಈ ಕಾಯಿದೆಯು ಏಕಪಕ್ಷೀಯವಾಗಿದೆ ಎಂದು ಅಶ್ವಿನಿ ಉಪಾಧ್ಯಾಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ, ಸುಬ್ರಮಣ್ಯಸ್ವಾಮಿ ಸೇರಿದಂತೆ ಅನೇಕರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಧಾರ್ಮಿಕ ಪೂಜಾ ಸ್ಥಳಗಳ ಕಾಯಿದೆ- 1991ರ ಸೆಕ್ಷನ್ 2, 3, 4 ಅನ್ನು ರದ್ದುಪಡಿಸಲು ಕೋರಲಾಗಿದೆ. ಧಾರ್ಮಿಕ ಪೂಜಾ ಸ್ಥಳಗಳ ಕಾಯಿದೆಯು..

1947 ಆಗಸ್ಟ್ 15ಕ್ಕಿಂತ ಮುಂಚೆ ಇದ್ದ ಧಾರ್ಮಿಕ ಸ್ಥಳ ಸ್ವರೂಪ ಬದಲಾಯಿಸುವಂತಿಲ್ಲ. ಧಾರ್ಮಿಕ ಸ್ಥಳಗಳನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಬೇಕು ಎಂದು ಕಾಯಿದೆ ಹೇಳುತ್ತದೆ.

ಅಶ್ವಿನಿ ಉಪಾಧ್ಯಾಯ ಅರ್ಜಿಯ ಮೇಲೆ 2021ರ ಮಾರ್ಚ್​ನಲ್ಲೇ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಕೇಂದ್ರ ಸರ್ಕಾರಕ್ಕೆ ನೋಟಿಸ್​ಗೆ ಇದುವರೆಗೂ ಪ್ರತಿಕ್ರಿಯೆ ಇಲ್ಲ. ಕಾಯಿದೆಯ ಬಗ್ಗೆ ನಿಲುವು ಏನೆಂದು ತಿಳಿಸದೇ ಕೇಂದ್ರ ಮೌನವಾಗಿದೆ. ಕಾಯಿದೆಯು ಅಸಂವಿಧಾನಿಕ ಎಂದು ಘೋಷಿಸಬೇಕೆಂದು ಅಶ್ವಿನಿ ಉಪಾಧ್ಯಾಯ ಮನವಿ ಮಾಡಿಕೊಂಡಿದ್ದಾರೆ.

ಇಂಥ ಅರ್ಜಿಗಳಿಂದ ದೇಶಾದ್ಯಂತ ಕೋಮು ಸೌಹಾರ್ದತೆಗೆ ಧಕ್ಕೆಯಾಗಲಿದೆ. ಇಂಥ ಕೋರಿಕೆಗಳಿಂದ ದೇಶಾದ್ಯಂತ ವಿವಾದಗಳು ಸೃಷ್ಟಿಯಾಗುತ್ತವೆ. ಅಂತಿಮವಾಗಿ ದೇಶದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗಲಿದೆ ಎಂದ ಜ್ಞಾನವಾಪಿ ಮಸೀದಿ ತನ್ನ ಪ್ರತಿ ಅರ್ಜಿಯಲ್ಲಿ ಹೇಳಿದೆ.

ಸುಪ್ರೀಂ ಕೋರ್ಟ್ ಧಾರ್ಮಿಕ ಪೂಜಾ ಸ್ಥಳಗಳ (ವಿಶೇಷ ಅವಕಾಶಗಳ) ಕಾಯಿದೆ-1991 ಅನ್ನು ರದ್ದುಪಡಿಸುತ್ತಾ? ಇಲ್ಲವಾ? ಅನ್ನೋದು ಕುತೂಹಲ ಮೂಡಿಸಿದೆ.

ಮತ್ತೊಂದೆಡೆ ಮುಸ್ಲಿಂ ಸಮುದಾಯದಿಂದ ಧಾರ್ಮಿಕ ಪೂಜಾ ಸ್ಥಳಗಳ ಕಾಯಿದೆ-1991 ಅನ್ನು ಮುಂದುವರಿಸಲು ಕೋರಿಕೆ ಇದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಕಾಯಿದೆಯನ್ನು ರದ್ದುಪಡಿಸಿದರೆ ಅದರ ಪರಿಣಾಮ ತೀವ್ರವಾಗಿರುತ್ತೆ ಎಂದು ಸಂಭಾಲ್ ಹಿಂಸಾಚಾರ ಉಲ್ಲೇಖಿಸಿದೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...