spot_img
spot_img

ಅಡಕೆ ಕ್ಯಾನ್ಸರ್‌ಕಾರಕ ಎಂಬ ವರದಿ ಅವೈಜ್ಞಾನಿಕ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಶಿರಸಿ : ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯೊಂದು ಅಡಕೆ ಕ್ಯಾನ್ಸರ್‌ಕಾರಕ, ಬಳಕೆ ನಿಯಂತ್ರಿಸಿದರೆ ಬಾಯಿ ಕ್ಯಾನ್ಸರ್‌ ಪ್ರಮಾಣವನ್ನು ವಿಶ್ವದಲ್ಲಿಯೇ ತಡೆಗಟ್ಟಬಹುದು ಎಂದು ವರದಿ ನೀಡಿದೆ.

ಈ ವರದಿ ಅಡಕೆ ಬೆಳಗಾರರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯಿಸಿದ್ದಾರೆ. ಇದು ಅವೈಜ್ಞಾನಿಕ ವರದಿಯಾಗಿದ್ದು, ಅಡಿಕೆ ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಷಡ್ಯಂತ್ರ ಎಂದು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯಾದ ಇಂಟರ್‌ ನ್ಯಾಶನಲ್‌ ಏಜನ್ಸಿ ಫಾರ್‌ ರಿಸರ್ಚ್‌ ಆಂಡ್‌ ಕ್ಯಾನ್ಸರ್‌ʼ ನೀಡಿರುವ ಅಡಕೆ ಕ್ಯಾನ್ಸರ್ ಕಾರಕ ಎಂಬುದು ಯಾವುದೇ ಆಧಾರವಿಲ್ಲದೆ ನೀಡಿದ ಅವೈಜ್ಞಾನಿಕ ವರದಿಯಾಗಿದೆ.

ಈಗಾಗಲೇ ಕ್ಯಾಂಪ್ಕೋ ಹಾಗೂ ಅನೇಕ ವಿಶ್ವವಿದ್ಯಾನಿಲಯಗಳು ಅಡಿಕೆ ಮೇಲೆ ಸಂಶೋಧನೆಗಳನ್ನು ಕೈಗೊಂಡು, ಅಡಿಕೆಯು ಕ್ಯಾನ್ಸರ್‌ ಕಾರಕವಲ್ಲ ಎಂಬ ವರದಿಯನ್ನು ನೀಡಿದ್ದಲ್ಲದೆ, ಔಷಧೀಯ ಗುಣಗಳು ಸಹ ಅಡಕೆಯಲ್ಲಿರುವ ಬಗ್ಗೆ ಉಲ್ಲೇಖಿಸಿರುತ್ತಾರೆ.

ಇಂತಹ ಯಾವುದೇ ವೈಜ್ಞಾನಿಕ ಸಂಶೋಧನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಅಂಗಸಂಸ್ಥೆಯು ವರದಿ ನೀಡಿರುವುದು ಸಮಂಜಸವೆನಿಸುವುದಿಲ್ಲ. ಈ ವಿಷಯಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಡಬ್ಲೂಎಚ್ಓ ಸಂಸ್ಥೆಗೆ ತಿಳಿಸುವ ಮತ್ತು ಅವರಿಗೆ ಮನವರಿಕೆಯನ್ನೂ ಸಹ ಮಾಡುವ ಪ್ರಯತ್ನ ನಡೆಯುತ್ತಿದೆ. ಸಾವಿರಾರು ವರ್ಷಗಳಿಂದ ಅಡಿಕೆ ಬಳಕೆಯಲ್ಲಿದ್ದು ಪೂಜನೀಯ ಸ್ಥಾನದಲ್ಲಿದೆ.

ಈ ವಿಷಯಗಳ ಬಗ್ಗೆ ಸರಕಾರಿ ಮಟ್ಟದಲ್ಲೂ ಸಹ ಗಂಭೀರವಾಗಿ ಪ್ರಯತ್ನಿಸುವಂತೆ ಸಂಬಂಧಪಟ್ಟ ಸಚಿವರುಗಳಿಗೆ ಹಾಗೂ ಇಲಾಖೆಯ ಮುಖ್ಯಸ್ಥರುಗಳಿಗೆ ಮನವರಿಕೆ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಇನ್ನು ಮುಂದೆಯು ಸಹ ಈ ಕುರಿತು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇನೆ.

ಈಗಾಗಲೇ ಕ್ಯಾಂಪ್ಕೋ ಸೇರಿದಂತೆ ರಾಜ್ಯದ ಪ್ರಮುಖ ಸಹಕಾರಿ ಸಂಘಗಳು ಮತ್ತು ಸಂಶೋದನಾ ಸಂಸ್ಥೆಗಳು ಅಡಕೆ ಬೆಳೆಗಾರರ ಹಿತರಕ್ಷಣೆ ಕುರಿತಂತೆ ಸಕ್ರಿಯಗೊಂಡಿವೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯಲ್ಲಿ ಪಾಲ್ಗೊಳ್ಳುವಿಕೆ ಅತೀ ಮುಖ್ಯವಾಗಿದೆ.

ಆಗಾಗ ಅಡಕೆ ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಇಂತಹ ಷಡ್ಯಂತ್ರಗಳನ್ನು ತಡೆಯಲು ಕೇಂದ್ರ ಹಣಕಾಸು, ವಾಣಿಜ್ಯ ಹಾಗೂ ಆರೋಗ್ಯ ಇಲಾಖೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ.

ಕಾಲಕಾಲಕ್ಕೆ ಅಡಕೆ ಬೆಳೆಗಾರರ ಹಿತರಕ್ಷಣೆಗಾಗಿ ಅಗತ್ಯವಾದ ಎಲ್ಲಾ ಕ್ರಮಗಳ ಬಗ್ಗೆ ಪ್ರಯತ್ನಿಸಲಾಗುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ರೈತರು ಭಯಭೀತರಾಗುವ ಅಗತ್ಯವಿಲ್ಲ.

ತಂಬಾಕು ಬೇರ್ಪಟ್ಟ ಅಡಕೆ ಯಾವುದೇ ಕಾರಣಕ್ಕೂ ಆರೋಗ್ಯಕ್ಕೆ ಹಾನಿಕರವಲ್ಲ ಎನ್ನುವುದು ಅನೇಕ ಸಂಶೋಧನೆಗಳಿಂದ ಹಾಗೂ ವೈಜ್ಞಾನಿಕವಾಗಿಯೂ ದೃಡಪಟ್ಟಿದೆ. ಈ ಅಂಶಗಳನ್ನು ಮತ್ತು ವೈಜ್ಞಾನಿಕ ಸಂಶೋದನೆಯ ಅಂಶಗಳನ್ನು ಮುಂದಿಟ್ಟು ಕೇಂದ್ರ ಸರಕಾರದ ಆರೋಗ್ಯ ಇಲಾಖೆಯ ಗಮನಕ್ಕೆ ತಂದಿದ್ದು ಇರುತ್ತದೆ.

ದೇಶದಲ್ಲಿಯೇ ಕರ್ನಾಟಕವು ಅತಿ ಹೆಚ್ಚು ಅಡಕೆ ಬೆಳೆಯುವ ರಾಜ್ಯವಾಗಿದ್ದು, ಆದ ಕಾರಣ ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...