spot_img
spot_img

SAIF ALI KHAN ATTACK CASE : ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Thane (Maharashtra) News:

SAIF ALI KHAN ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಬಂಧಿತ ಆರೋಪಿ ಬಾಂಗ್ಲಾದೇಶದ ಪ್ರಜೆಯಾಗಿದ್ದಾರೆ. ಈತನ ಮೂಲಕ ಹೆಸರು ಮೊಹಮ್ಮದ್ ಶರೀಫ್ ಉಲ ಇಸ್ಲಾಂ ಶೆಹಜಾದ್. ಆದರೆ ಭಾರತಕ್ಕೆ ಬಂದ ಮೇಲೆ ವಿಜಯ್ ದಾಸ್, ಬಿಜೋಯ್ ದಾಸ್ ಅಂತಾ ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಿವುಡ್​ ನಟ SAIF ALI KHAN ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಥಾಣೆಯಲ್ಲಿ ಇಂದು ನಸುಕಿನ ಜಾವ ಪ್ರಮುಖ ಆರೋಪಿಯನ್ನ ಬಂಧಿಸಿದ್ದಾರೆ. ಮೊಹಮ್ಮದ್ ಶರೀಫ್ ಉಲ ಇಸ್ಲಾಂ ಶೆಹಜಾದ್ (30) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಹಿರನಂದಾನಿ ಕಾರ್ಮಿಕರ ಕ್ಯಾಂಪ್ ಬಳಿ ಬಂಧಿಸಿದ್ದಾರೆ ಎಂದು ಹಿರಿಯ ಮುಂಬೈ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮೊಬೈಲ್ ಟವರ್ ಲೊಕೇಶನ್ ಸಹಾಯದಿಂದ ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚಿದ್ದಾರೆ.

ಆರೋಪಿ ಮೊಹಮ್ಮದ್ ಮೊಬೈಲ್ ಟವರ್ ಲೊಕೇಶನ್ ವಡವ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿರಾನಂದನಿ ಎಸ್ಟೇಟ್‌ನಲ್ಲಿ ಪತ್ತೆಯಾಗಿತ್ತು. ವಿಜಯ್ ದಾಸ್ ಕೆಲವು ವರ್ಷಗಳಿಂದ ಹಿರಾನಂದಾನಿ ಪ್ರದೇಶದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.ನಟ SAIF ALI KHAN ಮನೆಗೆ ಈತ ಕಳ್ಳತನಕ್ಕೆಂದು ನುಗ್ಗಿದ್ದ. ಆರೋಪಿಯನ್ನು ಕೋರ್ಟ್​ಗೆ ಹಾಜರಿಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವುದಾಗಿ ಡಿಸಿಪಿ ದೀಕ್ಷಿತ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.ಆರೋಪಿ ಬಾಂಗ್ಲಾದೇಶದ ಪ್ರಜೆ. ಈತನ ಬಳಿ ಭಾರತದ ಯಾವುದೇ ಗುರುತಿನ ಚೀಟಿ, ದಾಖಲೆಗಳಿಲ್ಲ. ಭಾರತಕ್ಕೆ ಬಂದು ಹೆಸರು ಬದಲಿಸಿಕೊಂಡಿದ್ದಾನೆ. ಕಳೆದ ಐದಾರು ತಿಂಗಳ ಹಿಂದೆ ಮುಂಬೈಗೆ ಬಂದು ಇಲ್ಲೇ ನೆಲೆಸಿದ್ದಾನೆ. ಮನೆಕೆಲಸದ ಏಜೆನ್ಸಿಯಲ್ಲಿ ಈತ ಕೆಲಸ ಮಾಡುತ್ತಿದ್ದ.

Incident Details: ನಟನಿಗೆ ಚಾಕುವಿನಿಂದ 6 ಬಾರಿ ಇರಿದಿದ್ದ. ಇದರಿಂದಾಗಿ SAIF ALI KHAN ​ ಅವರ ಬೆನ್ನುಮೂಳೆ ಮತ್ತು ಕುತ್ತಿಗೆಯ ಬಳಿ ಗಂಭೀರ ಗಾಯಗಳಾಗಿದ್ದವು. ನಂತರ ಅವರನ್ನು ಆಟೋರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಗುರುವಾರ ನಸುಕಿನ ಜಾವ ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್​ ಸೂಪರ್​ ಸ್ಟಾರ್ SAIF ALI KHAN ಅವರ ಮನೆಗೆ ನುಗ್ಗಿದ ದುಷ್ಕರ್ಮಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದ.

ವೈದ್ಯರು ಐದು ಗಂಟೆಗಳ ತುರ್ತು ಶಸ್ತ್ರಚಿಕಿತ್ಸೆ ನಡೆಸಿ ನಟನ ಬೆನ್ನುಮೂಳೆಯಿಂದ 2.5 ಇಂಚಿನ ಬ್ಲೇಡ್ ತುಂಡನ್ನು ಹೊರ ತೆಗೆದಿದ್ದರು. ಇದೀಗ ನಟ ಚೇತರಿಸಿಕೊಳ್ಳುತ್ತಿದ್ದಾರೆ. ಜನವರಿ 21ರೊಳಗೆ ಅವರನ್ನು ಡಿಸ್ಚಾರ್ಜ್ ಮಾಡುವ ನಿರೀಕ್ಷೆಯಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.ಮನೆಯೊಳಗೆ ನುಗ್ಗಿದ ಆ ವ್ಯಕ್ತಿ ಬಹಳ ಆಕ್ರಮಣಕಾರಿಯಾಗಿದ್ದನಾದರೂ, ಆಭರಣಗಳು ಸೇರಿದಂತೆ ತಮ್ಮ ಮನೆಯಲ್ಲಿ ಯಾವುದೇ ವಸ್ತುಗಳು ಕಳುವಾಗಿಲ್ಲ ಎಂದು SAIF ALI KHAN ಪತ್ನಿ ಕರೀನಾ ಪೊಲೀಸರಿಗೆ ತಿಳಿಸಿದ್ದಾರೆ.

ದಾಳಿ ಮಾಡಿದ ವ್ಯಕ್ತಿ ಮನೆಯಿಂದ ಕಳ್ಳತನ ಮಾಡುವ ಉದ್ದೇಶ ಹೊಂದಿರುವಂತೆ ತೋರಲಿಲ್ಲ. ಮಗನನ್ನು ರಕ್ಷಿಸಲು SAIF ALI KHAN ಮುಂದಾದಾಗ ದಾಳಿಕೋರ ನಿರಂತರವಾಗಿ ದಾಳಿ ಮಾಡಿದ್ದಾನೆ. ಬಾಲಿವುಡ್​ ನಟನ ಮೇಲೆ ದಾಳಿ ನಡೆಸಿದ ಪ್ರಕರಣ ಬೇಧಿಸಲು ಪೊಲೀಸರು 30ಕ್ಕೂ ಹೆಚ್ಚು ತಂಡಗಳನ್ನು ರಚಿಸಿ, ಶೋಧ ಕಾರ್ಯಾಚರಣೆ ಇಳಿದಿದ್ದಾರೆ.

ಇದನ್ನು ಓದಿರಿ : RAMASWAMY : ಅಮೆರಿಕದ ಓಹಿಯೋ ಗವರ್ನರ್ ಹುದ್ದೆಗೆ ಸ್ಪರ್ಧಿಸಲು

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...