spot_img
spot_img

SANJAY BANGAR : ರೋಹಿತ್ ಅಭ್ಯಾಸ ನಿಲ್ಲಿಸು, ಮೊದಲು ಆ ಕೆಲಸ ಮಾಡು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Sanjay Bangar News :

SANJAY BANGAR ಇತ್ತೀಚೆಗೆ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಹೀನಾಯವಾಗಿ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಇದಾದ ಬಳಿಕ ರಣಜಿಯಲ್ಲೂ ಸಿಂಗಲ್​ ಡಿಜಿಟ್​ಗೆ ನಿರ್ಗಮಿಸಿದ್ದರು. ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಕಳಪೆ ಪ್ರದರ್ಶನ ಮುಂದುವರೆದಿದೆ.

ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ ಕಳಪೆ ಫಾರ್ಮ್​ನಿಂದ ಬಳಲುತ್ತಿರುವುದು ಗೊತ್ತೆ ಇದೆ. 2024ರ ಟಿ20 ವಿಶ್ವಕಪ್​ ನಂತರ ಹಿಟ್​ಮ್ಯಾನ್​ ಬ್ಯಾಟಿಂಗ್​ ಹದಗೆಟ್ಟಿದೆ. ಒಂದೊಂದು ರನ್​ಗಳಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಪ್ರಭಾವ ಬೀರಲು ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ರೋಹಿತ್​ ಕೇವಲ 2 ರನ್‌ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಈ ಹಿಂದೆ ಶಾರ್ಟ್ ಪಿಚ್ ಬೌಲ್​ಗಳಿಗೆ ಸಲೀಸಾಗಿ ಸಿಕ್ಸರ್ ಬಾರಿಸುತ್ತಿದ್ದ ಹಿಟ್​ಮ್ಯಾನ್​ ಇದೀಗ ಅದೇ ಎಸೆತಗಳಿಗೆ ವಿಕೆಟ್​ ಕೈಚೆಲ್ಲುತ್ತಿದ್ದಾರೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

Sanjay Bangar advises:

“ರೋಹಿತ್ ಶರ್ಮಾ ಸದ್ಯ ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ. ಆದಾಗ್ಯೂ, ಅವರು ತಮ್ಮ ಫಾರ್ಮ್ ಅನ್ನು ಮರಳಿ ಪಡೆಯಲು ನೆಟ್ಸ್‌ನಲ್ಲಿ ಶ್ರಮಿಸುತ್ತಿದ್ದಾರೆ. ಆದರೆ ಕೆಲವೊಮ್ಮೆ ಹೆಚ್ಚು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಅವರು ಒಬ್ಬಂಟಿಯಾಗಿರಬೇಕು ಮತ್ತು ಬ್ಯಾಟ್ಸ್‌ಮನ್ ಆಗಿ ಅವರ ಹಿಂದಿನ ಯಶಸ್ಸನ್ನು ನೆನಪಿಸಿಕೊಳ್ಳಬೇಕು.”

ಅದರಲ್ಲೂ ಚಾಂಪಿಯನ್ಸ್​ ಟ್ರೋಫಿ ಹೊಸ್ತಿಲ್ಲಲ್ಲಿರುವ ಕಾರಣ ಅಷ್ಟರೊಳಗೆ ರೋಹಿತ್ ಫಾರ್ಮ್​ಗೆ ಮರಳಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಇದರ ನಡುವೆಯೇ, ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್​ ಕೋಚ್​ SANJAY BANGAR ರೋಹಿತ್​ ಶರ್ಮಾಗೆ ಪ್ರಮುಖ ಸಂದೇಶವೊಂದನ್ನು ನೀಡಿದ್ದಾರೆ.ಏತನ್ಮಧ್ಯೆ, ಭಾನುವಾರ (ನಾಳೆ) ಭಾರತ ಮತ್ತು ಇಂಗ್ಲೆಂಡ್​ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ.

ಈ ಪಂದ್ಯವನ್ನು ಒಡಿಶಾದ ಬಾರಾಬತಿ ಮೈದಾನದಲ್ಲಿ ಆಯೋಜಿಸಲಾಗಿದೆ. 6 ವರ್ಷಗಳ ಬಳಿಕ ಈ ಮೈದಾನದಲ್ಲಿ ಅಂತರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಈ ಮೈದಾನದಲ್ಲಿ ಭಾರತ ಹೆಚ್ಚಿನ ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ. ರೋಹಿತ್ ಶರ್ಮಾ ತಮ್ಮ ಕಳೆದು ಹೋಗಿರುವ ಫಾರ್ಮ್​ ಅನ್ನು ಮರಳಿ ಪಡೆಯಲು ತಾವಾಡಿರುವ ಹಿಂದಿನ ಪಂದ್ಯಗಳ ವೀಡಿಯೊಗಳನ್ನು ನೋಡಬೇಕು ಎಂದಿದ್ದಾರೆ.

ಹಿಂದಿನ ಬ್ಯಾಟಿಂಗ್ ವೀಡಿಯೊಗಳನ್ನು ನೋಡಲೇಬೇಕು. ಎಲ್ಲಿ ತಪ್ಪು ಮಾಡುತ್ತಿದ್ದೇವೆ ಎಂಬುದನ್ನು ಅರಿತುಕೊಂಡು ಸರಿಪಡಿಸಿಕೊಳ್ಳಬೇಕು. ಕೆಲವೊಮ್ಮೆ ಹೀಗೆ ಮಾಡುವುದರಿಂದ ಫಲಿತಾಂಶಗಳು ಸಿಗುತ್ತವೆ. ಒಮ್ಮೆ ನೀವು ಲಯವನ್ನು ಪಡೆದರೆ ಸಾಕು. ಆದರೆ ಹೆಚ್ಚು ಯೋಚಿಸಬೇಡಿ ಮತ್ತು ನಿರುತ್ಸಾಹಗೊಳ್ಳಬೇಡಿ ಎಂದು SANJAY BANGAR ಹೇಳಿದರು.

ಇದನ್ನು ಓದಿರಿ : Notice On Beef Biryani In AMU Hostel Stokes Controversy

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...