spot_img
spot_img

ಸಂಜೀವಿನಿ ಯೋಜನೆ : ಬಡ ಮಹಿಳೆಯರಿಗೆ ಸಹಾಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಲಕ್ಷ್ಮೇಶ್ವರ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಇರುವ ಮಹಿಳಾ ಗುಂಪುಗಳನ್ನು ರಚಿಸಿ
ಆರ್ಥಿಕ, ಸಾಮಾಜಿಕವಾಗಿ ಸಹಕಾರಿ ಆಗಲು ಗ್ರಾಮೀಣ ಜೀವನೋಪಾಯ ಇಲಾಖೆಯ ಸಂಜೀವಿನಿ ಯೋಜನೆ ಸಹಾಯ ಮಾಡುತ್ತಿದೆ.
ಸಂಜೀವಿನಿ ಯೋಜನೆಯಡಿ ತಾಲ್ಲೂಕಿನ ಶಿಗ್ಲಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡುತ್ತ ಜೀವನ ಸಾಗಿಸುತ್ತಿದ್ದ ನೇತ್ರಾವತಿ ಮಂಜುನಾಥ ಮಹೇಂದ್ರಕರ ಅವರು ಸಂಜೀವಿನಿ ಯೋಜನೆಯ ಮೂಲಕ ಯಶಸ್ಸು ಸಾಧಿಸಿದ್ದಾರೆ.
2017-18ನೇ ಸಾಲಿನಲ್ಲಿ ಗ್ರಾಮದ ತಮ್ಮ ಮನೆಯ ಅಕ್ಕ ಪಕ್ಕದ 10 ಮಹಿಳೆಯರು ಸೇರಿ ನೇತ್ರಾವತಿ ಮಹೇಂದ್ರಕರ ಅವರ ಮುಂದಾಳತ್ವ ಉಪಯೋಗಿಸಿ ಸಿಬ್ಬಂದಿ ಮಾರ್ಗದರ್ಶನದಲ್ಲಿ ಕೊಟ್ರೇಶ್ವರ ಮಹಿಳಾ ಸ್ವ-ಸಹಾಯ ಗುಂಪು ಕಟ್ಟಿದ್ದರು.
10 ಸಾವಿರ ಆಂತರಿಕ ಸಾಲ ಪಡೆದು ಒಂದು ಹೊಲಿಗೆ ಯಂತ್ರ ಖರೀದಿಸಿ ಬಟ್ಟೆಗಳನ್ನು ಹೊಲಿದು ಜೀವನ ನಡೆಸುತ್ತ ತಿಂಗಳಿಗೆ ₹1000-₹1200 ಆದಾಯ ಗಳಿಸುತ್ತಿದ್ದರು.
ನಂತರ ಗ್ರಾಮ ಪಂಚಾಯ್ತಿಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದ ಸಮುದಾಯ ಬಂಡವಾಳ ನಿಧಿಯ ಮೂಲಕ ಆರಂಭದಲ್ಲಿ ₹1.5 ಲಕ್ಷ ಸಾಲ ಪಡೆದು ಬಟ್ಟೆ ವ್ಯಾಪಾರ ಪ್ರಾರಂಭ ಮಾಡಿದರು.
ಶಿಗ್ಲಿ ಗ್ರಾಮ ಪಂಚಾಯ್ತಿಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆಯಾಗಿ 2021-22ನೇ ಸಾಲಿನಲ್ಲಿ ಆಯ್ಕೆ ಆಗುವ ಮೂಲಕ ಗ್ರಾಮದ ಬಡ ಮಹಿಳೆಯರಿಗೆ ಸ್ವ-ಸಹಾಯ ಗುಂಪು ರಚನೆ, ಉಳಿತಾಯ ಮನೋಭಾವ ಮೂಡಿಸುವ ಮೂಲಕ ಅವರಿಗೆ ಸಲಹೆ, ಮಾರ್ಗದರ್ಶ ನೀಡಿದರು.
ಸಂಜೀವಿನಿ ಯೋಜನೆ ಮೂಲಕ ಆರಂಭವಾದ ವ್ಯಾಪಾರ ಪ್ರಸ್ತುತ ಚಿಕ್ಕ ಮಕ್ಕಳ ಸಿದ್ದ ಉಡುಪುಗಳು ಮತ್ತು ಶಿಗ್ಲಿ ಸೀರೆ ಮಾರಾಟ ಮಾಡುವ ಮೂಲಕ ತಿಂಗಳಿಗೆ ₹18 ಸಾವಿರದಿಂದ ₹20 ಸಾವಿರ ಆದಾಯ ಗಳಿಸುವ ಮೂಲಕ ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.
ಸಂಜೀವಿನಿ ಯೋಜನೆ ಮೂಲಕ ಕಳೆದ ಜನವರಿ 26ರಂದು ಗಣರಾಜೊತ್ಸವ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯಿಂದ ಆಯ್ಕೆ ಆಗುವ ಮೂಲಕ ದೆಹಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆ ಎಂಬ ಹೆಗ್ಗಳಿಕೆಗೆ ನೇತ್ರಾವತಿ ಪಾತ್ರರಾಗಿದ್ದಾರೆ. ಸಂಜೀವಿನಿ ಯೋಜನೆಯಡಿ ಆಯೋಜಿಸುವ ಸ್ವ-ಸಹಾಯ ಸಂಘಗಳ ವಸ್ತುಪ್ರದರ್ಶನ ಮಾರಾಟ ಮೇಳದಲ್ಲಿ ಭಾಗಿಯಾಗಿ ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ನಂತರ ಸಧ್ಯ ಒಕ್ಕೂಟದಲ್ಲಿ 125 ಗುಂಪು ಇದ್ದು, ಸಾವಿರಾರು ಬಡ ಮಹಿಳೆಯರನ್ನು ಒಕ್ಕೂಟದ ವ್ಯಾಪ್ತಿಗೆ ಬರುವಂತೆ ಕಾರ್ಯನಿರ್ವಹಿಸಿದ್ದಾರೆ.
ಮಕ್ಕಳ ವಿವಿಧ ಸಿದ್ದ ಉಡುಪುಗಳನ್ನು ತಯಾರಿಸುವ ಮೂಲಕ ರಾಜ್ಯ ಮತ್ತು ಬೇರೆ ರಾಜ್ಯಗಳಿಗೆ ನಿರಂತರವಾಗಿ ಬಟ್ಟೆ ಸರಬರಾಜು ಮಾಡುತ್ತಾರೆ.
ಸಂಜೀವಿನಿ ಯೋಜನೆಯಡಿ ಬೃಹತ್ ಪ್ರಮಾಣದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳಲ್ಲಿ ರಾಜ್ಯದ ಬೆಳಗಾವಿ ಬೆಂಗಳೂರು ಮೈಸೂರು ಮುಂಬೈ ಮತ್ತು ದೆಹಲಿ ಸೇರಿದಂತೆ ತಮ್ಮ ಗಾರ್ಮೇಂಟ್ಸ್‌ನಲ್ಲಿ ಸಿದ್ಧಪಡಿಸಿದ ಮಕ್ಕಳ ವಿವಿಧ ಸಿದ್ದ ಉಡುಪುಗಳ ಮಾರಾಟ ಮಳಿಗೆಯಲ್ಲಿ ಉತ್ತಮ ಬೆಲೆಗೆ ಮಾರಾಟ ಮಾಡಿ ಉತ್ತಮ ಆದಾಯ ಪಡೆಯುತ್ತಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...