ಇಂದು ಮಂಡ್ಯ ನಗರದ ಶ್ರೀರಂಗಪಟ್ಟಣ ಸಂಪೂರ್ಣವಾಗಿ ಕೇಸರಿಮಯವಾಗಲಿದೆ. ಇಂದು ಶ್ರೀರಂಗಪಟ್ಟಣದಲ್ಲಿ ಹನುಮಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಶ್ರೀರಂಗನ ಸನ್ನಿಧಿ ಸಂಪೂರ್ಣ ಕೇಸರಿಮಯವಾಗಿದೆ. ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್ಗಳು ರಾರಾಜಿಸುತ್ತಿವೆ.
ಯಾತ್ರೆ ಸಾಗುವ ಪಟ್ಟಣದ ಮುಖ್ಯ ಬೀದಿಗೆ ಕೇಸರಿ ಬಂಟಿಂಗ್ಸ್ ಹಾಕಿ ಅಲಂಕಾರ ಮಾಡಲಾಗಿದೆ.
ಇನ್ನು ಪಟ್ಟಣ ಮೂಡಲಬಾಗಿಲು ಆಂಜನೇಯ ದೇಗುಲ ಪುನರ್ನಿರ್ಮಾಣ ಮಾಡುವುದು ಈ ಯಾತ್ರೆಯ ಸಂಕಲ್ಪವಾಗಿದ್ದು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಕಡೆ ಬಂದೋಬಸ್ತ್ ಮಾಡಿಕೊಂಡಿದೆ. ಎಲ್ಲೆಡೆಯೂ ಹೈ ಅಲರ್ಟ್ ಇದ್ದು.
ಈ ಸಂಕೀರ್ತನಾ ಯಾತ್ರೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಗಂಜಾಮ್ನ ಹನುಮ ದೇಗುಲದಿಂದ ರಂಗನಾಥ ದೇಗುಲದವರೆಗೂ 5 ಕಿಲೋ ಮೀಟ್ ಮಾರ್ಗದಲ್ಲಿ ಸಂಕೀರ್ತನಾ ಯಾತ್ರೆ ನಡೆಯಲಿದೆ.