spot_img

SAVADATTI YALLAM FAIR: ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಗೆ ಹುಬ್ಬಳ್ಳಿ, ನವಲಗುಂದದಿಂದ ವಿಶೇಷ ಬಸ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hubli News:

ಭಾರತ ಹುಣ್ಣಿಮೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿ YALLAM ನ ಗುಡ್ಡದಲ್ಲಿರುವ ರೇಣುಕಾ ದೇವಿ ಜಾತ್ರೆಯು ವೈಭವದಿಂದ ಜರುಗಲಿದೆ. ಫೆ. 12ರಂದು (ಬುಧವಾರ) ಹುಣ್ಣಿಮೆ ದಿನ ರಥೋತ್ಸವ ನಡೆಯಲಿದೆ. ಈ ಜಾತ್ರೆಗೆ ಹುಬ್ಬಳ್ಳಿ- ಧಾರವಾಡ ಅವಳಿನಗರ, ನವಲಗುಂದ ಹಾಗೂ ಸುತ್ತಮುತ್ತಲಿನ ಊರುಗಳು, ಅಕ್ಕ ಪಕ್ಕದ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.

ರಥೋತ್ಸವದ ಮುನ್ನಾ ದಿನಗಳಿಂದ ಆರಂಭವಾಗಿ ನಂತರದಲ್ಲಿ ದೇವಿಯ ವಾರದ ದಿನಗಳಾದ ಮಂಗಳವಾರ ಮತ್ತು ಶುಕ್ರವಾರಗದಂದು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರದ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ.ಬೆಳಗಾವಿ ಜಿಲ್ಲೆಯ ಸವದತ್ತಿ YALLAM ನ ಗುಡ್ಡದ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತರು ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ YALLAM ನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.

ರಾಮನಗೌಡರ ತಿಳಿಸಿದ್ದಾರೆ. ಇದಕ್ಕಾಗಿ 60 ಬಸ್​ಗಳು, 150 ಚಾಲಕರು – ನಿರ್ವಾಹಕರು, ಮೇಲ್ವಿಚಾರಣೆಗಾಗಿ 8 ಅಧಿಕಾರಿಗಳು ಹಾಗೂ 22 ಸಿಬ್ಬಂದಿಯನ್ನು ನಿಯೋಜಿಲಾಗಿದೆ. ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಭಕ್ತರಿಗೆ ಜಾತ್ರೆಗೆ ಹೋಗಿ ಬರಲು ಅನುಕೂಲವಾಗುವಂತೆ ಫೆ.9 ರಿಂದ 14 ರವರೆಗೆ ಹಾಗೂ ನಂತರದಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರಗಳಂದು ಫೆ.18, 21, 25 ಹಾಗೂ 28 ರಂದು ಹುಬ್ಬಳ್ಳಿ ಮತ್ತು ನವಲಗುಂದದಿಂದ YALLAM ನ ಗುಡ್ಡಕ್ಕೆ ನೇರವಾಗಿ ಜಾತ್ರೆ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಯ ನಿಮಿತ್ತ ಹುಬ್ಬಳ್ಳಿ ಮತ್ತು ನವಲಗುಂದದಿಂದ ವಿಶೇಷ ಬಸ್​ ವ್ಯವಸ್ಥೆ ಮಾಡಿದೆ.

Bus Departure Point and Route:ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುವ ಬಸ್​​ಗಳು ತಾರಿಹಾಳ ಬೈಪಾಸ್, ನರೇಂದ್ರ, ಧಾರವಾಡ, ಸವದತ್ತಿ ಮಾರ್ಗವಾಗಿ ಹೋಗುತ್ತವೆ.ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಜಾತ್ರೆ ವಿಶೇಷ ಬಸ್ಸುಗಳು ಹೊರಡುತ್ತವೆ.

ಹೊಸೂರು ಬಸ್ ನಿಲ್ದಾಣದಿಂದ ಹೊರಡುವ ಬಸ್​​ಗಳು ನವನಗರ, ಧಾರವಾಡ, ಸವದತ್ತಿ ಮಾರ್ಗವಾಗಿ ಸಂಚರಿಸುತ್ತವೆ.ನವಲಗುಂದ ಬಸ್ ನಿಲ್ದಾಣದಿಂದ ಹೊರಡುವ ಬಸ್​​ಗಳು ಗೊಬ್ಬರಗುಂಪಿ, ಅಳಗವಾಡಿ, ಹಂಚಿನಾಳ, ಹಿರೇಕುಂಬಿ ಮಾರ್ಗವಾಗಿ ಹೋಗುತ್ತವೆ.ಹೆಚ್ಚಿನ‌ ಮಾಹಿತಿಗಾಗಿ ಆಯಾ ಬಸ್ ನಿಲ್ದಾಣಗಳ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಹೊಸೂರು ಬಸ್ ನಿಲ್ದಾಣ: 7760991662 / 7760991685

ಗೋಕುಲ ರಸ್ತೆ ಬಸ್ ನಿಲ್ದಾಣ : 7760991682

ನವಲಗುಂದ : 9663299001

 

ಇದನ್ನು ಓದಿರಿ :India Developing Its Own AI Chip, Plans Generative AI Model With 18,693 GPUs

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...