spot_img
spot_img

ದೇಶದ ಸೆಮಿಕಂಡಕ್ಟರ್ ವಹಿವಾಟು : ವಾರ್ಷಿಕ 100 ಶತಕೋಟಿ ಡಾಲರ್

spot_img
spot_img

Share post:

ಬೆಂಗಳೂರು: ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಸ್ಥಳೀಯ ಬೇಡಿಕೆ ಹೆಚ್ಚಾಗುತ್ತಿದ್ದು, ಐದಾರು ವರ್ಷಗಳಲ್ಲಿ ದೇಶ ಈ ಕ್ಷೇತ್ರದಲ್ಲಿ ವಾರ್ಷಿಕವಾಗಿ 100 ಬಿಲಿಯನ್ ಡಾಲರ್ ವಹಿವಾಟು ನಡೆಸುವ ಹಂತ ಮುಟ್ಟಲಿದೆ ಎಂದು ಟಾಟಾ ಎಲೆಕ್ಟ್ರಾನಿಕ್ಸ್ ಉಪಾಧ್ಯಕ್ಷ ಮೂರ್ತಿ ದಸಾಕ ಹೇಳಿದರು.

ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ (ಬಿಟಿಎಸ್) ‘ಸೆಮಿಕಂಡಕ್ಟರ್ ಉತ್ಪಾದನೆ: ತಾಂತ್ರಿಕ ಮತ್ತು ವಾಣಿಜ್ಯಿಕ ಯಶಸ್ಸಿನ ದಾರಿ’ ಕುರಿತು ಗೋಷ್ಠಿ ನಡೆಸಲಾಯಿತು.

27ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ (ಬಿಟಿಎಸ್) ಏರ್ಪಡಿಸಿದ್ದ ‘ಸೆಮಿಕಂಡಕ್ಟರ್ ಉತ್ಪಾದನೆ: ತಾಂತ್ರಿಕ ಮತ್ತು ವಾಣಿಜ್ಯಿಕ ಯಶಸ್ಸಿನ ದಾರಿ’ ಗೋಷ್ಠಿಯಲ್ಲಿ ಮಾತನಾಡಿದ ಅವರು, ”ದೇಶವು 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯ ಗುರಿಯನ್ನು ಸಾಧಿಸಬೇಕೆಂದರೆ, ಸ್ಥಳೀಯವಾಗಿ ಸೆಮಿಕಂಡಕ್ಟರ್ ಉತ್ಪಾದನೆಗೆ ಒತ್ತು ಕೊಡಬೇಕು. ಇದಕ್ಕೆ ಬೇಕಾದ ಸಮರ್ಪಕ ಕಾರ್ಯ ಪರಿಸರವನ್ನು ನಾವು ಅಭಿವೃದ್ಧಿಪಡಿಸಬೇಕು. ಇದರಿಂದ ದೇಶವು ಸುಸ್ಥಿರ ಅಭಿವೃದ್ಧಿಯ ಕನಸನ್ನು ನನಸು ಮಾಡಿಕೊಳ್ಳಬಹುದು” ಎಂದು ಅಭಿಪ್ರಾಯಪಟ್ಟರು.

ಮೈಕ್ರಾನ್ ಟೆಕ್ನಾಲಜಿಯ ಹಿರಿಯ ನಿರ್ದೇಶಕ ಗೋಕುಲಕುಮಾರ್ ಮಾತನಾಡಿ, ”ಭಾರತವು ಈಗಾಗಲೇ ಸೆಮಿಕಂಡಕ್ಟರ್ ಉತ್ಪಾದನೆಗೆ ಧುಮುಕಿದೆ. ಇನ್ನು ಮುಂದೆ ಇದಕ್ಕೆ ತಕ್ಕ ಉತ್ತೇಜನ ಕೊಡುವುದು ಆಗತ್ಯವಾಗಿದೆ.

ಇದು ಸಾಧ್ಯವಾಗಬೇಕೆಂದರೆ, ದೇಶದಲ್ಲಿ ಇರುವ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಮತ್ತು ದಕ್ಷವಾದ ಮೂಲಸೌಕರ್ಯವನ್ನು ಸೃಷ್ಟಿಸಬೇಕು. ಭಾರತಕ್ಕೆ ಇದನ್ನು ಸಾಧಿಸುವ ಶಕ್ತಿ ಇದೆ” ಎಂದು ಪ್ರತಿಪಾದಿಸಿದರು.

”ಮಾರುಕಟ್ಟೆ ಮತ್ತು ಜಾಗತಿಕ ರಾಜಕಾರಣ ಎರಡೂ ಈಗ ಭಾರತಕ್ಕೆ ಅನುಕೂಲಕರವಾಗಿದ್ದು, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಈಗ ನಮ್ಮ ಸಮಯ ಕೂಡಿಬಂದಿದೆ ಎಂದು ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಡಾ.ಸೂರಜ್ ರಂಗರಾಜನ್ ಹೇಳಿದ್ದಾರೆ.

ಕಳೆದ 15 ವರ್ಷಗಳಲ್ಲಿ ಭಾರತವು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ತನ್ನ ಶಕ್ತಿ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಗಮನಾರ್ಹವಾಗಿ ಸುಧಾರಿಸಿಕೊಂಡಿದೆ. ಈಗ ಇದನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ” ಎಂದರು.

ಗೋಷ್ಠಿಯನ್ನು ನಿರ್ವಹಿಸಿದ ಲ್ಯಾಮ್ ರೀಸರ್ಚ್ ಉಪಾಧ್ಯಕ್ಷ ರಂಗೇಶ್ ರಾಘವನ್, ”ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಒಳ್ಳೆಯ ನೀತಿಗಳಿವೆ. ಆದರೆ ಖಾಸಗಿ ಉದ್ಯಮಿಗಳು ನಿಜಕ್ಕೂ ಏನು ಮಾಡುತ್ತಿದ್ದಾರೆ ಎನ್ನುವ ತಿಳಿವಳಿಕೆ ಸ್ಥಳೀಯ ಮಟ್ಟದಲ್ಲಿ ಹಲವು ಇಲಾಖೆಗಳಿಗೆ ಇರುವುದಿಲ್ಲ. ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಾಕಷ್ಟು ಮಾತನಾಡಲಾಗುತ್ತಿದೆ.

ಆದರೆ ಒಂದು ಗವಾಕ್ಷಿಯ ಹಿಂದೆ ಇನ್ನೂ 27 ಗವಾಕ್ಷಿಗಳಿವೆ. ಇದು ಉದ್ಯಮಿಗಳು ಎದುರಿಸುತ್ತಿರುವ ವಾಸ್ತವವಾಗಿದೆ. ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಬಂದರೆ ಮಾತ್ರ ಉದ್ಯಮಿಗಳಿಗೆ ಅನುಕೂಲವಾಗಲಿದೆ” ಎಂದು ಹೇಳಿದರು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...