spot_img
spot_img

SEVALAL MAHARAJ JAYANTI : ಪವಾಡ ಪುರುಷನ ಹೋರಾಟಗಳು ಹೇಗಿದ್ದವು ? ಭಾಯಗಡ್ ಇತಿಹಾಸ ಬಲ್ಲಿರಾ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Davangere News:

ಪವಾಡ ಪುರುಷ, ಬಂಜಾರ ಸಮಾಜದ ಆರಾಧ್ಯ ದೈವ ಸಂತ SEVALAL MAHARAJ JAYANTIಇಂದು. ಈ ಹಿನ್ನೆಲೆ ದಾವಣಗೆರೆಯಲ್ಲಿ ನಿನ್ನೆ ಬೃಹತ್​ ಕಾರ್ಯಕ್ರಮವೂ ನಡೆದಿದೆ. ಇತಂಹ ಮಹಾನ್ ಸಂತನ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ಸೇವಾಲಾಲ್ ಅವರ ಪವಿತ್ರ ಕ್ಷೇತ್ರದಲ್ಲಿ ನಿನ್ನೆ ಸಂಭ್ರಮ ಸಡಗರ ಮನೆ ಮಾಡಿತ್ತು. ಬಂಜಾರ ಸಮುದಾಯದ ಬಾಂಧವರು ಮಾಲೆ ಧರಿಸಿ ಪವಿತ್ರ ಸ್ಥಳ ಭಯಾಗಡ್ ಕಡೆ ಹೆಜ್ಜೆ ಹಾಕಿದರು. ಅಲ್ಲದೆ ಸಂತ ಸೇವಾಲಾಲ್ ಅವರ ಜನ್ಮಸ್ಥಳದಲ್ಲಿ ಎಲ್ಲಿ ನೋಡಿದರಲ್ಲಿ ಮಾಲಾಧಾರಿಗಳೇ ಕಾಣಸಿಗುತ್ತಿದ್ದರು.

ಭರತ ಖಂಡದ ಧಾರ್ಮಿಕ ರಾಯಭಾರಿ ಎಂದೇ ಹೆಸರಾಗಿದ್ದ ಸಂತ ಸೇವಾಲಾಲ್​ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು. ಸಂತ ಸೇವಾಲಾಲ್ ಮಹಾರಾಜರು, ಬಂಜಾರ ಸಮುದಾಯದ ಆರಾಧ್ಯ ದೈವ ಕೂಡ ಹೌದು, ಅವರು ಸಮಾಜದ ಪ್ರಗತಿಯಲ್ಲಿ ಧರ್ಮದ ಪಾತ್ರವನ್ನು ಒತ್ತಿ ಹೇಳಿದವರು.

ತಮ್ಮ ಪವಾಡ, ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನ ಮನದಲ್ಲಿ ಗುರುವಿನ ಸ್ಥಾನ ಪಡೆದವರು. SEVALAL MAHARAJ JAYANTI ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿ ಮಾತು ಹೇಳಿದ್ದರು.

Dispels the darkness of people:

SEVALAL MAHARAJ JAYANTI ಪವಾಡಗಳನ್ನು ಮಾಡುವ ಮುಖೇನಾ ಸೇವಾಲಾಲ್ ಜನರ ಮನಸ್ಸುಗಳಲ್ಲಿ ಮನೆ ಮಾಡಿದರು. ಹದಿನೆಂಟನೇ ಶತಮಾನದಲ್ಲಿ ಲಂಬಾಣಿ ಸಮಾಜದ ಜನರ ಹಕ್ಕಿಗಾಗಿ ಹೋರಾಟವನ್ನು ಮೈಗೂಡಿಸಿಕೊಂಡಿದ್ದರು.‌

ಅಂದಿನ ಹೈದರಾಬಾದ್​ನ ನಿಜಾಮರು ಹಾಗೂ ಮೈಸೂರು ಅರಸರೊಂದಿಗೆ ಹೋರಾಟ ಮಾಡಿದರು. ಲಂಬಾಣಿ ಸಮುದಾಯ ಜನ ಸಾವಿರಾರು ವರ್ಷಗಳಿಂದ ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಅವರನ್ನು ಮುಖ್ಯವಾಹಿನಿಗೆ ತರಲು ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನದ ಮಾರ್ಗ ತೋರಿದ ಕೀರ್ತಿ ಸೇವಾಲಾಲರಿಗೆ ಸಲ್ಲುತ್ತದೆ. ಅಲ್ಲದೆ ಇವರಿಗೆ ಮೋತಿವಾಳು ಸಮುದಾಯದ ಜನ ಕರೆಯುತ್ತಿದ್ದರು.

ಸಂತ ಸೇವಾಲಾಲ್ ಮಹಾರಾಜರು ಭೀಮ ನಾಯಕ್, ಧರ್ಮಿಣಿ ಯಾಡಿಯವರ ಪುತ್ರನಾಗಿ 15 ಫೆಬ್ರವರಿ 1739ರಲ್ಲಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನ ಕೊಪ್ಪದಲ್ಲಿ ಜನ್ಮ ತಾಳಿದರು. ಸಂತ ಸೇವಾಲಾಲ್​ರ ಜನ್ಮವಾದ ನಂತರ ಸೂರಗೊಂಡನ ಕೊಪ್ಪವನ್ನು ಭಾಯ್​ಗಢ ಎಂದು ನಾಮಕರಣ ಮಾಡಲಾಯಿತು.

Sewalal Unity in Maharashtra:

ಸೇವಾಲಾಲ್​ ಮಹಾರಾಜರು 1806ರ ಡಿಸೆಂಬರ್ 4ರಂದು ನಿಧನರಾದರು ಎಂದು ಹೇಳಲಾಗುತ್ತದೆ. ರುಹಿಗಢ್ (ಯವತ್ಮಾಲ್ ಜಿಲ್ಲೆ) ನಲ್ಲಿ ನಿಧನರಾದರು ಮತ್ತು ಈಗ ಮಹಾರಾಷ್ಟ್ರ ರಾಜ್ಯದಲ್ಲಿರುವ ವಾಶಿಮ್ ಜಿಲ್ಲೆಯ ಪೊಹರಗಢದಲ್ಲಿ ಸಮಾಧಿ ಮಾಡಲಾಗಿದೆ, ಜಗದಂಬಾ ದೇವಿಗೆ ಸಮರ್ಪಿತವಾದ ದೇವಾಲಯದ ಪಕ್ಕದಲ್ಲಿ ಅವರ ಸಮಾಧಿ ಇನ್ನೂ ನಿಂತಿದೆ.

Gift of pearl necklace from the Portuguese:

ಪೋರ್ಚುಗೀಸರಿಂದ ಮುತ್ತಿನ ಹಾರ ಕಾಣಿಕೆಯಾಗಿ ಪಡೆದಿದ್ದರು, ಆದ್ದರಿಂದ ಇವರಿಗೆ ಮೋತಿವಾಳೋ ಎಂಬ ಹೆಸರು ಬಂತು. ಮುಂಬೈಯನ ‘ಸ್ಮಿತ್ ಭಾವುಚಾ’ ಪ್ರದೇಶದಲ್ಲಿ ಪೋರ್ಚುಗೀಸರ ಹಡಗು ಪೇಚಿಗೆ ಸಿಲುಕಿತ್ತು.

ಆ ಹಡನ್ನು ಚಾಣಾಕ್ಷತನದಿಂದ ದಡ ಸೇರಿಸಿದ್ದರು. ಈ ಹಿನ್ನೆಲೆಯಲ್ಲಿ ಸೇವಾಲಾಲ್ ಮಹಾರಾಜರಿಗೆ ಪೋರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು.

The Nizam of Hyderabad bowed down to divine power:

ಸೇವಾಲಾಲ ಮಹಾರಾಜರ ದೈವೀ ಶಕ್ತಿಗೆ ಹೈದರಾಬಾದಿನ ನಿಜಾಮ ತಲೆ ಬಾಗಿದ್ದನ್ನು. ಅಲ್ಲದೇ ಅವರನ್ನು ಕರೆದು ಕಪ್ಪ ಕಾಣಿಕೆ ನೀಡಿದರು ಎಂಬ ಇತಿಹಾಸ ಇದೆ.

ಹೈದರಾಬಾದಿನ ಕೇಂದ್ರ ಸ್ಥಾನದಲ್ಲಿ ಅವರ ತಂಡ ನೆಲೆಯೂರಲು ಒಂದಿಷ್ಟು ಜಾಗವನ್ನು ಅರ್ಪಿಸುತ್ತಾನೆ. ಆ ಪ್ರದೇಶವನ್ನು ಈಗಲೂ ಬಂಜಾರಾ ಹಿಲ್ಸ್ ಎಂದು ಕರೆಯುತ್ತಾರೆ. ಇದು ಪ್ರಸಿದ್ದಿ ಪಡೆದ ಪ್ರೇಕ್ಷಣೀಯ ಸ್ಥಳ ಕೂಡ ಆಗಿದೆ ಎಂದು ಇತಿಹಾಸ ಸಾರುತ್ತದೆ.

Jayanti celebrations in Bhaigad:

ಬಂಜಾರ ಸಮುದಾಯದ ಪೋರಿಯರು ಲಂಬಾಣಿ ಉಡುಗೆ ತೊಟ್ಟು ಸಂಗೀತಕ್ಕೆ ಸಖತ್ ಹೆಜ್ಜೆ ಹಾಕಿದರು. ಸಂತ ಸೇವಾಲಾಲ್​ರ ದೇವಾಲಯದಲ್ಲಿ ಮೂರ್ತಿಗೆ ಸುಂದರವಾಗಿ ಅಲಂಕಾರ ಮಾಡಿದ್ದರು. ಪಾದಯಾತ್ರೆ ಮಾಡಿದ ಜನ ದೇವಾಲಯಕ್ಕೆ ಭೇಟಿ ನೀಡಿ ಸಂತರ ದರ್ಶನ ಪಡೆದು ಪುನೀತರಾದರು. ಇಂದು ಸಂತ ಸೇವಾಲಾಲ್ ಮಹಾರಾಜರ 286ನೇ ಜಯಂತಿ.

ಈ ಹಿನ್ನೆಲೆಯಲ್ಲಿ ನಿನ್ನೆಯೇ ಅವರ ಸಮುದಾಯದ ಜನ ಮಾಲೆ ಧರಿಸಿ ಭಯಾಗಡ್ ಕಡೆ ಹೆಜ್ಜೆ ಹಾಕಿದರು.‌ ದಾವಣಗೆರೆ ಜಿಲ್ಲಾಡಳಿತ ಬೃಹತ್ ಕಾರ್ಯಕ್ರಮ ಮಾಡಿ ಸಂತ ಸೇವಾಲಾಲ್​ರ ಜಯಂತೋತ್ಸವ ಮಾಡಿದರು. ಸಮಾಜ ಕಲ್ಯಾಣ ಸಚಿವ ಹೆಚ್​ಸಿ ಮಹಾದೇವಪ್ಪ, ಸತೀಶ್ ಜಾರಕಿಹೋಳಿ ಅವರು ಡಂಗುರ ಬಾರಿಸಿ, ದೀಪ ಬೆಳಗಿಸಿ ಜಯಂತಿಗೆ ಚಾಲನೆ ನೀಡಿದರು.

ಇದನ್ನು ಓದಿರಿ : Climate Change at the ET Global Business Summit

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

NARGIS FAKHRI MARRIAGE:ವರ ಟೋನಿ ಬಗ್ಗೆ ಇಲ್ಲಿದೆ ಮಾಹಿತಿ

  Nargis marriage news: ಸೂಪರ್​ ಹಿಟ್​ ರಾಕ್‌ಸ್ಟಾರ್, ಮೆ ತೇರಾ ಹೀರೋ ಮತ್ತು ಹೌಸ್‌ಫುಲ್ 3 ಚಿತ್ರಗಳಿಗೆ ಹೆಸರುವಾಸಿಯಾಗಿರುವ ಬಾಲಿವುಡ್ ನಟಿ ನರ್ಗಿಸ್ ಫಕ್ರಿ (Nargis...

THREE BUS EXPLOSION IN ISRAEL:ಉಗ್ರರ ಕೃತ್ಯದ ಶಂಕೆ, ವ್ಯಗ್ರಗೊಂಡ ಇಸ್ರೇಲ್

Bat Yam News: ಒಂದೂವರೆ ವರ್ಷಗಳ ಕಾಲ ನಡೆದ ಯುದ್ದದ ಬಳಿಕ ಕದನ ವಿರಾಮಕ್ಕೆ ಹಮಾಸ್​, ISRAEL​ ಒಪ್ಪಿದ್ದು, ಇದರ ಭಾಗವಾಗಿ ಹಸ್ತಾಂತರ ಪ್ರಕ್ರಿಯೆ ಕೂಡ...

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ....

CONTENT CREATORS KUMBH JOURNEY:1500 ಕಿ.ಮೀ ದೂರದ ಪ್ರಯಾಗ್ರಾಜ್ಗೆ ನಯಾಪೈಸೆ ಖರ್ಚಿಲ್ಲದೆ ತಲುಪಿದ ಕಂಟೆಂಟ್ ಕ್ರಿಯೇಟರ್!

New Delhi News: ಮಹಾರಾಷ್ಟ್ರದ ಕಂಟೆಂಟ್​ ಕ್ರಿಯೇಟರ್​ ದಿವ್ಯಾ ಫೋಫಾನಿ ಕುಂಭಮೇಳಕ್ಕೆ ತಾವು ಮುಂಬೈನಿಂದ ಬಂದ ರೀತಿ ಮತ್ತು ಹಾದಿಯ ನಡುವೆ ಜನರು ನೀಡಿದ ನೆರವನ್ನು...