spot_img
spot_img

SHIRUR PEOPLE FLOOD FEAR : 6 ತಿಂಗಳಾದ್ರೂ ನದಿಯಿಂದ ತೆರವಾಗದ ಗುಡ್ಡದ ಮಣ್ಣು

spot_img
spot_img

Share post:

Karwar (Northern Kannada) News:

ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಆರು ತಿಂಗಳಾದರೂ ರಸ್ತೆ ಮೇಲೆ ಬಿದ್ದ ಹಾಗೂ ನದಿಯ ಮಧ್ಯಭಾಗದಲ್ಲಿರುವ ಮಣ್ಣನ್ನು ಇನ್ನೂ ತೆರವುಗೊಳಿಸಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರಾದ ಸುಭಾಷ್ ಕಾರೇಬೈಲು ಮಾತನಾಡಿ, “ಘಟನೆ ನಡೆದು ಆರು ತಿಂಗಳು ಕಳೆದಿದೆ. ಗುಡ್ಡದ ಮಣ್ಣು ತೆರವು ಮಾಡುವ ಕಾರ್ಯ ಮಾತ್ರ ಯಾರೂ ಮಾಡುತ್ತಿಲ್ಲ.

ಹೆದ್ದಾರಿಯ ಒಂದು ರಸ್ತೆಯಲ್ಲಿದ್ದ ಮಣ್ಣು ತೆಗೆದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ಇನ್ನೊಂದು ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಣ್ಣಿದ್ದರೂ ತೆರವು ಮಾಡಿಲ್ಲ. ಇನ್ನೊಂದೆಡೆ, ನದಿಯ ಮಧ್ಯದಲ್ಲೂ ಸಹ ಸಾವಿರಾರು ಟನ್ ಮಣ್ಣು ಇದ್ದು, ಅದನ್ನೂ ಸಹ ತೆಗೆಯುವ ಕಾರ್ಯವಾಗಿಲ್ಲ. ಮುಂದಿನ ಮಳೆಗಾಲದ ವೇಳೆ ನದಿ ಮಧ್ಯದಲ್ಲಿ ಮಣ್ಣು ಇದ್ದರೆ ನದಿ ಸುತ್ತಮುತ್ತಲಿನ ಗ್ರಾಮಕ್ಕೆ ನೀರು ನುಗ್ಗಿ ಮತ್ತೆ ಸಮಸ್ಯೆಯಾಗುವ ಆತಂಕವಿದೆ” ಎಂದರು.

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದು ಬಿದ್ದ ಗುಡ್ಡ 11 ಜನರನ್ನು ಬಲಿ ಪಡೆದಿತ್ತು. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಅಗಲೀಕರಣದಿಂದಾಗಿ ಗುಡ್ಡ ಕುಸಿದು ಆರು ತಿಂಗಳಾದರೂ ರಸ್ತೆ ಮೇಲೆ ಬಿದ್ದ ಹಾಗೂ ನದಿ ಮಧ್ಯದಲ್ಲಿರುವ ಗುಡ್ಡದ ಮಣ್ಣನ್ನು ತೆರವು ಮಾಡಲು ಮುಂದಾಗದೇ ಇರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಣ್ಣ ನೀರಾವರಿ ಸಚಿವ ಭೋಸರಾಜು ಮಾತನಾಡಿ, “ಈ ಬಗ್ಗೆ ಕ್ಯಾಬಿನೆಟ್​​ನಲ್ಲಿ ಸಚಿವ ಕೃಷ್ಣಬೈರೇಗೌಡರ ಗಮನಕ್ಕೆ ತಂದು ನಂತರ ಈ ಬಗ್ಗೆ ನಿಮ್ಮೊಂದಿಗೆ ಮಾತನಾಡುತ್ತೇನೆ. ಏಕೆ ಮಣ್ಣು ತೆರವು ಮಾಡಲಿಲ್ಲ, ಏನಾಯ್ತು ಎಂಬುದರ ಬಗ್ಗೆ ಸ್ಪಷ್ಟನೆ ನೀಡುತ್ತೇನೆ” ಎಂದರು.

“ಗುಡ್ಡ ಕುಸಿತವಾದ ಸ್ಥಳ ಸರಿಪಡಿಸುವ ಕಾರ್ಯಕ್ಕೆ ಜಿಲ್ಲಾಡಳಿತವಾಗಲೀ, ಕಾಮಗಾರಿ ನಡೆಸುತ್ತಿರುವ ಐಆರ್​ಬಿ ಕಂಪನಿಯಾಗಲೀ ಮುಂದಾಗಿಲ್ಲ. ಮಣ್ಣು ಕುಸಿದ ಜಾಗದಲ್ಲಿ ಮತ್ತೆ ಮಣ್ಣು ಕುಸಿಯುವ ಹಂತದಲ್ಲಿದ್ದು, ಅಲ್ಲಿ ತಡೆಗೋಡೆ ನಿರ್ಮಿಸುವುದಾಗಲೀ ಅಥವಾ ಕುಸಿಯುವ ಹಂತದಲ್ಲಿರುವ ಮಣ್ಣನ್ನು ತೆಗೆಯುವುದಕ್ಕಾಗಲೀ ಯಾರೂ ಮುಂದಾಗಿಲ್ಲ. ಮುಂದಿನ ಮಳೆಗಾಲದ ವೇಳೆ ಮಳೆ ಹೆಚ್ಚಾದರೆ ಮತ್ತೆ ಕುಸಿಯುವ ಭೀತಿ ಇದೆ. ಒಂದೊಮ್ಮೆ ಹೆದ್ದಾರಿ ಮೇಲೆ ಮಣ್ಣು ಬಂದರೆ ವಾಹನ ಸವಾರರು ಅಪಾಯಕ್ಕೀಡಾಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಇದನ್ನು ಓದಿರಿ : YUVA UDAAN YOJANA : ಕಾಂಗ್ರೆಸ್ನಿಂದ ಇದೇ ಮೊದಲ ಸಲ ‘ಉಚಿತ’ವಲ್ಲದ ಭರವಸೆ ಘೋಷಣೆ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...