spot_img
spot_img

SHIRUR PEOPLE FLOOD FEAR : 6 ತಿಂಗಳಾದ್ರೂ ನದಿಯಿಂದ ತೆರವಾಗದ ಗುಡ್ಡದ ಮಣ್ಣು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Karwar (Northern Kannada) News:

ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿದು ಆರು ತಿಂಗಳಾದರೂ ರಸ್ತೆ ಮೇಲೆ ಬಿದ್ದ ಹಾಗೂ ನದಿಯ ಮಧ್ಯಭಾಗದಲ್ಲಿರುವ ಮಣ್ಣನ್ನು ಇನ್ನೂ ತೆರವುಗೊಳಿಸಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರಾದ ಸುಭಾಷ್ ಕಾರೇಬೈಲು ಮಾತನಾಡಿ, “ಘಟನೆ ನಡೆದು ಆರು ತಿಂಗಳು ಕಳೆದಿದೆ. ಗುಡ್ಡದ ಮಣ್ಣು ತೆರವು ಮಾಡುವ ಕಾರ್ಯ ಮಾತ್ರ ಯಾರೂ ಮಾಡುತ್ತಿಲ್ಲ.

ಹೆದ್ದಾರಿಯ ಒಂದು ರಸ್ತೆಯಲ್ಲಿದ್ದ ಮಣ್ಣು ತೆಗೆದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ ಇನ್ನೊಂದು ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಣ್ಣಿದ್ದರೂ ತೆರವು ಮಾಡಿಲ್ಲ. ಇನ್ನೊಂದೆಡೆ, ನದಿಯ ಮಧ್ಯದಲ್ಲೂ ಸಹ ಸಾವಿರಾರು ಟನ್ ಮಣ್ಣು ಇದ್ದು, ಅದನ್ನೂ ಸಹ ತೆಗೆಯುವ ಕಾರ್ಯವಾಗಿಲ್ಲ. ಮುಂದಿನ ಮಳೆಗಾಲದ ವೇಳೆ ನದಿ ಮಧ್ಯದಲ್ಲಿ ಮಣ್ಣು ಇದ್ದರೆ ನದಿ ಸುತ್ತಮುತ್ತಲಿನ ಗ್ರಾಮಕ್ಕೆ ನೀರು ನುಗ್ಗಿ ಮತ್ತೆ ಸಮಸ್ಯೆಯಾಗುವ ಆತಂಕವಿದೆ” ಎಂದರು.

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದು ಬಿದ್ದ ಗುಡ್ಡ 11 ಜನರನ್ನು ಬಲಿ ಪಡೆದಿತ್ತು. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಅಗಲೀಕರಣದಿಂದಾಗಿ ಗುಡ್ಡ ಕುಸಿದು ಆರು ತಿಂಗಳಾದರೂ ರಸ್ತೆ ಮೇಲೆ ಬಿದ್ದ ಹಾಗೂ ನದಿ ಮಧ್ಯದಲ್ಲಿರುವ ಗುಡ್ಡದ ಮಣ್ಣನ್ನು ತೆರವು ಮಾಡಲು ಮುಂದಾಗದೇ ಇರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಣ್ಣ ನೀರಾವರಿ ಸಚಿವ ಭೋಸರಾಜು ಮಾತನಾಡಿ, “ಈ ಬಗ್ಗೆ ಕ್ಯಾಬಿನೆಟ್​​ನಲ್ಲಿ ಸಚಿವ ಕೃಷ್ಣಬೈರೇಗೌಡರ ಗಮನಕ್ಕೆ ತಂದು ನಂತರ ಈ ಬಗ್ಗೆ ನಿಮ್ಮೊಂದಿಗೆ ಮಾತನಾಡುತ್ತೇನೆ. ಏಕೆ ಮಣ್ಣು ತೆರವು ಮಾಡಲಿಲ್ಲ, ಏನಾಯ್ತು ಎಂಬುದರ ಬಗ್ಗೆ ಸ್ಪಷ್ಟನೆ ನೀಡುತ್ತೇನೆ” ಎಂದರು.

“ಗುಡ್ಡ ಕುಸಿತವಾದ ಸ್ಥಳ ಸರಿಪಡಿಸುವ ಕಾರ್ಯಕ್ಕೆ ಜಿಲ್ಲಾಡಳಿತವಾಗಲೀ, ಕಾಮಗಾರಿ ನಡೆಸುತ್ತಿರುವ ಐಆರ್​ಬಿ ಕಂಪನಿಯಾಗಲೀ ಮುಂದಾಗಿಲ್ಲ. ಮಣ್ಣು ಕುಸಿದ ಜಾಗದಲ್ಲಿ ಮತ್ತೆ ಮಣ್ಣು ಕುಸಿಯುವ ಹಂತದಲ್ಲಿದ್ದು, ಅಲ್ಲಿ ತಡೆಗೋಡೆ ನಿರ್ಮಿಸುವುದಾಗಲೀ ಅಥವಾ ಕುಸಿಯುವ ಹಂತದಲ್ಲಿರುವ ಮಣ್ಣನ್ನು ತೆಗೆಯುವುದಕ್ಕಾಗಲೀ ಯಾರೂ ಮುಂದಾಗಿಲ್ಲ. ಮುಂದಿನ ಮಳೆಗಾಲದ ವೇಳೆ ಮಳೆ ಹೆಚ್ಚಾದರೆ ಮತ್ತೆ ಕುಸಿಯುವ ಭೀತಿ ಇದೆ. ಒಂದೊಮ್ಮೆ ಹೆದ್ದಾರಿ ಮೇಲೆ ಮಣ್ಣು ಬಂದರೆ ವಾಹನ ಸವಾರರು ಅಪಾಯಕ್ಕೀಡಾಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಇದನ್ನು ಓದಿರಿ : YUVA UDAAN YOJANA : ಕಾಂಗ್ರೆಸ್ನಿಂದ ಇದೇ ಮೊದಲ ಸಲ ‘ಉಚಿತ’ವಲ್ಲದ ಭರವಸೆ ಘೋಷಣೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...