spot_img
spot_img

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP (ಶಿಂಧೆ ಬಣ) ಘೋಷಿಸಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪಕ್ಷದ ನಾಯಕ, ಮಹಾರಾಷ್ಟ್ರ ಉಮ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಅವರು ಬರೆದ ಬೆಂಬಲ ಪತ್ರವನ್ನು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್ ಅವರಿಗೆ ಮಂಗಳವಾರ ಹಸ್ತಾಂತರಿಸಿತು.

ದೆಹಲಿ ಚುನಾವಣೆಯಲ್ಲಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿಂಧೆ ಬಣದ SHIVASENA SUPPORT TO BJP ಒಂದಾಗಿ ಕಣಕ್ಕಿಳಿಯಲು ನಿರ್ಧರಿಸಿವೆ.

ಚುನಾವಣೆಯಲ್ಲಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಸಕ್ರಿಯವಾಗಿ ಬೆಂಬಲಿಸಲು ದೆಹಲಿ ಶಿವಸೇನೆ ಘಟಕಕ್ಕೆ ಸೂಚಿಸಲಾಗಿದೆ. ಬಿಜೆಪಿ ಜೊತೆಗೆ ಹೊಂದಾಣಿಕೆ ಮತ್ತು ಪ್ರಚಾರದಲ್ಲಿ ಭಾಗವಹಿಸಲು ನಮ್ಮ ನಾಯಕರಿಗೆ ನಿರ್ದೇಶನ ನೀಡಿದ್ದಾಗಿ ಏಕನಾಥ್ ಶಿಂಧೆ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಅವಿಭಜಿತ ಶಿವಸೇನೆ ಪಕ್ಷವು, ಈ ಹಿಂದಿನ ದೆಹಲಿ ವಿಧಾನಸಭೆ ಚುನಾವಣೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ, ಚುನಾವಣಾ ಪ್ರಚಾರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರಲಿಲ್ಲ. ತಮ್ಮ ನಾಯಕತ್ವ ಅಡಿ SHIVASENA SUPPORT TO BJP ಬಾಳಾ ಠಾಕ್ರೆ ಅವರು ಪ್ರತಿಪಾದಿಸಿದ ‘ಹಿಂದುತ್ವ ಸಿದ್ಧಾಂತದ ದೀವಟಿಗೆ’.

ಈ ಪರಂಪರೆಯನ್ನು ಮುಂದುವರಿಸಿಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್​ಡಿಎ) ಸಕ್ರಿಯ ಮತ್ತು ಹೆಮ್ಮೆಯ ಸದಸ್ಯನಾಗಿರಲಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯು ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. 2022 ರಲ್ಲಿ SHIVASENA SUPPORT TO BJPವಿಭಜನೆಯಾಗಿ, ಶಿಂಧೆ ಬಣದ ಪರ ಬಹುಪಾಲು ಸಂಸದರು ಮತ್ತು ಶಾಸಕರು ಗುರುತಿಸಿಕೊಂಡರು. ನಂತರ, ಚುನಾವಣಾ ಆಯೋಗವು ಇದೇ ಬಣವನ್ನು ನಿಜವಾದ ಶಿವಸೇನೆ ಪಕ್ಷ ಎಂದು ಗುರುತಿಸಿತು.

ಇದನ್ನು ಓದಿರಿ : HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

WhatsApp Group Join Now
Telegram Group Join Now
Instagram Account Follow Now
Previous article
SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ ವಿದ್ಯುತ್ ಪೂರೈಸಲು ಲಿಂಗನಮಕ್ಕಿ ಜಲಾಶಯ ಕಟ್ಟಿದ್ದರಿಂದ ನಡುಗಡ್ಡೆ ಸೃಷ್ಟಿಯಾಯಿತು. ಕಳೆದ 7 ದಶಕಗಳಿಂದ ಈ ಭಾಗದ ಜನ ದ್ವೀಪದಲ್ಲಿಯೇ ಬದುಕು ಸಾಗಿಸಿದ್ದಾರೆ. ಈ ಭಾಗದ ಜನ ತಮ್ಮ ಮಕ್ಕಳು ವಿದ್ಯಾವಂತರಾಗಬೇಕು ಎಂದು ಅನಿವಾರ್ಯವಾಗಿ ಸಣ್ಣ ವಯಸ್ಸಿನಲ್ಲಿಯೇ ತಮ್ಮ ಮಕ್ಕಳನ್ನು ಹಾಸ್ಟೆಲ್ ಸೇರಿಸಿ ಓದಿಸಿದ್ದಾರೆ. ಈ ಸೇತುವೆ ನಿರ್ಮಾಣದಿಂದ ದ್ವೀಪದ ಜನತೆಗೆ ವೈದ್ಯಕೀಯ ಸೇವೆ, ಶಾಲಾ – ಕಾಲೇಜಿಗೆ ಹೋಗಲು ತುಂಬಾ ಅನುಕೂಲವಾಗುತ್ತದೆ. ಈಗ ಲಾಂಚ್ ಸೇವೆಯು ಬೆಳಗ್ಗೆಯಿಂದ ಸಂಜೆ ತನಕ ಮಾತ್ರ ಲಭ್ಯವಿದೆ. ತುರ್ತು ವೈದ್ಯಕೀಯ ಸೇವೆ ಬೇಕು ಅಂದಾಗ ದ್ವೀಪದಿಂದ ಸುಮಾರು 60 ಕಿ.ಮಿ ದೂರು ಇರುವ ತಾಳಗುಪ್ಪದಿಂದ ಸಾಗರಕ್ಕೆ ಬರಬೇಕಾಗುತ್ತದೆ. ಸೇತುವೆ ನಿರ್ಮಾಣವಾದರೆ ಭಾಗದ ಜನರ ಸಮಸ್ಯೆಗಳಿಗೆ ಪೂರ್ಣವಿರಾಮ ಇಟ್ಟಂತಾಗುತ್ತದೆ. ಮಲೆನಾಡು ಹಾಗೂ ಕರಾವಳಿ ಭಾಗವನ್ನು ಬೆಸೆಯುವ ಬಹು ನಿರೀಕ್ಷಿತ ‘ಸಿಗಂದೂರು ಸೇತುವೆ’ ಎಲ್ಲವೂ ಅಂದು ಕೊಂಡಂತೆ ಆದರೆ ಇದೇ ವರ್ಷದ ಏಪ್ರಿಲ್ ಅಥವಾ ಮೇನಲ್ಲಿ ಲೋಕಾರ್ಪಣೆಯಾಗಲಿದೆ. ಈ ಸೇತುವೆಯು ಶಿವಮೊಗ್ಗ ಜಿಲ್ಲೆಯಿಂದ ಉಡುಪಿ ಜಿಲ್ಲೆಯ ಕೊಲ್ಲೂರು ಭಾಗಕ್ಕೆ ಸಂಪರ್ಕ ಕಲ್ಪಿಸಲಿದೆ. ಅಲ್ಲದೇ, ಶರಾವತಿ ಹಿನ್ನೀರಿನ ದ್ವೀಪ ಪ್ರದೇಶದ ಜನರಿಗೆ ಸಾಗರ ಸೇರಿದಂತೆ ಶಿವಮೊಗ್ಗ ಭಾಗಕ್ಕೆ ಸಂಪರ್ಕಕ್ಕೆ ಅನುಕೂಲವಾಗಲಿದೆ. 2010ರಲ್ಲಿ ಶರಾವತಿ ಹಿನ್ನೀರಿಗೆ ಸೇತುವೆ ನಿರ್ಮಾಣಕ್ಕೆ ಪ್ರಯತ್ನ ನಡೆಸಲಾಗಿತ್ತು. ಅಲ್ಲದೇ ಇದು ಜಿಲ್ಲಾ ಮುಖ್ಯ ರಸ್ತೆ ಆಗಿತ್ತು, ಜೊತೆಗೆ ವನ್ಯಜೀವಿ ಅರಣ್ಯ ಪ್ರದೇಶವಾಗಿದ್ದ ಕಾರಣ ಸೇತುವೆ ನಿರ್ಮಾಣಕ್ಕೆ ಸಾಧ್ಯವಾಗಿರಲಿಲ್ಲ. ಈ ರಸ್ತೆಯ ಮೂಲಕ ಸಿಗಂದೂರು ಹಾಗೂ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಜಿಲ್ಲಾ ಮುಖ್ಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ, ಕೇಂದ್ರದ ವನ್ಯಜೀವಿ ಮಂಡಳಿಯಿಂದ ರಸ್ತೆ ನಿರ್ಮಾಣಕ್ಕೆ ಅನುಮತಿ ಪಡೆದು ಸೇತುವೆ ನಿರ್ಮಾಣ ಕಾಮಗಾರಿ ಶುರು ಮಾಡಲಾಯಿತು. What are the Bridge Features: 1) ಸೇತುವೆ ನಿರ್ಮಾಣಕ್ಕೆ 423.15 ಕೋಟಿ ರೂ ವೆಚ್ಚ 2) 2.14 ಕಿ.ಮೀ ಸೇತುವೆ ಉದ್ದ 3) 16 ಮೀಟರ್ ಅಗಲದ ದ್ವಿಪಥ ಸೇತುವೆ 4) ಸ್ಪ್ಯಾನ್ ಲೆನ್ತ್ 177 ಮೀಟರ್ ಇದೆ 5) ಕೇಬಲ್ ಆಧಾರಿತ ಭಾರತದ 7ನೇ ಸೇತುವೆ ಇದಾಗಿದೆ 6) 16 ಮೀಟರ್ ಅಗಲದ ಸೇತುವೆಯಲ್ಲಿ 1.5 ಮೀಟರ್ ಅಗಲದ ಎರಡು ಕಡೆ ಫುಟ್ಪಾತ್ ಇರಲಿದೆ. “ಜಿಲ್ಲಾ ಮುಖ್ಯ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಇಲ್ಲಿ ಸೇತುವೆ ನಿರ್ಮಾಣವನ್ನು ಸುಮಾರು 500 ಅಡಿ ಅಳದಿಂದ ಪ್ರಾರಂಭ ಮಾಡಬೇಕಿತ್ತು. ಶರಾವತಿ ಹಿನ್ನೀರಿನ ಜನತೆಗೆ ಓಡಾಡಲು ಅನುಕೂಲ ಮಾಡಿಕೊಡಲು ಮತ್ತು ಸಿಗಂದೂರು ಹಾಗೂ ಕೊಲ್ಲೂರಿಗೆ ಸಂಪರ್ಕ ಕಲ್ಪಿಸಬೇಕು ಎಂಬ ಉದ್ದೇಶದಿಂದ ಅಂದಿನ ಸಿಎಂ ಯಡಿಯೂರಪ್ಪ, ಸಂಸದರಾದ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರ ಆಸೆಯಂತೆ, 2019 ರಲ್ಲಿ ಸೇತುವೆ ಕಾಮಗಾರಿ ಪ್ರಾರಂಭಿಸಲಾಯಿತು. ಇದಕ್ಕಾಗಿ ಕೇಂದ್ರ ಸಾರಿಗೆ ಇಲಾಖೆಯು 423.15 ಕೋಟಿ ರೂ ಟೆಂಡರ್ ಕಾಮಗಾರಿ ನಡೆಸಲಾಗುತ್ತಿದೆ” ಎಂದು ತಿಳಿಸಿದರು. ಸಿಗಂದೂರು ಸೇತುವೆಯ ಉಸ್ತುವಾರಿ ಅಧಿಕಾರಿ ಪೀರ್ ಪಾಷಾ ಮಾತನಾಡಿ, “ಸಿಗಂದೂರು ಸೇತುವೆ ನಿರ್ಮಾಣಕ್ಕೆ 2019ರಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಸೇತುವೆಯ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದ್ದು, ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ” ಎಂದು ಹೇಳಿದರು. “ಕೋವಿಡ್ನಿಂದ ಮತ್ತು ಫೈಲ್ ಕ್ಯಾಪ್ ಅಳಡಿಸಲು ಹಾಗೂ ಸಾಮಗ್ರಿ ಸಾಗಿಸಲು ನೀರಿನ ಪ್ರಮಾಣ ಹೆಚ್ಚಳ ಹಾಗೂ ಕಡಿಮೆ ಆಗುತ್ತಿದ್ದ ಕಾರಣಕ್ಕೆ ಕಾಮಗಾರಿಯು ತಡವಾಗಿ ಮುಕ್ತಾಯವಾಗುತ್ತಿದೆ. ಸೇತುವೆ ನಿರ್ಮಾಣಕ್ಕೆ 604 ಸೆಗ್ಮೆಂಟ್ ಎರೆಕ್ಷನ್ ಮಾಡಬೇಕಿತ್ತು. ಸೆಗ್ಮೆಂಟ್ ಬಾಕ್ಸ್ ಕಾರಿಡಾರ್ ಅಂತಾರೆ. ಈ ಸೇತುವೆಗೆ, ಎಕ್ಸ್ಟ್ರಾಡೋಸ್ಡ್ ಕೇಬಲ್ ಕಂ ಸಿಗ್ಮೆಟ್ ಬಾಕ್ಸ್ ಕಾರಿಡಾರ್ ಕಂ ಬ್ರಿಡ್ಜ್ ಅಂತ ಕರೆಯಲಾಗುತ್ತದೆ. 604ರಲ್ಲಿ 540 ಜೋಡಿಸಲಾಗಿದೆ. 60 ಸಗ್ಮೆಂಟ್ ಜೋಡಿಸಬೇಕಿದೆ. ಸಗ್ಮೆಂಟ್ ಫೆಬ್ರವರಿಯಲ್ಲಿ ಮುಕ್ತಾಯವಾಗಲಿದೆ. ನಂತರ ಕೇಬಲ್ ಅಳವಡಿಕೆ ಹಾಗೂ ರಸ್ತೆಗೆ ಡಾಂಬರೀಕರಣ ಮಾಡುವ ಕಾಮಗಾರಿ ಹಾಗೂ ಸುರಕ್ಷತೆ ಕೆಲಸ ಮಾಡಲು ಒಂದೂವರೆ ತಿಂಗಳು ಬೇಕಾಗುತ್ತದೆ. ಇದೇ ವೇಗದಲ್ಲಿ ಕಾಮಗಾರಿ ಪೂರ್ಣಗೊಂಡರೆ, ಏಪ್ರಿಲ್ನಲ್ಲಿ ಉದ್ಘಾಟನೆ ಆಗಬಹುದಾಗಿದೆ. ಇದು ದೇಶದ ಏಳನೇ ಕೇಬಲ್ ಸೇತುವೆ ಆಗಲಿದೆ” ಎಂದು ಮಾಹಿತಿ ನೀಡಿದರು. A bridge is very necessary: ತುಮರಿ ನಿವಾಸಿಯಾದ ಮಧು ಕುಮಾರ್ ಮಾತನಾಡಿ, “ಸ್ಥಳೀಯರಿಗೆ ಸೇತುವೆ ತುಂಬಾ ಅನುಕೂಲವಾಗುತ್ತದೆ. ಈಗ ತುರ್ತು ಪರಿಸ್ಥಿತಿಯಲ್ಲಿ ಲಾಂಚ್ ಬೇಕೆಂದರೆ ಸಿಗಲ್ಲ, ಕಾರಣ ಲಾಂಚ್ ಎರಡು ಇದ್ದರೂ ಸಹ ಒಂದು ಲಾಂಚ್ ಒಂದು ಕಡೆಯಿಂದ ಮತ್ತೊಂದು ಇನ್ನೂಂದು ಕಡೆ ಹೋಗಲು ಕನಿಷ್ಠ 30 ನಿಮಿಷ ಬೇಕು. ಅಲ್ಲದೇ ಲಾಂಚ್ ವಾಪಸ್ ಬರಲು ಸಹ ಸಮಯ ಬೇಕಾಗುತ್ತದೆ. ತುರ್ತಾಗಿ ಹೋಗಲು ಇಲ್ಲಿ ಆಗಲ್ಲ. ಮುಖ್ಯವಾಗಿ ವಿದ್ಯಾರ್ಥಿಗಳು ಬೆಳಗಿನ ಲಾಂಚ್ ಮಿಸ್ ಮಾಡಿಕೊಂಡರೆ, ಅವರಿಗೆ ಸಾಗರಕ್ಕೆ ಹೋಗಲು ಕನಿಷ್ಠ ಒಂದು ಗಂಟೆ ತಡವಾಗುತ್ತದೆ. ಇದರಿಂದ ಈ ಸೇತುವೆ ಈ ಭಾಗದ ಜನರಿಗೆ ಅವಶ್ಯಕವಾಗಿದೆ” ಎಂದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಾರುತಿ ಸೇತುವೆ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, “ಈಗ ಲಾಂಚ್ ವ್ಯವಸ್ಥೆ ಇದೆ. ಆದರೆ ಲಾಂಚ್ಗೆ ಕಾಯಬೇಕಾಗುತ್ತದೆ. ಇದರಿಂದ ಸಮಯ ವ್ಯರ್ಥವಾಗುತ್ತದೆ. ಅದೇ ಬ್ರಿಡ್ಜ್ ಆದರೆ ಯಾವ ಸಮಯದಲ್ಲಿ ಬೇಕಾದರೂ ಸಹ ಬಂದು ಹೋಗಬಹುದು. ಇದರಿಂದ ನಮ್ಮ ಸಮಯ ಉಳಿದಂತಾಗುತ್ತದೆ” ಎಂದು ಹೇಳಿದರು. “1950ರಲ್ಲಿ ತಾಳಗುಪ್ಪದಲ್ಲಿ ಸೇತುವೆ ಸಂಬಂಧ ನಡೆದ ಸಭೆಯಲ್ಲಿ ಈ ಭಾಗದ ಹಿರಿಯರು ಸೇತುವೆ ಆದರೆ ಕಳ್ಳರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಹೇಳಿ ಸೇತುವೆ ಬೇಡ ಎಂದು ಬರೆದುಕೊಟ್ಟಿದ್ದರಂತೆ. ಆದರೆ, ಈಗ ಸೇತುವೆ ಆಗುತ್ತಿದೆ. ಸೇತುವೆ ಆದರೆ ಅರ್ಧ ನೋವಿದೆ. ಅರ್ಧ ಖುಷಿ ಇದೆ. ಲಾಂಚ್ ಪ್ರವಾಸಿಗರಿಗೆ ಆಕರ್ಷಣೆ ಆಗಿತ್ತು. ಆದರೆ, ಸೇತುವೆ ನಿರ್ಮಾಣವಾದ ನಂತರ ಅದನ್ನು ತೆಗೆಯುತ್ತಾರೆ ಎಂಬ ನೋವಿದೆ. ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗಾಗಿ ಒಂದು ಲಾಂಚ್ ಇರಲಿ ಎಂದು ನಾವು ಪತ್ರ ಬರೆದಿದ್ದೇವೆ” ಎಂದು ತಿಳಿಸಿದರು. ಕೊಳೂರು ಗ್ರಾಮ ಪಂಚಾಯಿತಿಯ ಜಯಂತ್ ಮಾತನಾಡಿ, “ಸೇತುವೆಯಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಎಲ್ಲರೂ ಭಾವಿಸಿದ್ದಾರೆ. ಲಾಡ್ಜ್, ಹೋಂ ಸ್ಟೇ, ಬೀದಿ ಬದಿ ಅಂಗಡಿ ಮಾಡಿಕೊಂಡವರಿಗೆ ಹಾಗೂ ಟ್ಯಾಕ್ಸಿ ನಡೆಸುವವರಿಗೆ ಇದರಿಂದ ತುಂಬಾ ಸಮಸ್ಯೆಯಾಗಲಿದೆ. ಈಗ ಸಂಜೆ ಆಯ್ತು ಅಂದ್ರೆ ಲಾಂಚ್ ಇಲ್ಲ ಅಂತ ಈ ಭಾಗದ ಯುವಕರು ರಾತ್ರಿ ಆಗುತ್ತಲೇ ತಮ್ಮ ತಮ್ಮ ಗ್ರಾಮವನ್ನು ಸೇರಿಕೊಳ್ಳುತ್ತಿದ್ದಾರೆ. ಆದರೆ ಸೇತುವೆಯಾದರೆ ಯುವಕರು ದಾರಿ ತಪ್ಪುವ ಸಾಧ್ಯತೆಗಳಿವೆ” ಎಂದು ಕಳವಳ ವ್ಯಕ್ತಪಡಿಸಿದರು.
Next article
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...

THE BEAST CAR : ಡೇಟೋನಾ 500 ಮೋಟಾರ್ ರೇಸ್ಗೆ ಜೀವಕಳೆ ತುಂಬಿದ ಟ್ರಂಪ್ ಕಾರ್

The Beast Car : ಅಮೆರಿಕದ ಅಧ್ಯಕ್ಷರ THE BEAST CAR​ ರೇಸ್​ವೊಂದರ ಲ್ಯಾಪ್​ನಲ್ಲಿ ಭಾಗವಹಿಸಿ ಪ್ರೇಕ್ಷಕರನ್ನು ಹುರಿದುಂಬಿಸಿತು. ಏರ್ ಫೋರ್ಸ್ ಒನ್ ವಿಮಾನ ರೇಸಿಂಗ್...

ANCIENT CIVILISATION : ಚೌಪಾರನ್ನಲ್ಲಿ 2500 ವರ್ಷ ಹಳೆಯ ನಾಗರಿಕತೆಯ ಕುರುಹುಗಳು ಪತ್ತೆ

Ranchi News: ಜಾರ್ಖಂಡ್​ನ ಚೌಪಾರನ್​ನಲ್ಲಿ ANCIENT CIVILISATION ಅವಶೇಷಗಳು ಪತ್ತೆಯಾಗಿವೆ. ಕ್ರಿ.ಪೂ 300 ರಿಂದ 100 ರ ಹಿಂದಿನ ನಾಗರಿಕತೆಗಳಿಗೆ ಸಂಬಂಧಿಸಿದ ಒಂದು ರೀತಿಯ ಕಪ್ಪು-ಮೆರುಗುಗೊಳಿಸಿದ...